AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಎಲ್ಲೆಂದರಲ್ಲೇ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಸ್ವಪಕ್ಷೀಯ ನಾಯಕರ ವಿರುದ್ಧವೇ ಗರಂ ಆದ ಪ್ರತಾಪ್ ಸಿಂಹ

ಕಳೆದ ಹಲವು ದಿನಗಳಿಂದ ರಾಜಕಾರಣಿಗಳು ಫ್ಲೆಕ್ಸ್ ಅಳವಡಿಸಿ ನಗರವನ್ನ ಹಾಳು ಮಾಡುತ್ತಿದ್ದಾರೆ. ರಾಜಕೀಯ ಮುಖಂಡರು ಹುಟ್ಟುಹಬ್ಬ, ರಾಜಕೀಯ ಸಮಾರಂಭಕ್ಕೆ ಫ್ಲೆಕ್ಸ್ ಹಾಕುತ್ತಾರೆ. ಇದರಿಂದ ಮೈಸೂರು ನಗರ ಗಬ್ಬೆದ್ದು ಹೋಗುತ್ತಿದೆ.

ಮೈಸೂರಿನಲ್ಲಿ ಎಲ್ಲೆಂದರಲ್ಲೇ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಸ್ವಪಕ್ಷೀಯ ನಾಯಕರ ವಿರುದ್ಧವೇ ಗರಂ ಆದ ಪ್ರತಾಪ್ ಸಿಂಹ
ಪ್ರತಾಪ್ ಸಿಂಹ
TV9 Web
| Updated By: ಆಯೇಷಾ ಬಾನು|

Updated on:Apr 29, 2022 | 1:25 PM

Share

ಮೈಸೂರು: ನಗರದಲ್ಲಿ ಎಲ್ಲೆಂದರಲ್ಲೇ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಸ್ವಪಕ್ಷೀಯ ನಾಯಕರ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಮೈಸೂರು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಫ್ಲೆಕ್ಸ್ ಅಳವಡಿಸುವ ಪಕ್ಷಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಚಿವ ನಿರಾಣಿ ಫ್ಲೆಕ್ಸ್ ಹಾಕಿದವರಿಗೂ ನೋಟಿಸ್ ನೀಡಲು ಆಗ್ರಹಿಸಿದ್ದಾರೆ. ನಗರದ ಅಂದಗೆಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಟ್ವೀಟ್ ಮೂಲಕ ಬಿಜೆಪಿ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಕಳೆದ ಹಲವು ದಿನಗಳಿಂದ ರಾಜಕಾರಣಿಗಳು ಫ್ಲೆಕ್ಸ್ ಅಳವಡಿಸಿ ನಗರವನ್ನ ಹಾಳು ಮಾಡುತ್ತಿದ್ದಾರೆ. ರಾಜಕೀಯ ಮುಖಂಡರು ಹುಟ್ಟುಹಬ್ಬ, ರಾಜಕೀಯ ಸಮಾರಂಭಕ್ಕೆ ಫ್ಲೆಕ್ಸ್ ಹಾಕುತ್ತಾರೆ. ಇದರಿಂದ ಮೈಸೂರು ನಗರ ಗಬ್ಬೆದ್ದು ಹೋಗುತ್ತಿದೆ. ಬೆಂಗಳೂರು ನಗರದಲ್ಲೇ ಫ್ಲೆಕ್ಸ್ ಗಳನ್ನು ತೆಗದು ಹಾಕುತ್ತಿದ್ದಾರೆ. ಆದರೆ ಮೈಸೂರಿನಲ್ಲಿ ಯಾಕೆ ಅದಕ್ಕೆ ಅವಕಾಶ ಕೊಟ್ಟಿದ್ದಾರೆ? ಯಾವುದೇ ರಾಜಕೀಯ ಪಕ್ಷಗಳು ಫ್ಲೆಕ್ಸ್ ಹಾಕಿದ್ರೂ ದಂಡ ಹಾಕಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿಯವ್ರೂ ಫ್ಲೆಕ್ಸ್ ಹಾಕಿದರೂ ಕೂಡಾ ದಂಡ ಹಾಕಬೇಕು. ರಾಜಕಾರಣಿಗಳೇ ನಿಮ್ಮ ಹುಟ್ಟುಹಬ್ಬದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳಿ. ನಿಮ್ಮ ಬೆಂಬಲಿಗರೂ ಅಲ್ಲೇ ಸೆಲಬ್ರೇಟ್ ಮಾಡಲಿ ಎಂದರು. ಇನ್ನು ಮತ್ತೊಂದು ಕಡೆ ಮೈಸೂರು ನಗರದಲ್ಲಿ ಪುಟ್‌ಪಾತ್ ಒತ್ತುವರಿ ವಿಚಾರಕ್ಕೆ ಸಂಬಂಧಿಸಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವನ್ನೂ ಒಂದು ವಾರದಲ್ಲಿ ತೆರವು ಮಾಡಿಸುತ್ತೇನೆ ಎಂದು ಒತ್ತುವರಿ ತೆರವಿಗೆ ಒಂದು ವಾರದ ಭರವಸೆ ನೀಡಿದ್ದಾರೆ. ಖುದ್ದು ನಾನೇ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಕ್ರಮಕ್ಕೆ ಒತ್ತಾಯಿಸುವೆ. ಪುಟ್ ಪಾತ್ ವ್ಯಾಪಾರಿಗಳು ನಿಗದಿತ ಸ್ಥಳಗಳಲ್ಲಿ ವ್ಯಾಪಾರ ಮಾಡಬೇಕು. 2 ಸಾವಿರ ವ್ಯಾಪಾರಿಗಳಿಗಾಗಿ ಇಡೀ ಮೈಸೂರು ನಗರವನ್ನು ಗಬ್ಬೆಬ್ಬಿಸಲು ಆಗಲ್ಲ. ನಿಗದಿತ ಸ್ಥಳ ಬಿಟ್ಟು ಬಿಡಾಡಿ ದನಗಳಿಂದ ಮೈಸೂರಿನಲ್ಲಿ ಎಲ್ಲಾ ಕಡೆ ಅವಕಾಶ ಕೊಡಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ: ವರ್ಕ್ ಆರ್ಡರ್ ಇಲ್ಲದೆ ಕೆಲಸ ನಡೆದ ಅಧಿಕಾರಿಗಳೇ ಜವಾಬ್ದಾರಿ: ಸಚಿವ ಗೋವಿಂದ ಕಾರಜೋಳ

OnePlus Nord CE 2 Lite 5G: ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಫೋನ್ ಬಿಡುಗಡೆ: ಖರೀದಿಸಲು ಕ್ಯೂ ಗ್ಯಾರಂಟಿ

Published On - 1:25 pm, Fri, 29 April 22

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ