AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ​: ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್​ಟಿಐ ಕಾರ್ಯಕರ್ತನಿಗೆ ಜೀವ ಬೆದರಿಕೆ

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಓರ್ವ ಗನ್​​ ಮ್ಯಾನ್​​ ನೀಡುವಂತೆ ಗಂಗರಾಜು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಮುಡಾ ಹಗರಣ​: ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್​ಟಿಐ ಕಾರ್ಯಕರ್ತನಿಗೆ ಜೀವ ಬೆದರಿಕೆ
ಆರ್​ಟಿಐ ಕಾರ್ಯಕರ್ತ ಗಂಗರಾಜು
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Sep 02, 2024 | 11:37 AM

Share

ಮೈಸೂರು, ಸೆಪ್ಟೆಂಬರ್​ 02: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಆರ್​​ಟಿಐ (RTI) ಕಾರ್ಯಕರ್ತ ಗಂಗರಾಜು (Gangaraju) ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಹೀಗಾಗಿ, ಗಂಗರಾಜು ಅವರು ಓರ್ವ ಗನ್ ಮ್ಯಾನ್‌ ನೀಡುವಂತೆ ಮುಖ್ಯಮಂತ್ರಿಗಳ ಕಾರ್ಯಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಆದರೆ, ಗಂಗರಾಜು ಅವರಿಗೆ ಗನ್ ​ಮ್ಯಾನ್​ ನೀಡಲು ನಿರಾಕರಿಸಿದ್ದು, ಗಂಗರಾಜು ಮನೆಯ ಬಳಿ ನಿರಂತರವಾಗಿ ಪೊಲೀಸ್ ಬೀಟ್ ನಿಯೋಜಿಸಲಾಗಿದೆ. ಗಂಗರಾಜು ಮನೆಯ ಬಳಿ ಬೀಟ್ ಸಹಿ ಪುಸ್ತಕ ಇಡಲಾಗಿದೆ. ಅಲ್ಲದೇ, ಜೀವಹಾನಿ ಬಗ್ಗೆ ಮಾಹಿತಿ ಇದ್ದರೆ ಪೊಲೀಸ್ ಠಾಣೆಗೆ ದೂರು ನೀಡಿ. ಒಂದು ವೇಳೆ ನಿಮ್ಮ ಕುಟುಂಬ ಹಾಗೂ ನಿಮಗೆ ಭದ್ರತೆ ಬೇಕಿದ್ದರೇ, ನಿಯಮಾನುಸಾರ ಹಣ ಪಾವತಿಸಿ ಗನ್ ​​ಮ್ಯಾನ್ ಪಡೆಯಿರಿ ಎಂದು ಪೊಲೀಸರು ಗಂಗರಾಜು ಅವರಿಗೆ ಹಿಂಬರಹ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿಯ ಜಮೀನೇ ಇಲ್ಲ, ನಕಲಿ‌ ದಾಖಲೆ‌ ಸೃಷ್ಟಿ ಎಂದ ಆರ್​​ಟಿಐ ಕಾರ್ಯಕರ್ತ

ಯಾರು ಈ ಗಂಗರಾಜು

ಮುಡಾದ 50 : 50 ಅನುಪಾತದಲ್ಲಿ ಬದಲಿ ನಿವೇಶನ ಹಂಚಿಕೆ ಆಗಿರುವ ಹಗಣರಗಳ ಬಗ್ಗೆ ಆರ್​ಟಿಐ ಕಾರ್ಯಕರ್ತರ ಗಂಗರಾಜು ಬಹಿರಂಗಪಡಿಸಿದ್ದಾರೆ. ಕೆಸರೆ ಗ್ರಾಮದಲ್ಲಿನ 3.16 ಎಕರೆ ಜಮೀನಿನ‌ ದಾಖಲೆಗಳ‌ನ್ನು ಆರ್​ಟಿ ಐ ಮೂಲಕ ತೆಗೆದುಕೊಂಡಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಕ್ಕೆ ಸಂಬಂಧಿಸಿದ್ದ ಮೂಲ ಭೂ ದಾಖಲೆಗಳು ಕಳವಾಗಿರುವ ಬಗ್ಗೆ ದೂರು ನೀಡಿದ್ದಾರೆ. ಅಲ್ಲದೇ, ಮುಡಾದಲ್ಲಿ  ಹಗರಣ ನಡೆದಿದೆ ಎಂದು ಮುಡಾ ಆಯುಕ್ತರು, ಅಧ್ಯಕ್ಷರು ಮತ್ತು ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಮುಡಾ ಹಗರಣದ ಬಗ್ಗೆ ಸುಮಾರು 2019ರಿಂದ ನಿರಂತರ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯ, ಶಾಸಕರ ವಿರುದ್ದ ಹೋರಾಟ ನಡೆಸಿದ್ದಾರೆ. ಈ ಎಲ್ಲ ಕಾರಣದಿಂದ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿಂದೆ 2020ರಲ್ಲಿ ಹಲ್ಲೆ ಸಹಾ ನಡೆದಿತ್ತು.

ಗಂಗರಾಜು ವಿರುದ್ಧ ದೂರು

ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ಆರೋಪಿಸಿದ್ದರು. ಅಲ್ಲದೇ, ಇವರನ್ನು ಕೂಡಲೇ ಬಂಧಿಸಬೇಕೆಂದು ಮೈಸೂರು ಜಿಲ್ಲಾ ಪೊಲೀಸ್​ ಆಯುಕ್ತರಿಗೆ ಕಾಂಗ್ರೆಸ್​​ ನಿಯೋಗ ದೂರು ನೀಡಿತ್ತು.

ಸರ್ಕಾರದಿಂದ ಆರ್​ಟಿಐ ಕಾರ್ಯಕರ್ತರಿಗೆ ಕಿರುಕುಳ: ಹೆಚ್​ಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್​ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಆರೋಪ ಮಾಡಿದ್ದರು.

ಸ್ನೇಹಮಯಿ ಕೃಷ್ಣ ವಿರುದ್ಧ

ತೀರ ಇತ್ತೀಚಿಗೆ ಕಾಂಗ್ರೆಸ್​ ನಾಯಕ ಎಂ. ಲಕ್ಷ್ಮಣ ಆರ್​ಟಿಐ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಜಿಲ್ಲಾ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದರು. ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡುವಂತೆ ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:02 am, Mon, 2 September 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?