AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಖಿನ್ನತೆಗೆ ಒಳಗಾಗಿ ಬೆಂಕಿ ಹಚ್ಚಿಕೊಂಡು 8 ತಿಂಗಳ ಮಗು ಸಮೇತ ತಾಯಿ ಆತ್ಮಹತ್ಯೆ

4 ಭಾರಿ ಗರ್ಭಪಾತವಾದ ಬಳಿಕ ಗಂಡು ಮಗುವಿಗೆ ಸಿಂಧು ಜನ್ಮ ನೀಡಿದ್ದಳು. ಗಂಡು ಮಗುವಿನ ಜನ್ಮ ನೀಡಿದ ಬಳಿಕ ಸಿಂಧು ಖಿನ್ನತೆಗೆ ಒಳಗಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Crime News: ಖಿನ್ನತೆಗೆ ಒಳಗಾಗಿ ಬೆಂಕಿ ಹಚ್ಚಿಕೊಂಡು 8 ತಿಂಗಳ ಮಗು ಸಮೇತ ತಾಯಿ ಆತ್ಮಹತ್ಯೆ
ಮಗು ಮತ್ತು ತಾಯಿ ಸಿಂಧು
TV9 Web
| Edited By: |

Updated on:Jun 01, 2022 | 8:12 AM

Share

ಮೈಸೂರು: ಮಾನಸಿಕ ಖಿನ್ನತೆಗೆ ಒಳಗಾಗಿ 8 ತಿಂಗಳ ಮಗುವಿಗೆ ಬೆಂಕಿ ಹಚ್ಚಿ ತಾನು ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಅಮಾನವೀಯ ಘಟನೆ ಜಿಲ್ಲೆಯ ನಂಜನಗೂಡು ತಾಳೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ. ಖಿನ್ನತೆಗೆ ಒಳಗಾಗಿದ್ದ ತಾಯಿ ಸಿಂಧು(24) ಮನೆಯಲ್ಲಿ ಯಾರೂ ಇಲ್ಲದ ವೇಳೆ, ಮೊದಲು ತನ್ನ 8 ತಿಂಗಳ ಮಗುವಿಗೆ ಬೆಂಕಿ ಹಚ್ಚಿ ಬಳಿಕ ತಾನು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಕೊಂಡಿದ್ದಾಳೆ. ಚಾಮರಾಜನಗರ ಮೂಲದ ಸಿಂಧು, 9 ವರ್ಷಗಳ ಹಿಂದೆ ದಾಸನೂರಿನ ಮಹದೇವಸ್ವಾಮಿ ಜತೆ ಮದುವೆ ಆಗಿದ್ದರು. 4 ಭಾರಿ ಗರ್ಭಪಾತವಾದ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಗಂಡು ಮಗುವಿನ ಜನ್ಮ ನೀಡಿದ ಬಳಿಕ ಸಿಂಧು ಖಿನ್ನತೆಗೆ ಒಳಗಾಗಿದ್ದಳು. ತಾಯಿ ಮಗುವನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ 8 ತಿಂಗಳ ಮಗು, ತಾಯಿ ಸಿಂಧು ಸಾವನ್ನಪ್ಪಿದ್ದಾರೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ದಕ್ಷಿಣ ಯಮಸ್ಥಾನಂ! ಶಿವನು ದಕ್ಷಿಣಾಮೂರ್ತಿಯಾಗಿ ಈ ಏಳು ಸಪ್ತರ್ಷಿಗಳಿಗೆ ಜ್ಞಾನಾರ್ಜನೆ ಮಾಡಿದ ಏಕೆ ಗೊತ್ತಾ?

ಮಹಿಳೆ ಅನುಮಾನಸ್ಪದ ಸಾವು: 

ನಗರದಲ್ಲಿ ಮಹಿಳೆ ಓರ್ವ ಅನುಮಾನಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಹೆಚ್​ಡಿ ಕೋಟೆ ಶಿವಾಜಿ ರಸ್ತೆಯ ನಿವಾಸಿದಲ್ಲಿ ನಡೆದಿದೆ. ಶೋಭಾ (40) ಮೃತ ದುರ್ದೈವಿ. ನೇಣು ಬಿಗಿದ ಸ್ಥಿತಿಯಲ್ಲಿ ಶೋಭಾ ಶವ ಪತ್ತೆಯಾಗಿದೆ. ಪತಿಯಿಂದ ದೂರವಾಗಿದ್ದ ಶೋಭಾ, ಮಂಜುನಾಥ್ ಎಂಬಾತನೊಂದಿಗೆ ಲಿವಿಂಗ್ ಟುಗೆದರ್​ನಲ್ಲಿದ್ದಳು. ಶೋಭಾ ಸಾವಿಗೆ ಮಂಜುನಾಥ್ ಕಾರಣ ಎಂದು ಶೋಭಾ ಪೋಷಕರು ಆರೋಪ ಮಾಡಿದ್ದಾರೆ. ಹೆಚ್​ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪಾರ್ಕ್ ನಲ್ಲಿ ವೃದ್ದೆಯ ಸರ ಕಸಿದು ಪರಾರಿ

ಪಾರ್ಕ್​​ನಲ್ಲಿ ವೃದ್ದೆಯ ಸರ ಕಸಿದು ಖದೀಮರು ಪರಾರಿಯಾಗಿರುವಂತಹ ಘಟನೆ ವಿಜಯನಗರ ನಾಲ್ಕನೆ ಹಂತದ ಪಾರ್ಕ್​ನಲ್ಲಿ ನಡೆದಿದೆ. ವಾಕ್​ಗೆ ವೃದ್ದ ಮಹಿಳೆ ಬಂದಿದ್ದು, ಬೈಕ್​ನಲ್ಲಿ ಬಂದ ಸರಗಳ್ಳ ಇಬ್ಬರಿಂದ ಕೃತ್ಯವೆಸಗಲಾಗಿದೆ. ಮಾಸ್ಕ್ ಹಾಕಿಕೊಂಡು ಬಂದು ಸರಗಳ್ಳತನ ಮಾಡಿದ್ದು, ಆರೋಪಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:54 am, Wed, 1 June 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್