Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅತ್ಯಾಚಾರ ಪ್ರಕರಣ; ಆರೋಪಿಯ ತಾಯಿ ಕಣ್ಣೀರು

ಮನೆಯಲ್ಲೆ ಮಗ ಮಲಗಿದ್ದ. ಮಲಗಿದ್ದ ಮಗನನ್ನ ನಿನ್ನೆ ಮುಂಜಾನೆ ಏಕಾಏಕಿ ಪೊಲೀಸರು ಮನೆಗೆ ನುಗ್ಗಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಬಳಿ ಅಂಗಲಾಚಿ ಕೇಳಿದರೂ ಬಿಡಲಿಲ್ಲ.

ಮೈಸೂರು ಅತ್ಯಾಚಾರ ಪ್ರಕರಣ; ಆರೋಪಿಯ ತಾಯಿ ಕಣ್ಣೀರು
ಕಣ್ಣೀರು ಹಾಕಿದ ಆರೋಪಿಯ ತಾಯಿ
Follow us
TV9 Web
| Updated By: sandhya thejappa

Updated on:Aug 29, 2021 | 11:25 AM

ಮೈಸೂರು: ಜಿಲ್ಲೆಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊರ್ವನ ತಾಯಿ ಕಣ್ಣೀರು ಹಾಕಿದ್ದಾರೆ. ತಮಿಳುನಾಡಿನ ತಾಳವಾಡಿ ತಾಲೂಕಿನ ಸೂಸೈಪುರಂ ಗ್ರಾಮದಲ್ಲಿ ಕಣ್ಣೀರು ಹಾಕಿರುವ ಆರೋಪಿಯ ತಾಯಿ, ಮಗನನ್ನ ಏಕೆ ಕರೆದುಕೊಂಡು ಹೋದರು ಎಂಬುದು ಗೊತ್ತಿಲ್ಲ. ನಿನ್ನೆ (ಆಗಸ್ಟ್ 28) ಮುಂಜಾನೆ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಏಕೆ ಮಗನನ್ನು ಕರೆದುಕೊಂಡು ಹೋಗುತ್ತೀರಾ ಅಂತ ಕೇಳಿದ್ದರೂ ಹೇಳಲಿಲ್ಲ ಅಂತ ಹೇಳಿದ್ದಾರೆ.

ಮನೆಯಲ್ಲೆ ಮಗ ಮಲಗಿದ್ದ. ಮಲಗಿದ್ದ ಮಗನನ್ನ ನಿನ್ನೆ ಮುಂಜಾನೆ ಏಕಾಏಕಿ ಪೊಲೀಸರು ಮನೆಗೆ ನುಗ್ಗಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಬಳಿ ಅಂಗಲಾಚಿ ಕೇಳಿದರೂ ಬಿಡಲಿಲ್ಲ. ಕೂಲಿ ಕೆಲಸ ಮಾಡಿಕೊಂಡು ಇಡೀ ಕುಟುಂಬವನ್ನು ನಿರ್ವಹಣೆ ಮಾಡುತ್ತಿದ್ದ ಎಂದು ಆರೋಪಿ ತಾಯಿ ಕಣ್ಣೀರು ಹಾಕಿದ್ದಾರೆ.

ಜೈಲಿಗೆ ಹೋಗಿ ಬಂದರು ಬುದ್ದಿ ಕಲಿತಿರಲಿಲ್ಲ ವಿಚಾರಣೆ ವೇಳೆ ಆರೋಪಿಗಳ ಕ್ರಿಮಿನಲ್ ಹಿನ್ನೆಲೆ ಬಯಲಾಗಿದೆ. ಓರ್ವ 6 ತಿಂಗಳ ಹಿಂದೆಯಷ್ಟೇ ಪೊಲೀಸರ ಅತಿಥಿಯಾಗಿದ್ದ. ಮೈಸೂರಿನ ನಜರ್ಬಾದ್ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದರು. ಶ್ರೀಗಂಧದ ಮರ ಕದ್ದು ಸಿಕ್ಕಿ ಬಿದ್ದಿದ್ದ ಓರ್ವ ಆರೋಪಿ ಜೈಲಿಗೆ ಹೋಗಿ ಬಂದಿದ್ದ. ಜನವರಿ 9ರಂದು ಆರೋಪಿಯನ್ನ ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಿಂದ ಹೊರ ಬಂದ ಬಳಿಕ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ.

ಅತ್ಯಾಚಾರ ಪ್ರಕರಣದಲ್ಲಿ ಒಟ್ಟು 6 ಆರೋಪಿಗಳು ಎಂದು ಹೇಳಲಾಗುತ್ತಿತ್ತು. ಆದರೆ 7 ಜನರು ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರ ವಿಚಾರಣೆಯ ವೇಳೆ ಇನ್ನೋರ್ವ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಐವರು ಪೊಲೀಸರು ವಶದಲ್ಲಿದ್ದು, ಪರಾರಿಯಾಗಿರುವ ಇಬ್ಬರಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ

ಸಾಮೂಹಿಕ ಅತ್ಯಾಚಾರದಲ್ಲಿ ಇದ್ದಿದ್ದು 6 ಜನ ಮಾತ್ರ ಅಲ್ಲ; ಪೊಲೀಸರ ಮುಂದೆ ಬಾಯ್ಬಿಟ್ಟ ಆರೋಪಿಗಳು

ಬಾಗಲಕೋಟೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ನಾಲ್ವರು ಸೋದರರ ಕೊಲೆ; ವಿಜಯಪುರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

(mother of the accused who was raped in Mysore has been wept at tamilnadu)

Published On - 11:19 am, Sun, 29 August 21

ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ