AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ 50% ರಿಯಾಯಿತಿ: ಇಲಾಖೆ ಆಫರ್ ಬಳಸಿಕೊಂಡು ದಂಡ ಕಟ್ಟಿದ ಶಾಸಕ ಎಲ್.ನಾಗೇಂದ್ರ

ಸಂಚಾರಿ ನಿಯಮ ಉಲ್ಲಂಘಿಸಿದ್ದವರಿಗೆ ದಂಡ ಪಾವತಿಸಲು ವಾಹನ ಸವಾರರಿಗೆ ಶೇ.50ರಷ್ಟು ರಿಯಾಯ್ತಿ ನೀಡಲಾಗಿದೆ. ಇಲಾಖೆ ಆಫರ್ ಬಳಸಿಕೊಂಡು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್.ನಾಗೇಂದ್ರ ದಂಡ ಕಟ್ಟಿದ್ದಾರೆ.

ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ 50% ರಿಯಾಯಿತಿ: ಇಲಾಖೆ ಆಫರ್ ಬಳಸಿಕೊಂಡು ದಂಡ ಕಟ್ಟಿದ ಶಾಸಕ ಎಲ್.ನಾಗೇಂದ್ರ
ಇಲಾಖೆ ಆಫರ್ ಬಳಸಿಕೊಂಡು ದಂಡ ಕಟ್ಟಿದ ಶಾಸಕ ಎಲ್.ನಾಗೇಂದ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 04, 2023 | 2:42 PM

Share

ಮೈಸೂರು: ಸಂಚಾರಿ ನಿಯಮ ಉಲ್ಲಂಘಿಸಿದ್ದವರಿಗೆ ದಂಡ ಪಾವತಿಸಲು (Traffic Fine) ವಾಹನ ಸವಾರರಿಗೆ ಶೇ.50ರಷ್ಟು ರಿಯಾಯ್ತಿ ನೀಡಲಾಗಿದೆ. ಇಲಾಖೆ ಆಫರ್ ಬಳಸಿಕೊಂಡು ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್.ನಾಗೇಂದ್ರ (L Nagendra) ದಂಡ ಕಟ್ಟಿದ್ದಾರೆ. ವೇಗವಾಗಿ ಕಾರು ಚಾಲನೆಗೆ 7 ಸಾವಿರ ರೂ. ದಂಡ ಪಾವತಿಸಬೇಕಿತ್ತು. ಆದರೆ 50% ರಿಯಾಯ್ತಿಯಲ್ಲಿ 3,500 ರೂ. ಪಾವತಿಸಿ ರಶೀದಿ ಪಡೆದುಕೊಂಡಿದ್ದಾರೆ. ಮೈಸೂರಿನ ಮೆಟ್ರೋಪೋಲ್ ವೃತ್ತದಲ್ಲಿ ಎಲ್.ನಾಗೇಂದ್ರ ಅವರು ದಂಡ ಕಟ್ಟಿದ್ದಾರೆ.

ಒಂದೇ ದಿನ ಹರಿದು ಬಂತು ಕೋಟಿ ಕೋಟಿ ಹಣ

ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ 50 ರಷ್ಟು ರಿಯಾಯಿತಿ ನೀಡಿದ ಮೇಲೆ ನಿನ್ನೆ (ಫೆ.3) ಒಂದೇ ದಿನ ಕೋಟಿ ಕೋಟಿ ಹಣ ಹರಿದು ಬಂದಿದೆ. ನಿನ್ನೆ 5 ಕೋಟಿ 61 ಲಕ್ಷದ 55 ಸಾವಿರ ದಂಡದ ಹಣ ಸಂಗ್ರಹವಾಗಿದೆ. ಒಟ್ಟು 2 ಲಕ್ಷ 1 ಸಾವಿರದ 828 ಪ್ರಕರಣಗಳ ದಂಡ ಪಾವತಿಯಾಗಿದೆ. ಪೊಲೀಸ್ ಠಾಣೆಗಳಲ್ಲಿ 89,699 ಪ್ರಕರಣಗಳಿಂದ 2,17,24,990 ಕೋಟಿ ರೂ, ಪೇ ಟಿಎಂ ಮೂಲಕ 1,04,273 ಪ್ರಕರಣದಿಂದ 3, 23,68,900 ಕೋಟಿ, ಸಂಚಾರ ನಿರ್ವಹಣಾ ಕೆಂದ್ರದಲ್ಲಿ‌ 540 ಪ್ರಕರಣ ದಂಡ ಪಾವತಿಯಾಗಿದ್ದು 89,650 ರೂ ಮತ್ತು ಬೆಂಗಳೂರು ಒನ್​ನಲ್ಲಿ 7,316 ಪ್ರಕರಣದಿಂದ 16,21,600 ರೂ‌ ದಂಡ ಸಂಗ್ರಹವಾಗಿದೆ.

ಇದನ್ನೂ ಓದಿ: ಟ್ರಾಫಿಕ್ ರೂಲ್ಸ್ ಉಲ್ಲಂಘನೆ ದಂಡ ರಿಯಾಯಿತಿ: 50% ಆಫರ್ ಸಿಕ್ಕಿದ್ದೇ ತಡ ದಂಡ ಪಾವತಿಗೆ ಮುಗಿಬಿದ್ದ ವಾಹನ ಸವಾರರು

ಬಾಕಿ ಇರುವ ದಂಡದ ವಿವರಗಳನ್ನು ವೀಕ್ಷಿಸುವ ಮತ್ತು ಪಾವತಿಸುವ ವಿಧಾನ

1. ಕರ್ನಾಟಕ ಓನ್​​ ವೆಬ್​ಸೈಟ್​​ನಲ್ಲಿ ವಿವರಗಳನ್ನು ಪಡೆದುಪಾವತಿಸಬಹುದಾಗಿದೆ.

2. ಪೇ ಟಿಎಂ ಆ್ಯಪ್​ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.

3. ಹತ್ತಿರ ಸಂಚಾರ ಪೊಲೀಸ್​ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದಾಗಿರುತ್ತದೆ. ದಂಡದ ಮೊತ್ತವನ್ನು ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.

4. ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ಪಾವತಿಸಬಹುದಾಗಿದೆ. ಈ ನಿಯಮ 11-02-2023 ವರಗೆ ಮಾತ್ರ ಅನ್ವಯವಾಗುತ್ತದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸ್​​ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನಿಯಮ ಉಲ್ಲಂಘಿಸಿದರೆ ಪ್ರತಿ ಸಿಗ್ನಲ್​ನಲ್ಲೂ ದಂಡ ಕಟ್ಟಬೇಕಾದೀತು ಹುಷಾರ್​..! 

ನಗರದಲ್ಲಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಹೋಗುವವರ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲೂ ದ್ವಿಚಕ್ರ ವಾಹನ ಸವಾರರು, ಆಕಡೆ ಈಕಡೆ ನೋಡಿ ಪೊಲೀಸರು ಇಲ್ಲಾ ಎಂದು ಖಚಿತವಾಗುತ್ತಿದ್ದಂತೆ ಹೆಲ್ಮೆಟ್ ಇಲ್ಲದೆ ನೇರವಾಗಿ ಹೋಗುತ್ತಾರೆ. ಆದರೆ ಇನ್ನು ಮುಂದೆ ನೀವು ಹೀಗೆ ಹೋದರೆ ಒಂದೇ ದಿನ ಅನೇಕ ಬಾರಿ ದಂಡ ಕಟ್ಟಬೇಕಾಗಬಹುದು. ನೀವು ಬೆಂಗಳೂರಿನಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದೀರಿ ಎಂದಾದರೆ ಕ್ಯಾಮೆರಾ ಇರುವ ಪ್ರತಿ ಸಿಗ್ನಲ್​ನಲ್ಲೂ ದಂಡ ಕಟ್ಟಲು ಸಿದ್ಧರಾಗಿ.

ಇದನ್ನೂ ಓದಿ: Traffic Violation: ಟ್ರಾಫಿಕ್ ರೂಲ್ಸ್ ದಂಡ ಪಾವತಿಗೆ 50% ರಿಯಾಯಿತಿ: ದಂಡ ಪಾವತಿಸುವುದು ಹೇಗೆ? ಇಲ್ಲಿದೆ ವಿವರ

ಇದನ್ನು ಸರಳವಾಗಿ ಹೇಳುವುದಾದರೆ, ನೀವು ಹೆಲ್ಮೆಟ್ ಇಲ್ಲದೆ ಕ್ಯಾಮೆರಾ ಇರುವ ಮೂರು ಸಿಗ್ನಲ್​ಗಳನ್ನು ಕ್ರಾಸ್ ಮಾಡಿದರೆ ಮೂರು ಬಾರಿ ಪ್ರತ್ಯೇಕ ದಂಡ ಕಟ್ಟಬೇಕು. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ ಒಟ್ಟು 50 ಜಂಕ್ಷನ್​ಗಳಲ್ಲಿ 280 ಎಎನ್​ಪಿಆರ್​ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನೆನಪಿರಲಿ, ಹೆಲ್ಮೆಟ್ ರಹಿತ ಚಾಲನೆಯ ದಂಡದ ಮೊತ್ತ 500 ರೂಪಾಯಿ. ಒಂದು ದಿನದಲ್ಲಿ ನೀವು ಮೂರು ಬಾರಿ ಸಿಗ್ನಲ್ ಕ್ರಾಸ್ ಆದರೆ ಒಂದೂವರೆ ಸಾವಿರ ರೂಪಾಯಿ ದಂಡ ಪಾವತಿಸಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:40 pm, Sat, 4 February 23

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ