AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕೊಡಗು ರೈಲು ಮಾರ್ಗ ನಿರ್ಮಿಸುತ್ತೇವೆ, ಆದರೆ: ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರತಾಪ್ ಸಿಂಹ ಇಟ್ಟ ಬೇಡಿಕೆಯೇನು?

ಮೈಸೂರು ಕೊಡಗು ರೈಲು ಮಾರ್ಗವನ್ನು ಶೀಘ್ರದಲ್ಲಿ ನಿರ್ಮಾಣ ಮಾಡಲಿದ್ದೇವೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದಷ್ಟು ಬೇಗ ಭೂಸ್ವಾಧೀನ ಮಾಡಿ ಉಚಿತವಾಗಿ ಒದಗಿಸಿಕೊಡಬೇಕು.ಉಸ್ವಾಧೀನ ಬೇಗ ಆದರೆ ಮೈಸೂರು ಕೊಡಗು ರೈಲು ಯೋಜನೆ ತ್ವರಿತವಾಗಿ ಸಾಕಾರಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

ಮೈಸೂರು ಕೊಡಗು ರೈಲು ಮಾರ್ಗ ನಿರ್ಮಿಸುತ್ತೇವೆ, ಆದರೆ: ಸಿದ್ದರಾಮಯ್ಯ ಸರ್ಕಾರಕ್ಕೆ ಪ್ರತಾಪ್ ಸಿಂಹ ಇಟ್ಟ ಬೇಡಿಕೆಯೇನು?
ಗಣಪತಿ ಶರ್ಮಾ
|

Updated on: Feb 27, 2024 | 7:45 AM

Share

ಮೈಸೂರು, ಫೆಬ್ರವರಿ 27: ಮೈಸೂರು ಕೊಡಗು ರೈಲು ಮಾರ್ಗಕ್ಕೆ (Mysuru Kodagu Train Route) ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಆಗ್ರಹಿಸಿದ್ದಾರೆ. ಮೈಸೂರು ವಿಭಾಗದ ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದ ನಂತರ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದರೆ ಮೈಸೂರು – ಕೊಡಗು ನಡುವಣ ರೈಲು ಮಾರ್ಗ ಶೀಘ್ರ ಸಾಕಾರಗೊಳ್ಳಲಿದೆ. ನಾವು ವಿವರವಾದ ಯೋಜನಾ ವರದಿಯೊಂದಿಗೆ ಸಿದ್ಧರಿದ್ದೇವೆ ಮತ್ತು ಸಮೀಕ್ಷೆಗಳು ಪೂರ್ಣಗೊಂಡಿವೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಉಚಿತವಾಗಿ ಹಸ್ತಾಂತರಿಸಬೇಕು. ಮೈಸೂರಿನವರೇ ಆದ ಸಿದ್ದರಾಮಯ್ಯ ಅವರು ತವರು ಜಿಲ್ಲೆಗೆ ಇದನ್ನು ಮಾಡುತ್ತಾರೆ ಎಂಬ ಬಗ್ಗೆ ನನಗೆ ಖಾತ್ರಿಯಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನ ಇತರ ಮೂಲಸೌಕರ್ಯ ಯೋಜನೆಗಳ ಕುರಿತು ಉಲ್ಲೇಖಿಸಿದ ಸಂಸದರು, ಕೇಂದ್ರ ಸರ್ಕಾರವು ಸಂಚಾರ ದಟ್ಟಣೆ ನಿವಾರಿಸಲು ಕುಕ್ಕರಹಳ್ಳಿ-ಬೋಗಾದಿ ರಸ್ತೆಯ ಕ್ರಾಫರ್ಡ್ ಹಾಲ್ ಬಳಿ ರಸ್ತೆ ಕೆಳ ಸೇತುವೆ ನಿರ್ಮಾಣ ಯೋಜನೆಗೆ 42.14 ಕೋಟಿ ರೂ. ಹಂಚಿಕೆ ಮಾಡಿದೆ. ಈ ಯೋಜನೆಯನ್ನು ಮೈಸೂರು-ಚಾಮರಾಜನಗರ ಲೆವೆಲ್ ಕ್ರಾಸಿಂಗ್ 1 ರಲ್ಲಿ ಪ್ರಾರಂಭಿಸಲಾಗಿದೆ ಎಂದಿದ್ದಾರೆ.

ಅದೇ ರೀತಿ, ರಾಯಲ್ ಇನ್ ಜಂಕ್ಷನ್ ಬಳಿ ಕೆಆರ್‌ಎಸ್ ರಸ್ತೆಯಲ್ಲಿ ರಸ್ತೆ ಕೆಳ ಸೇತುವೆಗೆ ಕೇಂದ್ರ ಸರ್ಕಾರದಿಂದ 42.88 ಕೋಟಿ ರೂ. ಹಂಚಿಕೆಗೆ ಅನುಮೋದನೆ ನೀಡಲಾಗಿದೆ. ನಿರ್ದಿಷ್ಟವಾಗಿ 5 ನೇ ಲೆವೆಲ್ ಕ್ರಾಸಿಂಗ್ ಬಳಿ ಕಾಮಗಾರಿ ನಡೆಸುವ ಉದ್ದೇಶವನ್ನು ಹೊಂದಲಾಗಿದೆ. ನಾವು ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಪ್ರಾರಂಭಿಸಿ ಪೂರ್ಣಗೊಳಿಸುತ್ತೇವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಇದನ್ನೂ ಓದಿ: ಮುಂದೆ ಬೆಂಗಳೂರು ಮೈಸೂರು ಮೆಟ್ರೋ: ಸಂಸದ ಪ್ರತಾಪ್ ಸಿಂಹ ಭರವಸೆ

2014ಕ್ಕೂ ಮೊದಲು ಮೈಸೂರಿಗೆ ಹೊಸ ರೈಲು ತರುವ ಪ್ರಯತ್ನವೇ ಆಗಿರಲಿಲ್ಲ. ನಾನು ಸಂಸದನಾದ ಬಳಿಕ 11 ರೈಲುಗಳನ್ನು ತಂದಿದ್ದೇನೆ. ಶೀಘ್ರದಲ್ಲೇ 12ನೇ ರೈಲು ಬರಲಿದೆ. ಮೈಸೂರು-ರಾಮೇಶ್ವರಂ ರೈಲು ಬರಲಿದೆ. ಅದೇ ರೀತಿ ಬೆಂಗಳೂರು ಮೈಸೂರು ಮೆಟ್ರೋ ಸಹ ಬರಲಿದೆ ಎಂದು ಸಂಸದ ಪ್ರತಾಪ್ ಸಿಂಹ ಕೆಲವು ದಿನಗಳ ಹಿಂದೆ ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್