AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಎಲ್ಲೆಂದರಲ್ಲೇ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಸ್ವಪಕ್ಷೀಯ ನಾಯಕರ ವಿರುದ್ಧವೇ ಗರಂ ಆದ ಪ್ರತಾಪ್ ಸಿಂಹ

ಕಳೆದ ಹಲವು ದಿನಗಳಿಂದ ರಾಜಕಾರಣಿಗಳು ಫ್ಲೆಕ್ಸ್ ಅಳವಡಿಸಿ ನಗರವನ್ನ ಹಾಳು ಮಾಡುತ್ತಿದ್ದಾರೆ. ರಾಜಕೀಯ ಮುಖಂಡರು ಹುಟ್ಟುಹಬ್ಬ, ರಾಜಕೀಯ ಸಮಾರಂಭಕ್ಕೆ ಫ್ಲೆಕ್ಸ್ ಹಾಕುತ್ತಾರೆ. ಇದರಿಂದ ಮೈಸೂರು ನಗರ ಗಬ್ಬೆದ್ದು ಹೋಗುತ್ತಿದೆ.

ಮೈಸೂರಿನಲ್ಲಿ ಎಲ್ಲೆಂದರಲ್ಲೇ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಸ್ವಪಕ್ಷೀಯ ನಾಯಕರ ವಿರುದ್ಧವೇ ಗರಂ ಆದ ಪ್ರತಾಪ್ ಸಿಂಹ
ಪ್ರತಾಪ್ ಸಿಂಹ
TV9 Web
| Edited By: |

Updated on:Apr 29, 2022 | 1:25 PM

Share

ಮೈಸೂರು: ನಗರದಲ್ಲಿ ಎಲ್ಲೆಂದರಲ್ಲೇ ಫ್ಲೆಕ್ಸ್, ಬ್ಯಾನರ್ ಅಳವಡಿಸಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಸ್ವಪಕ್ಷೀಯ ನಾಯಕರ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಮೈಸೂರು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಫ್ಲೆಕ್ಸ್ ಅಳವಡಿಸುವ ಪಕ್ಷಗಳಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಚಿವ ನಿರಾಣಿ ಫ್ಲೆಕ್ಸ್ ಹಾಕಿದವರಿಗೂ ನೋಟಿಸ್ ನೀಡಲು ಆಗ್ರಹಿಸಿದ್ದಾರೆ. ನಗರದ ಅಂದಗೆಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಟ್ವೀಟ್ ಮೂಲಕ ಬಿಜೆಪಿ ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಕಳೆದ ಹಲವು ದಿನಗಳಿಂದ ರಾಜಕಾರಣಿಗಳು ಫ್ಲೆಕ್ಸ್ ಅಳವಡಿಸಿ ನಗರವನ್ನ ಹಾಳು ಮಾಡುತ್ತಿದ್ದಾರೆ. ರಾಜಕೀಯ ಮುಖಂಡರು ಹುಟ್ಟುಹಬ್ಬ, ರಾಜಕೀಯ ಸಮಾರಂಭಕ್ಕೆ ಫ್ಲೆಕ್ಸ್ ಹಾಕುತ್ತಾರೆ. ಇದರಿಂದ ಮೈಸೂರು ನಗರ ಗಬ್ಬೆದ್ದು ಹೋಗುತ್ತಿದೆ. ಬೆಂಗಳೂರು ನಗರದಲ್ಲೇ ಫ್ಲೆಕ್ಸ್ ಗಳನ್ನು ತೆಗದು ಹಾಕುತ್ತಿದ್ದಾರೆ. ಆದರೆ ಮೈಸೂರಿನಲ್ಲಿ ಯಾಕೆ ಅದಕ್ಕೆ ಅವಕಾಶ ಕೊಟ್ಟಿದ್ದಾರೆ? ಯಾವುದೇ ರಾಜಕೀಯ ಪಕ್ಷಗಳು ಫ್ಲೆಕ್ಸ್ ಹಾಕಿದ್ರೂ ದಂಡ ಹಾಕಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿಯವ್ರೂ ಫ್ಲೆಕ್ಸ್ ಹಾಕಿದರೂ ಕೂಡಾ ದಂಡ ಹಾಕಬೇಕು. ರಾಜಕಾರಣಿಗಳೇ ನಿಮ್ಮ ಹುಟ್ಟುಹಬ್ಬದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳಿ. ನಿಮ್ಮ ಬೆಂಬಲಿಗರೂ ಅಲ್ಲೇ ಸೆಲಬ್ರೇಟ್ ಮಾಡಲಿ ಎಂದರು. ಇನ್ನು ಮತ್ತೊಂದು ಕಡೆ ಮೈಸೂರು ನಗರದಲ್ಲಿ ಪುಟ್‌ಪಾತ್ ಒತ್ತುವರಿ ವಿಚಾರಕ್ಕೆ ಸಂಬಂಧಿಸಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲವನ್ನೂ ಒಂದು ವಾರದಲ್ಲಿ ತೆರವು ಮಾಡಿಸುತ್ತೇನೆ ಎಂದು ಒತ್ತುವರಿ ತೆರವಿಗೆ ಒಂದು ವಾರದ ಭರವಸೆ ನೀಡಿದ್ದಾರೆ. ಖುದ್ದು ನಾನೇ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ ಕ್ರಮಕ್ಕೆ ಒತ್ತಾಯಿಸುವೆ. ಪುಟ್ ಪಾತ್ ವ್ಯಾಪಾರಿಗಳು ನಿಗದಿತ ಸ್ಥಳಗಳಲ್ಲಿ ವ್ಯಾಪಾರ ಮಾಡಬೇಕು. 2 ಸಾವಿರ ವ್ಯಾಪಾರಿಗಳಿಗಾಗಿ ಇಡೀ ಮೈಸೂರು ನಗರವನ್ನು ಗಬ್ಬೆಬ್ಬಿಸಲು ಆಗಲ್ಲ. ನಿಗದಿತ ಸ್ಥಳ ಬಿಟ್ಟು ಬಿಡಾಡಿ ದನಗಳಿಂದ ಮೈಸೂರಿನಲ್ಲಿ ಎಲ್ಲಾ ಕಡೆ ಅವಕಾಶ ಕೊಡಲು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ: ವರ್ಕ್ ಆರ್ಡರ್ ಇಲ್ಲದೆ ಕೆಲಸ ನಡೆದ ಅಧಿಕಾರಿಗಳೇ ಜವಾಬ್ದಾರಿ: ಸಚಿವ ಗೋವಿಂದ ಕಾರಜೋಳ

OnePlus Nord CE 2 Lite 5G: ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಫೋನ್ ಬಿಡುಗಡೆ: ಖರೀದಿಸಲು ಕ್ಯೂ ಗ್ಯಾರಂಟಿ

Published On - 1:25 pm, Fri, 29 April 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್