AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಬೆಳಗಾದರೆ ಹೈವೇನಲ್ಲಿ ಫೇಸ್ಬುಕ್​ ಲೈವ್, ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ ಮಕ್ಕಳು ಸಾಯುತ್ತಿದ್ದಾರೆ ನೋಡಪ್ಪ: ಸಿಂಹ ವಿರುದ್ಧ ವಿಶ್ವನಾಥ್ ಕಿಡಿ

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್​ನಲ್ಲಿ ದುಬಾರಿ ಹಣ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ವಿಧಾನ ಪರಿಷತ್​ ಸದಸ್ಯ ಹೆಚ್. ವಿಶ್ವನಾಥ್, ಹೆದ್ದಾರಿ ಪಕ್ಕ ಕುಳಿತು ಕೈಗೆ ಕಪ್ಪು ಪಟ್ಟಿ ಧರಿಸಿ, ಘೋಷಣಾ ಫಲಕಗಳನ್ನು ಹಿಡಿದು ಶಾಂತಿಯುತ ಪ್ರತಿಭಟನೆ ನಡೆಸಿದ್ದಾರೆ.

ದಿನ ಬೆಳಗಾದರೆ ಹೈವೇನಲ್ಲಿ ಫೇಸ್ಬುಕ್​ ಲೈವ್, ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ ಮಕ್ಕಳು ಸಾಯುತ್ತಿದ್ದಾರೆ ನೋಡಪ್ಪ: ಸಿಂಹ ವಿರುದ್ಧ ವಿಶ್ವನಾಥ್ ಕಿಡಿ
ಹೆಚ್​. ವಿಶ್ವನಾಥ್​ (ಎಡಚಿತ್ರ) ಪ್ರತಾಪ್​ ಸಿಂಹ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 17, 2023 | 12:58 PM

Share

ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್​ನಲ್ಲಿ (Bengaluru-Mysore Expressway) ದುಬಾರಿ ಹಣ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ (BJP) ವಿಧಾನ ಪರಿಷತ್​ ಸದಸ್ಯ ಹೆಚ್. ವಿಶ್ವನಾಥ್ (H Vishwanath), ಹೆದ್ದಾರಿ ಪಕ್ಕ ಕುಳಿತು, ಕೈಗೆ ಕಪ್ಪು ಪಟ್ಟಿ ಧರಿಸಿ, ಘೋಷಣಾ ಫಲಕಗಳನ್ನು ಹಿಡಿದು ಶಾಂತಿಯುತ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ವಪಕ್ಷದ ಸಂಸದ ಪ್ರತಾಪ್​ ಸಿಂಹ (Pratap Simha) ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಂಸದ ಪ್ರತಾಪ್​ ಸಿಂಹ ಮಿನಿ ಕಂಟ್ರ್ಯಾಕ್ಟರ್, ನಿನ್ನ ಕೆಲಸ ಏನು ? ಹೆದ್ದಾರಿ ವಿಚಾರದಲ್ಲಿ ನೀನು ಮಾಡಿದ್ದೇನು ? ರಸ್ತೆ ಕಾಮಗಾರಿಗೆ ಸಾಮಾಗ್ರಿಗಳನ್ನು ಸಾಗಿಸಿದ್ದು ಎಲ್ಲರಿಗೂ ಗೊತ್ತಿದೆ. ದಿನ ಬೆಳಗಾದರೆ ಹೈವೇಯಲ್ಲಿ ನಿಂತು ಫೇಸ್ ಬುಕ್ ಲೈವ್ ಮಾಡುತ್ತಿದ್ದ ಎಂದು ಕಿಡಿಕಾರಿದ್ದಾರೆ.

ಪ್ರತಿಭಟನೆ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ ಮಕ್ಕಳು ಸಾಯುತ್ತಿದ್ದಾರೆ. ಅವರನ್ನು ನೋಡಪ್ಪ, ಅಲ್ಲಿಯೂ ಪ್ರೆಸ್ ಮೀಟ್ ಮಾಡಪ್ಪ. ಅವನು ಯಾರೋ ಶ್ರೀಧರ್ ಅನ್ನೋ ಅಧಿಕಾರಿ (ದಶಪಥ ಹೆದ್ದಾರಿ ಯೋಜನಾ ನಿರ್ದೇಶಕ) ಸರ್ವಿಸ್ ರಸ್ತೆ ಮಾಡವ ಕಾನೂನು ಎಲ್ಲಿದೆ ಅಂತಾನೆ. ಏನಪ್ಪ ಮೋದಿ ನಿಮ್ಮ ಸರ್ಕಾರದಲ್ಲಿ ಅಧಿಕಾರಿ ಶಾಹಿ ಆಡಳಿತ ನಡೆಯುತ್ತಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರ ತೆರಿಗೆ ಹಣದಿಂದ ಹೈವೇ ನಿರ್ಮಾಣ, ಮೋದಿ ಅವರಪ್ಪನ ಮನೆಯ ಹಣ ಅಲ್ಲ: ಹೆಚ್​.ವಿಶ್ವನಾಥ್

ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ ಆಗುತ್ತೆ, ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ. 2600 ಎಕರೆ ರೈತರ ಜಮೀನು ಹೋಯ್ತು. ಮಂಡ್ಯ ಭಾಗದ ನೂರಾರು ಕುಟುಂಬಗಳು‌ ಬೀದಿಗೆ ಬಂದಿವೆ. ಜನ ವಿರೋಧಿ ಯೋಜನೆ ಮಾಡಿ ಟೋಲ್ ಸಂಗ್ರಹ ನೆಪದಲ್ಲಿ ಹಗಲು ದರೋಡೆಗೆಳಿದಿದ್ದೀರಿ. ರಸ್ತೆ ಬೇಕು ಅಂತ ಯಾರು ಕೇಳಿದ್ರು ? ನಾಲ್ಕು ಪಥನೇ ಸಾಕಾಗಿತ್ತು. ಹತ್ತು ಪಥದ ರಸ್ತೆ ಮಾಡಿದ್ದೀರಾ ಆದರೆ ಬಡವರು ಓಡಾಡುವ ಸರ್ವಿಸ್ ರಸ್ತೆ ಎಲ್ಲಿದೆ ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Fri, 17 March 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​