AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ, ಹಾಗಂತ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳುತ್ತಾರಾ? ಸಂಸದ ಪ್ರತಾಪಸಿಂಹ ವಾಗ್ದಾಳಿ

ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ. ಹಾಗಂತ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳುತ್ತಾರಾ? ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ. ಈ ಹಿಂದೆ ಕನ್ನಡದ ವಿಚಾರದಲ್ಲಿ ಹಲವು ಬಾರಿ ಅವರು ಧ್ವನಿ ಎತ್ತಿಲ್ಲ.

ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ, ಹಾಗಂತ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳುತ್ತಾರಾ? ಸಂಸದ ಪ್ರತಾಪಸಿಂಹ ವಾಗ್ದಾಳಿ
ಪ್ರತಾಪ್ ಸಿಂಹ
Follow us
TV9 Web
| Updated By: ಆಯೇಷಾ ಬಾನು

Updated on: Jan 17, 2022 | 1:53 PM

ಮೈಸೂರು: ಸಂಸ್ಕೃತ ವಿವಿಗೆ ಕರವೇ ನಾರಾಯಣಗೌಡ ವಿರೋಧ ವಿಚಾರಕ್ಕೆ ಸಂಬಂಧಿಸಿ ನಾರಾಯಣಗೌಡಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ. ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ. ಹಾಗಂತ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳುತ್ತಾರಾ? ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ಈ ಹಿಂದೆ ಕನ್ನಡದ ವಿಚಾರದಲ್ಲಿ ಹಲವು ಬಾರಿ ಅವರು ಧ್ವನಿ ಎತ್ತಿಲ್ಲ. ಕರ್ನಾಟಕದ ಜಿಲ್ಲೆಯ ಹೆಸರು ಕನ್ನಡೀಕರಣಗೊಳಿಸುವಾಗ ಟಿಪ್ಪು ಜಯಂತಿ ಆಚರಣೆ, ಟಿಪ್ಪು ವಿವಿ ಸ್ಥಾಪನೆ ವಿಚಾರದಲ್ಲಿ ಮೌನವಾಗಿದ್ದರು. ನಾರಾಯಣಗೌಡ ಚುನಾವಣೆಗೆ ನಿಂತಾಗ ರೇಡ್ ಆಗಿತ್ತು. ಅವರ ಬಳಿ ಹಣ ಸಿಕ್ಕಿದ್ದು ಎಲ್ಲರಿಗೂ ಗೊತ್ತಿದೆ. ಬರೀ ಮೋದಿ ಅವರನ್ನು ವಿರೋಧಿಸುವುದನ್ನು ಬಿಡಿ. ಸಂಸ್ಕೃತ ಕನ್ನಡ ಭಾಷೆಯ ಜೊತೆ ಬೆರೆತು ಹೋಗಿದೆ. ಹುಟ್ಟು ಸಾವು ನಾಮಕರಣ ಮದುವೆ ತಿಥಿ ಎಲ್ಲದರಲ್ಲೂ ಸಂಸ್ಕೃತ ಇದೆ. ಕನ್ನಡ, ಸಂಸ್ಕೃತವನ್ನು ಬೇರೆ ಮಾಡುವ ಕೆಲಸ ಮಾಡಬೇಡಿ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಇದೇ ವೇಳೆ ಮೇಕೆದಾಟು ಯೋಜನೆ ಬಗ್ಗೆ ಮಾತನಾಡಿದ್ದಾರೆ. ಮೇಕೆದಾಟು ವೇಳೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು. ದೇಶದಾದ್ಯಂತ ರಾಲಿ ಮಾಡಲು ಸೂಕ್ತ ಕಾಲ ಅಲ್ಲ ಅಂತಾ ಹೇಳಿದ್ದರು. ಮೇಕೆದಾಟು ಯೋಜನೆ ಅಂತಾ ದೊಡ್ಡ ಜಾತ್ರೆ ಮಾಡಿದ್ದು ಕಾಂಗ್ರೆಸ್‌ನವರೆ. ಮುಂದೆಯಾದರೂ ಸ್ವಲ್ಪ ಜವಾಬ್ದಾರಿಯುತವಾಗಿ ವರ್ತಿಸಬೇಕು. ಯಾತ್ರೆ ಮೂಲಕ ಜಾತ್ರೆ ಮಾಡಿ ಜನರಿಗೆ ಮನವರಿಕೆ ಮಾಡಿಸುವುದಲ್ಲ. ಯೋಗ್ಯ ವಿಚಾರ, ಜನರ ಪರವಾಗಿದೆ ಅಂದರೆ ಮಾಧ್ಯಮಗಳ ಮೂಲಕವೂ ಮನವರಿಕೆ ಮಾಡಿಕೊಡಬಹುದು ಎಂದು ಕಾಂಗ್ರೆಸ್ ಪಾದಯಾತ್ರೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಖಂಡಿಸಿ ಇಂದು ಇಡೀ ದಿನ ಕರ್ನಾಟಕ ರಕ್ಷಣಾ ವೇದಿಕೆಯಿಂದ ಟ್ವಿಟರ್ ಅಭಿಯಾನ!

ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ