ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಗೆ ಹಂಚಿಕ್ಕೆಯಾಗಿದ್ದ 14 ಸೈಟ್​ಗಳ ದಾಖಲೆ ಪರಿಶೀಲಿಸಿದ ಇಡಿ, ಪ್ರಶ್ನೆಗಳ ಸುರಿಮಳೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಹಗರಣ ಸಂಬಂಧ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇಡಿ ಅಧಿಕಾರಿಗಳು ಇಂದೂ ಕೂಡ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ.

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಗೆ ಹಂಚಿಕ್ಕೆಯಾಗಿದ್ದ 14 ಸೈಟ್​ಗಳ ದಾಖಲೆ ಪರಿಶೀಲಿಸಿದ ಇಡಿ, ಪ್ರಶ್ನೆಗಳ ಸುರಿಮಳೆ
ಮುಡಾ ಕಚೇರಿಯಲ್ಲಿ ಇಡಿ ದಾಖಲೆ ಪರಿಶೀಲನೆ
Follow us
| Updated By: ವಿವೇಕ ಬಿರಾದಾರ

Updated on:Oct 19, 2024 | 8:50 AM

ಮೈಸೂರು, ಅಕ್ಟೋಬರ್​ 19: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮತ್ತು ಮುಡಾ ಪ್ರಕರಣದ ಎ4 ದೇವರಾಜು ಮನೆ ಮೇಲೆ ಶುಕ್ರವಾರ (ಅ.18) ರಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದರು. ರಾತ್ರಿವರೆಗೂ ಅಧಿಕಾರಿಗಳು ಮುಡಾ (Muda) ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರಿಗೆ ಹಂಚಿಕೆಯಾಗಿದ್ದ 14 ನಿವೇಶನ ​ಮತ್ತು ಕೆಸರೆ ಗ್ರಾಮದ ಸರ್ವೆ ನಂ‌.464ರ ಜಮೀನಿನ ದಾಖಲೆಗಳನ್ನು ಇಡಿ ಅಧಿಕಾರಿಗಳು ಪರಿಶೀಲಿಸಿದರು. ಜೊತೆಗೆ ಇಡಿ ಅಧಿಕಾರಿಗಳು ತಾಲೂಕು ಕಚೇರಿಯಲ್ಲೂ ಸರ್ವೆ ನಂ.464ರ ಜಮೀನುಗಳ ದಾಖಲೆ ಪರಿಶೀಲನೆ ನಡೆಸಿದರು. ಮೈಸೂರು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂ‌.464 ಭೂಮಿಗೆ ಸಂಬಂಧಿಸಿದ 1970 ನೇ ಇಸವಿಯ ಎಂಆರ್​ ಪ್ರತಿಯನ್ನು ಪಡೆದರು. ಅಲ್ಲದೇ ತಹಶೀಲ್ದಾರ್, ಎಫ್​ಡಿಎ, ಎಸ್​ಡಿಎ ಸೇರಿದಂತೆ ಇತರರ ಬಳಿ ಹಲವು ಮಾಹಿತಿ ಕೇಳಿ ಪಡೆದರು.

ಮುಡಾ ಆಯುಕ್ತರಿಗೆ ಇಡಿ ಅಧಿಕಾರಿಗಳಿಂದ 41 ಪ್ರಶ್ನೆ

ಮುಡಾ ಕಚೇರಿ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಮುಡಾ ಅಕ್ರಮ, 14 ಸೈಟ್, ಅಧಿಸೂಚನೆ, ಡಿನೋಟಿಫಿಕೇಷನ್, ಭೂಸ್ವಾಧೀನ, ಪರಿಹಾರ, ಹಂಚಿಕೆ ಪತ್ರ, ಸಿಎಂ ಪತ್ನಿ ಪಡೆದಿದ್ದಾರೆ ಎನ್ನಲಾದ 14 ಸೈಟ್‌ಗಳು ಸೇರಿದಂತೆ ಇಡಿ ಮುಡಾದಲ್ಲಿ ನಡೆದಿರುವ ಹಗರಣದ ಬಗ್ಗೆ ಇಡಿ ಪ್ರಶ್ನೆ ಕೇಳಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ 41 ಪ್ರಶ್ನೆಗಳ ಮುಡಾ ಆಯುಕ್ತರ ಮುಂದಿಟ್ಟಿತ್ತು.

ಇಡಿ ಅಧಿಕಾರಿಗಳು ಶುಕ್ರವಾರ ದೇವರಾಜು ಅವರ ಮನೆಯಲ್ಲಿ ಕೆಸರೆ ಗ್ರಾಮದ ಸರ್ವೆ ನಂ.464ರ ಭೂ ದಾಖಲೆಗಳನ್ನು ವಶಕ್ಕೆ ಪಡೆದರು. ಈ ದಾಖಲೆಗಳನ್ನು ಇಟ್ಟುಕೊಂಡು ಇಡಿ ಅಧಿಕಾರಿಗಳು ಪ್ರಾಥಮಿಕ ವಿಚಾರಣೆ ನಡೆಸಿದರು. ಜಮೀನಿ ಪರಭಾರೆ, ಮಾಲೀಕತ್ವ ಸೇರಿ ಕೆಲ ವಿಚಾರಗಳ ಬಗ್ಗೆ ದೇವರಾಜು ಅವರನ್ನು ಪ್ರಶ್ನಿಸಿ ಉತ್ತರ ಪಡೆದರು.

ಇದನ್ನೂ ಓದಿ: ಮುಡಾ ಕಚೇರಿ ಮೇಲಿನ ಇಡಿ ದಾಳಿಯ ಸ್ಫೋಟಕ ಮಾಹಿತಿ: ಆಯುಕ್ತರಿಗೆ ಕೇಳಿದ 41 ಪ್ರಶ್ನೆಗಳು ಯಾವ್ಯಾವು?

ಅಲ್ಲದೇ ಅಗತ್ಯವಿದ್ದಾಗ ನೋಟಿಸ್ ಜಾರಿ ಮಾಡಿದಾಗ ಅಗತ್ಯ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದರು. ಹಾಗೇ ಪ್ರಕರಣ ಗಂಭೀರವಾಗಿದ್ದು ತನಿಖೆಗೆ ಸಹಕರಿಸುವಂತೆ ತಾಕೀತು ಮಾಡಿದರು.

ಇಂದೂ ದಾಖಲೆ ಪರಿಶೀಲನೆ

ಇಡಿ ಅಧಿಕಾರಿಗಳು ಇಂದೂ ಸಹ ಮುಡಾ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಡಾ ಕಚೇರಿಗೆ ಇಡಿ ಅಧಿಕಾರಿಗಳು ತೆರಳಲಿದ್ದಾರೆ. ಶುಕ್ರವಾರ ಬೆಳಗ್ಗೆ 11 ರಿಂದ ರಾತ್ರಿ 11ರವರೆಗೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಸತತ 12 ಗಂಟೆಗಳ ಕಾಲ ಮುಡಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:35 am, Sat, 19 October 24

Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್