AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​: ಲೋಕಾಯುಕ್ತ ವರದಿಗೆ ತಕರಾರು ಎತ್ತಿದ ಸ್ನೇಹಮಯಿ‌ ಕೃಷ್ಣ, ಅರ್ಜಿಯಲ್ಲೇನಿದೆ?

ಮುಡಾ ಪ್ರಕರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ಗೆ ಇಂದು ತಕರಾರು ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿಗೆ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದಾರೆ. 39 ಪುಟಗಳ ಅರ್ಜಿಯಲ್ಲಿ ಲೋಕಾಯುಕ್ತರ ವರದಿ ಸಂಪೂರ್ಣವಾಗಿಲ್ಲ ಎಂದು ಉಲ್ಲೇಖಿಸಿದ್ದಾರೆ.

ಮುಡಾ ಕೇಸ್​: ಲೋಕಾಯುಕ್ತ ವರದಿಗೆ ತಕರಾರು ಎತ್ತಿದ ಸ್ನೇಹಮಯಿ‌ ಕೃಷ್ಣ, ಅರ್ಜಿಯಲ್ಲೇನಿದೆ?
ಮುಡಾ ಕೇಸ್​: ಲೋಕಾಯುಕ್ತ ವರದಿಗೆ ತಕರಾರು ಎತ್ತಿದ ಸ್ನೇಹಮಯಿ‌ಕೃಷ್ಣ, ಅರ್ಜಿಯಲ್ಲೇನಿದೆ?
ರಾಮ್​, ಮೈಸೂರು
| Edited By: |

Updated on:Mar 07, 2025 | 4:29 PM

Share

ಮೈಸೂರು, ಮಾರ್ಚ್​​ 07: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧದ ಮುಡಾ ಪ್ರಕರಣ ತನಿಖೆ‌ ನಡೆಸಿ ಕೋರ್ಟ್​ಗೆ ವರದಿ ಸಲ್ಲಿಸಿದ್ದ ಲೋಕಾಯುಕ್ತ ವರದಿಗೆ ದೂರುದಾರ ಸ್ನೇಹಮಯಿ‌ಕೃಷ್ಣ (Snehamayi Krishna) ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. 39 ಪುಟಗಳ ತಕರಾರು ಅರ್ಜಿಯಲ್ಲಿ ಸಂಪೂರ್ಣ ಮಾಹಿತಿ ನೀಡಿರುವ ಸ್ನೇಹಮಯಿ‌ಕೃಷ್ಣ, ಅದರಲ್ಲಿನ ಅಂಶಗಳನ್ನು ಪರಿಗಣಿಸಿ, ಸೂಕ್ತ ಆದೇಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ತನಿಖಾಧಿಕಾರಿ ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿ ನನ್ನ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿದ ಬಿ ಅಂತಿಮ ವರದಿಯಾಗಿರುವುದಿಲ್ಲ. ಆದರೂ ಬಿ ಅಂತಿಮ ವರದಿ ಸಲ್ಲಿಸಿದ್ದರು ಕೂಡ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿ ವಿಚಾರಣೆ “ಮಾಡಬಹುದು ಎಂಬಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು, “ಇಂಡಿಯಾ ಕಾರೆಟ್ ಪ್ರೈ.ಲಿ. ವಿರುದ್ಧ ಕರ್ನಾಟಕ ರಾಜ್ಯ” ಎಂಬ ಪ್ರಕರಣದ ತೀರ್ಪಿನಲ್ಲಿ ಹೇಳಿರುತ್ತದೆ. ಸದರಿ ತೀರ್ಪಿನ ಪ್ರತಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿನ ಅಂಶಗಳನ್ನು ಪರಿಗಣಿಸಿ, ಸೂಕ್ತ ಆದೇಶ ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಹಲವು ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ಪಕ್ಷದವರು! ಸ್ನೇಹಮಯಿ ಕೃಷ್ಣ ಶಾಕಿಂಗ್ ಹೇಳಿಕೆ

ಇದನ್ನೂ ಓದಿ
Image
ಮುಡಾ ಹಗರಣ: ‘‘ಹಲವು ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ಪಕ್ಷದವರು!’’
Image
ಮುಡಾ ಪ್ರಕರಣ: ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ ಮತ್ತೆ ಕೋರ್ಟ್​ ಮೊರೆ
Image
ಮುಡಾ: ಸಿದ್ದರಾಮಯ್ಯಗೆ ಕ್ಲೀನ್​ಚಿಟ್ ಬೆನ್ನಲ್ಲೇ ‘ಕೈ’ ಸಂಸದನಿಗೆ ಸಂಕಷ್ಟ
Image
ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಮುಡಾ ಸಂಕಷ್ಟ: ರಾಜ್ಯಪಾಲರಿಗೆ ಬಿಜೆಪಿ ದೂರು

ತನಿಖಾಧಿಕಾರಿಯು 1 ರಿಂದ 4ನೇ ಆರೋಪಿಗಳ ವಿಚಾರದಲ್ಲಿ ಸಲ್ಲಿಸಿರುವ ವರದಿಯನ್ನು ತಿರಸ್ಕರಿಸಬೇಕಾಗಿಯೂ ಲಭ್ಯವಿರುವ ಮತ್ತು ಮುಂದೆ ಲಭ್ಯವಾಗುವ ಸಾಕ್ಷ್ಯಾಧಾರಗಳ ಮೂಲಕ 1 ರಿಂದ 4ನೇ ಆರೋಪಿಗಳ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಪಡಿಸಲು ಬೇಕಾದ ಮುಂದಿನ ಕಾನೂನು ಪ್ರಕ್ರಿಯೆ ನಡೆಸಲು ಅನುಮತಿ ನೀಡಬೇಕಾಗಿಯೂ, ಮಾನ್ಯ ನ್ಯಾಯಾಲಯಕ್ಕೆ ಸೂಕ್ತ ಮತ್ತು ನ್ಯಾಯ ಸಮ್ಮತ ಎಂದು ಕಂಡು ಬರುವ ಇತರೆ ಸೂಕ್ತ ಆದೇಶವನ್ನು ಮಾಡಬೇಕಾಗಿಯೂ ಮಾನ್ಯ ನ್ಯಾಯಾಲಯವನ್ನು ಕಳಕಳಿಯಿಂದ ಮನವಿ ಮಾಡಿದ್ದಾರೆ.

ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಿಷ್ಟು 

ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ಗೆ ತಕರಾರು ಅರ್ಜಿ ಸಲ್ಲಿಕೆ ಬಳಿಕ ಟಿವಿ9 ಗೆ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯಿಸಿದ್ದು, ಮೈಸೂರು ಲೋಕಾಯುಕ್ತ ಪೊಲೀಸರು ನಿರೀಕ್ಷೆಯಂತೆ ಬಿ ವರದಿ ಸಲ್ಲಿಸಿದ್ದಾರೆ. ಇದು ಮುಂಚಿತವಾಗಿ ಹೀಗೆ ಆಗುತ್ತೆ ಅಂತಾ ಗೊತ್ತಾಗಿತ್ತು. ಹಾಗಾಗಿ ಇದೀಗ ತಕರಾರು ಅರ್ಜಿಯನ್ನ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯಗೆ ಕ್ಲೀನ್​ಚಿಟ್ ಬೆನ್ನಲ್ಲೇ ಕಾಂಗ್ರೆಸ್ ಸಂಸದನಿಗೆ ಸಂಕಷ್ಟ, ಲೋಕಾ ವರದಿಯಲ್ಲೇನಿದೆ?

ತಕರಾರು ಅರ್ಜಿಯಲ್ಲಿಯೇ ಆರೋಪ ಸಾಬೀತಾಗುವಂತಹ ಎಲ್ಲಾ ಅಂಶಗಳು ಇವೆ. ನನ್ನ ಪರವಾಗಿ ನಾನೇ ವಾದ ಮಂಡನೆ ಮಾಡಲಿದ್ದೇನೆ. ಕಾನೂನು ಅರಿವು ಇರುವವರು ತಾವಾಗಿಯೇ ವಾದಿಸಬಹುದು. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆ ಇದೆ. ಸದ್ಯಕ್ಕೆ ಬೆದರಿಕೆ, ಆಮಿಷಗಳು ಬರುವುದು ನಿಂತಿದೆ. ಮೊದಲು ನಾನು ಒಂದು ದೂರು ನೀಡಿದ್ದೆ, ಆ ದೂರಿನ ಬಳಿಕ ನಿಂತಿದೆ ಎಂದು ಸ್ನೇಹಮಯಿಕೃಷ್ಣ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Fri, 7 March 25

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?