AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಅನಾಥ ಶವಗಳ ಸಂಸ್ಕಾರ ಮಾಡುವ ಮೈಸೂರಿನ ಅಯೂಬ್​ ಅಹ್ಮದ್​ಗೆ ಪದ್ಮಶ್ರೀ ನೀಡುವಂತೆ ಪತ್ರ ಬರೆದು ವಿನಂತಿಸಿದ ಪ್ರತಾಪ್ ಸಿಂಹ

ಅಯೂಬ್ ಅವರು ಕಳೆದ 20 ವರ್ಷಗಳಿಂದ ಭಿಕ್ಷುಕರಿಗೆ ಉಚಿತ ಆಹಾರ ನೀಡುವುದರ ಜೊತೆಗೆ ಜನಾಬ್ ಬಶೀರ್ ವೃದ್ಧಾಶ್ರಮದ ಮೂಲಕ ಬಡ ವೃದ್ಧರನ್ನು ಸಲಹುತ್ತಿದ್ದಾರೆ.

Mysore News: ಅನಾಥ ಶವಗಳ ಸಂಸ್ಕಾರ ಮಾಡುವ ಮೈಸೂರಿನ ಅಯೂಬ್​ ಅಹ್ಮದ್​ಗೆ ಪದ್ಮಶ್ರೀ ನೀಡುವಂತೆ ಪತ್ರ ಬರೆದು ವಿನಂತಿಸಿದ ಪ್ರತಾಪ್ ಸಿಂಹ
ಸಾಧಕ ಅಯೂಬ್ ಅಹ್ಮದ್ ಮತ್ತು ಸಂಸದ ಪ್ರತಾಪ್ ಸಿಂಹ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 16, 2022 | 7:08 AM

ಮೈಸೂರು: ಅನಾಥ ಶವಗಳ ಅಂತ್ಯಸಂಸ್ಕಾರದ ಮೂಲಕ ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಮೈಸೂರಿನ ಅಯೂಬ್ ಅಹ್ಮದ್‌ (Ayub Ahmed) ಅವರಿಗೆ 2023ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ನೀಡುವ ಮೂಲಕ ಗೌರವಿಸಬೇಕು ಎಂದು ಸಂಸದ ಪ್ರತಾಪ ಸಿಂಹ (MP Pratap Simha) ಹಾಗೂ ಶಾಸಕ ತನ್ವೀರ್ ಸೇಠ್‌ (MLA Tanveer Sait) ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ವಿನಂತಿಸಿದ್ದಾರೆ. ಮೈಸೂರಿನ ಎನ್.ಆರ್.ಮೊಹಲ್ಲಾ ಎ.ಜೆ.ಬ್ಲಾಕ್ ನಿವಾಸಿಯಾಗಿರುವ ಅಯೂಬ್, ಕಳೆದ 23 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಮೆರಿಕದ ಹಾರ್ಮೊನಿ ಇನ್​ಸ್ಟಿಟ್ಯೂಟ್ ಅಯೂಬ್ ಅವರಿಗೆ ಈಗಾಗಲೇ ಡಾಕ್ಟರೇಟ್ ನೀಡಿ ಗೌರವಿಸಿದೆ. ಎ.ಪಿ.ಜೆ.ಅಬ್ದುಲ್ ಕಲಾಂ ಗ್ಲೋಬಲ್ ಪೀಸ್ ಅವಾರ್ಡ್, 2017ರ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯೂ ಅಯೂಬ್ ಅವರಿಗೆ ಲಭಿಸಿದೆ. ಅವರು ಈವರೆಗೆ 16 ಸಾವಿರ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಕೊವಿಡ್ ಸಂಧರ್ಭದಲ್ಲೂ ಅನಾಥ ಶವನಗಳ ಅಂತ್ಯಕ್ರಿಯೆ ಮಾಡುವ ತಮ್ಮ ಸೇವೆಯಿಂದ ಹಿಂದೆ ಸರಿಯಲಿಲ್ಲ. ಅನಾಥ ಶವ ಸಂಸ್ಕಾರದ ಜೊತೆಗೆ ಟೈಲರಿಂಗ್ ಸಂಸ್ಥೆ ತೆರೆದು ಬಡ ಜನತೆಗೆ ಉಚಿತ ಹೊಲಿಗೆ ತರಬೇತಿಯನ್ನೂ ನೀಡುತ್ತಿದ್ದಾರೆ.

ಅಯೂಬ್ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಬೇಕೆಂದು ವಿನಂತಿಸಿ ಪ್ರತಾಪ್ ಸಿಂಹ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಅಯೂಬ್ ಅವರು ಕಳೆದ 20 ವರ್ಷಗಳಿಂದ ಭಿಕ್ಷುಕರಿಗೆ ಉಚಿತ ಆಹಾರ ನೀಡುವುದರ ಜೊತೆಗೆ ಜನಾಬ್ ಬಶೀರ್ ವೃದ್ಧಾಶ್ರಮದ ಮೂಲಕ ಬಡ ವೃದ್ಧರನ್ನು ಸಲಹುತ್ತಿದ್ದಾರೆ. ವೃತ್ತಿಯಲ್ಲಿ ಅವರು ಮಂಡಿ ಮೊಹಲ್ಲಾದಲ್ಲಿ ಲೋಡರ್ ಆಗಿದ್ದಾರೆ. ತಮ್ಮ ಸ್ವಂತ ಕಾರಿನಲ್ಲಿಯೇ ಶವಗಳನ್ನು ಸಾಗಿಸುತ್ತಾರೆ. ಹಲವು ಆಸ್ಪತ್ರೆಗಳು, ಪೊಲೀಸರು ಮತ್ತು ಸಾರ್ವಜನಿಕರಿಂದ ಅನಾಥ ಶವಗಳ ಬಗ್ಗೆ ಅಯೂಬ್ ಅವರಿಗೆ ಫೋನ್ ಕರೆಗಳು ಬರುತ್ತವೆ.

ಕೊವಿಡ್ ವೇಳೆ ಅಯೂಬ್ ಅವರು ಸುಮಾರು 6,000 ಮಂದಿಯನ್ನು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ, ಅವರ ಜೀವ ಉಳಿಸಲು ನೆರವಾಗಿದ್ದರು. ಅವರ ಸಾಧನೆಯನ್ನು ಹಲವರು ಗೌರವಿಸಿದ್ದರು. ಅಂಥದ್ದೊಂದು ಟ್ವೀಟ್​ ನೆನಪು ಇಲ್ಲಿದೆ.

Published On - 7:06 am, Fri, 16 September 22

ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ