AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​​: ದೂರು ನೀಡಿ 6 ದಿನ ಕಳೆದರೂ ಕೈಗೊಳ್ಳದ ಕ್ರಮ, ಪೊಲೀಸ್​ ಆಯುಕ್ತರಿಗೆ ಸ್ನೇಹಮಯಿ ಕೃಷ್ಣ ಪತ್ರ

ಮುಡಾ ಹಗರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಕಾಂಗ್ರೆಸ್​ ನಾಯಕ ಎಂ. ಲಕ್ಷ್ಮಣ ಅವರ ವಿರುದ್ಧ ದೂರು ನೀಡಿ ಆರು ದಿನ ಕಳೆದರೂ ಕ್ರಮ ಕೈಗೊಂಡಿಲ್ಲ. ಕೂಡಲೆ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಸ್ನೇಹಮಯಿ ಕೃಷ್ಣ ಮೈಸೂರು ಪೊಲೀಸ್​ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಮುಡಾ ಕೇಸ್​​: ದೂರು ನೀಡಿ 6 ದಿನ ಕಳೆದರೂ ಕೈಗೊಳ್ಳದ ಕ್ರಮ, ಪೊಲೀಸ್​ ಆಯುಕ್ತರಿಗೆ ಸ್ನೇಹಮಯಿ ಕೃಷ್ಣ ಪತ್ರ
ಸ್ನೇಹಮಯಿ ಕೃಷ್ಣ
ರಾಮ್​, ಮೈಸೂರು
| Edited By: |

Updated on: Sep 03, 2024 | 8:57 AM

Share

ಮೈಸೂರು, ಸೆಪ್ಟೆಂಬರ್​ 03: ಮುಡಾ (Muda) ಬದಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಾರ್ವತಿ ಮತ್ತು ಕಾಂಗ್ರೆಸ್​ ನಾಯಕ ಎಂ. ಲಕ್ಷ್ಮಣ (M Laxman) ಅವರ ವಿರುದ್ಧ ದೂರು ನೀಡಿ ಆರು ದಿನ ಕಳೆದರೂ ಇನ್ನೂ ಕ್ರಮ ಏಕೆ ಕೈಗೊಂಡಿಲ್ಲ ಅಂತ ಪ್ರಶ್ನಿಸಿ ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಮೈಸೂರು ಪೊಲೀಸ್​ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ದೂರು ನೀಡಿ ಆರು ದಿನವಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮಂಗಳವಾರ ಮೈಸೂರಿಗೆ ಬರುತ್ತಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರ ಪತ್ನಿಯನ್ನು ವಿಚಾರಣೆಗೆ ಒಳಪಡಿಸಿ ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ

“ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಂಡತಿ ಶ್ರೀಮತಿ ಪಾರ್ವತಿ ಮತ್ತು ಲಕ್ಷ್ಮಣ್​ರವರ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರರ್ಜಿ ನೀಡಿರುವುದು ನಿಮಗೆ ತಿಳಿದ ವಿಷಯ. ದೂರರ್ಜಿ ‌ನೀಡಿ ಆರು ದಿನಗಳಾಗುತ್ತಾ ಬಂದಿದ್ದರೂ ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬಂದಿರುವುದಿಲ್ಲ. ನಿನ್ನೆ ರಾತ್ರಿ ಪಾರ್ವತಿರವರು ಮೈಸೂರಿಗೆ ಬಂದಿದ್ದು, ಇಂದು ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಲಿದ್ದಾರೆ ಎಂಬುದು ತಿಳಿದುಬಂದಿದೆ. ಆದ್ದರಿಂದ ಆರೋಪಿತರಾದ ಪಾರ್ವತಿರವರನ್ನು ಈ ದಿನ ತಾವೇ ಖುದ್ದಾಗಿ ನನ್ನ ಆರೋಪಕ್ಕೆ ಪೂರಕವಾಗಿ ವಿಚಾರಣೆಗೆ ಒಳಪಡಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.”

“ಏಕೆಂದರೆ ಪಾರ್ವತಿರವರು ಮುಖ್ಯಮಂತ್ರಿಗಳ ಹೆಂಡತಿಯಾಗಿರುವುದರಿಂದ ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸ್ ನಿರೀಕ್ಷಕರು ಮತ್ತು ಸಹಾಯಕ ಪೊಲೀಸ್ ಆಯುಕ್ತರು ಹಿಂಜರಿಯುವ ಸಾಧ್ಯತೆ ಇರುವುದರಿಂದ ತಾವೇ ವಿಚಾರಣೆ ನಡೆಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಗಡಿಪಾರಿಗೆ ಮನವಿ

ಸಿಎಂ ಪತ್ನಿಗೆ ಸ್ನೇಹಮಯಿ ಕೃಷ್ಣ ಪ್ರಶ್ನೆ

  • ನಿಮ್ಮ ಯಜಮಾನರು (ಸಿದ್ದರಾಮಯ್ಯ) ಎಕ್ಸ್ ಖಾತೆಯಲ್ಲಿ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಕಂಡು ಬರುವ ನಿಮ್ಮ ಸಹಿಗೂ, ಈ ಹಿಂದೆ “ಪ್ರಾಧಿಕಾರ” ಕ್ಕೆ ನೀಡಿರುವ ಪತ್ರದಲ್ಲಿನ ನಿಮ್ಮ ಸಹಿಗೂ ವ್ಯತ್ಯಾಸಗಳು ಇರಲು ಕಾರಣವೇನು? ಸಹಿಯನ್ನು ನಿಜವಾಗಿಯೂ ನೀವು ಮಾಡಿರುತ್ತೀರಾ? ಅಥವಾ ನಿಮ್ಮ ಪರವಾಗಿ ಯಾರಾದರೂ ಮಾಡಿದ್ದಾರೆಯೆ?
  • ಸಹಿಯನ್ನು ನೀವೆ ಮಾಡಿದ್ದರೆ ಯಾವಾಗಾ? ಎಲ್ಲಿ ಮಾಡಿದ್ದೀರಾ? ಬೇರೆಯವರು ಸಹಿ ಮಾಡಿದ್ದಾರೆ ಅನ್ನುವುದಾದರೆ ನಿಮ್ಮ ಸಹಿಯನ್ನು ನಕಲು ಮಾಡಿರುವವರ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡುತ್ತೀರಾ?
  • ಲಕ್ಷ್ಮಣ್ ರವರು ಇತ್ತೀಚೆಗೆ ನಿಮ್ಮನ್ನು ಭೇಟಿ ಮಾಡಿದ್ದರೆ? ಯಾವಾಗ, ಯಾವ ಸ್ಥಳದಲ್ಲಿ, ಯಾವ ಕಾರಣಕ್ಕಾಗಿ ಭೇಟಿ ಮಾಡಿದ್ದರು? 23.06. 2014ರಂದು ಪ್ರಾಧಿಕಾರಕ್ಕೆ ನೀವು ನೀಡಿರುವ ಪತ್ರದ ಎರಡನೇ ಪುಟದಲ್ಲಿ ಕೆಲವು ಪದಗಳಿಗೆ ವೈಟ್ನರ್ ಹಾಕಲು ಕಾರಣವೇನು?
  • ವೈಟ್ನರ್ ಅನ್ನು ನೀವು ಹಾಕಿದ್ದೀರಾ ? ಅಥವಾ ಬೇರೆಯವರು ಹಾಕಿದ್ದಾರಾ? ನಿಮ್ಮ ಪ್ರಕಾರ ವೈಟ್ನರ್ ಹಾಕಿರುವ ಸ್ಥಳದಲ್ಲಿ ಯಾವ ವಿಚಾರ ತಿಳಿಸಲಾಗಿತ್ತು? ಎಂದು ಪ್ರಶ್ನೆ ಕೇಳಿದ್ದಾರೆ.

ಈ ಪ್ರಶ್ನೆಗಳಿಗೆ ವಿಚಾರಣೆ ಸಂದರ್ಭದಲ್ಲಿ ಸೂಕ್ತ ಉತ್ತರ (ಹೇಳಿಕೆ) ಪಡೆದು ಸತ್ಯಾಸತ್ಯತೆ ತಿಳಿದುಕೊಂಡು, ಅವರ ಮಾದರಿ ಸಹಿಗಳನ್ನು ಪಡೆದುಕೊಂಡು ಅವರ ಹೇಳಿಕೆ ಮತ್ತು ಮಾದರಿ ಸಹಿಗಳನ್ನು ತನಿಖಾಧಿಕಾರಿಗೆ ನೀಡಿ. ಕೂಡಲೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ತನಿಖಾಧಿಕಾರಿಗೆ ಸೂಕ್ತ ಸೂಚನೆ ನೀಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರಿಗೆ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ