AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾದ ಮೊದಲ ದಿನ ಮುಡಾಮಯ: ಮಹಿಷ ಮರ್ಧಿನಿ ಪೂಜೆಯಲ್ಲಿ ಮಾರ್ದನಿಸಿದ ಜಿಟಿ ದೇವೇಗೌಡ ಮಾತು

ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿ ಚಾಲನೆಯೇ ಸಿಕ್ಕಿದೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾವಿರಾರು ಜನ ಸೇರಿದ್ದರು. ಆದ್ರೆ ಮುಡಾ ಸಂಕಷ್ಟದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಮುಖದಲ್ಲಿ ಮಾತ್ರ ನಗುವೇ ಇರಲಿಲ್ಲ. ಕಂಪ್ಲೀಟ್ ಮಂಕಾಗಿದ್ದರು. ಆದ್ರೆ ಯಾವಾಗ ವೇದಿಕೆ ಮೇಲೆ ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಭಾಷಣ ಶುರು ಮಾಡಿದರೋ ಆಗ ಸೀನೇ ಚೇಂಜ್ ಆಗಿತ್ತು. ಸಿದ್ದರಾಮಯ್ಯಗೆ ನೂರಾನೇ ಬಲವೇ ಬಂದಂತಾಯ್ತು. ಮೈಸೂರು ದಸರಾದ ಮೊದಲ ದಿನ ಮುಡಾಮಯವಾಗಿದೆ.

ಮೈಸೂರು ದಸರಾದ ಮೊದಲ ದಿನ ಮುಡಾಮಯ: ಮಹಿಷ ಮರ್ಧಿನಿ ಪೂಜೆಯಲ್ಲಿ ಮಾರ್ದನಿಸಿದ ಜಿಟಿ ದೇವೇಗೌಡ ಮಾತು
ಪ್ರಸನ್ನ ಗಾಂವ್ಕರ್​
| Edited By: |

Updated on:Oct 03, 2024 | 10:42 PM

Share

ಮೈಸೂರು, (ಅಕ್ಟೋಬರ್ 03): ಪೂಜೆ ಜೊತೆಗೆ ಹಗರಣದ ಮಾತು..ನಾಡ ಹಬ್ಬದ ಉದ್ಘಾಟನೆಯಲ್ಲೂ ನಾಡದೊರೆಯ ಹೊಗಳಿಕೆ..ವಿಶ್ವ ವಿಖ್ಯಾತ ಮೈಸೂರು ದಸರಾ ಮಹತ್ಸೋವದ ಸಂಪೂರ್ಣ ಮುಡಾ ಮಯ ಆಗಿತ್ತು. ಮಹಿಷ ಮರ್ಧಿನಿ ಪೂಜೆಯಲ್ಲಿ ಮಾರ್ದನಿಸಿದ್ದು ಮುಡಾ ಮತ್ತು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಆಡಿದ ಮಾತು. ಹೌದು… ಮುಡಾ ಹಗರಣದಲ್ಲಿ ಸಿಲುಕಿರೋ ಸಿಎಂ, ತಮ್ಮ ಸ್ಥಾನದಿಂದ ಕೆಳಗಿಳಿಯಲೇ ಬೇಕು ಎಂದು ಬಿಜೆಪಿ, ಜೆಡಿಎಸ್‌ ನಾಯಕರು ಕೂಗೆಬ್ಬಿಸಿದ್ದಾರೆ. ಹೋದಲ್ಲಿ ಬಂದಲ್ಲಿ ಸಿಎಂಗೆ ರಾಜೀನಾಮೆ ಆಗ್ರಹವನ್ನೇ ಮಾಡ್ತಿದ್ದಾರೆ.ಒಂದು ಹೆಜ್ಜೆ ಮುಂದಿರೋ ಕೇಂದ್ರ ಸಚಿವ ಕುಮಾರಸ್ವಾಮಿ, ಮುಖ್ಯಮಂತ್ರಿಗಳ ವಿರುದ್ಧ ಕೆಂಡಕಾರುತ್ತಿದ್ದಾರೆ. ಆದ್ರೆ ಅದೇ ಜೆಡಿಎಸ್‌ ಶಾಸಕ, ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಅಲ್ಲದೇ ಪರೋಕ್ಷವಾಗಿ ತಮ್ಮದೇ ಪಕ್ಷದ ನಾಯಕ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಮೈಸೂರು ದಸರಾ ಉದ್ಘಾಟನೆಯಲ್ಲೂ ಮುಡಾ ಪಾಲಿಟಿಕ್ಸ್​!

ಇಂದು (ಅಕ್ಟೋಬರ್ 03) ಬೆಳಗ್ಗೆ 9.15ರಿಂದ 9.40ರೊಳಗಿನ ಶುಭ ವೃಶ್ಚಿಕ ಲಗ್ನದಲ್ಲಿ ನಾಡ ಹಬ್ಬ ದಸರಾಗೆ ಚಾಲನೆ ನೀಡಲಾಯ್ತು. ಹಿರಿಯ ಸಾಹಿತಿ ಡಾ. ಹಂಪ ನಾಗರಾಜಯ್ಯ ದಸರಾ ಉದ್ಘಾಟಿಸಿದ್ರು. ಪ್ರತೀ ವರ್ಷದಂತೆ ಈ ಕಾರ್ಯಕ್ರಮ ನಡೆದಿತ್ತು ಅಷ್ಟೇ..ಆ ಬಳಿಕ ಇಡೀ ವೇದಿಕೆ ಕಾರ್ಯಕ್ರಮ ಮುಡಾ ಮಯ ಆಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆಗಿರೋ ಜಿಟಿ ದೇವೇಗೌಡ, ಮಾತ್‌ ಮಾತಿನಲ್ಲೂ ಸಿಎಂ ಸಿದ್ದರಾಮಯ್ಯನವರನ್ನು ಹಾಡಿಹೊಗಳಿದ್ರು. ಅದರಲ್ಲೂ ನೇರವಾಗಿ ಮುಡಾ ಅಖಾಡಕ್ಕೆ ಇಳಿದ ಜಿಟಿಡಿ, ಎಫ್‌ಐಆರ್‌ ಆದ್ರೆ ರಾಜೀನಾಮೆ ಕೊಡಬೇಕಾ? ಹಾಗಾಂತ ಕಾನೂನು ಇದ್ಯಾ? ಕುಮಾರಸ್ವಾಮಿಯನ್ನ ಕೇಳಿದರೆ ಕೊಡುತ್ತಾರಾ ಎಂದು ನೇರಾ ತಮ್ಮ ನಾಯಕನನ್ನೇ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಸಿದ್ದರಾಮಯ್ಯ ಯಾಕೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಬೆನ್ನಿಗೆ ನಿಂತ ಜಿಟಿಡಿ

ಜಿಟಿಡಿಗೆ ಸಿದ್ದರಾಮಯ್ಯ ಧನ್ಯವಾದ

ಸಿಎಂ ಸಿದ್ದರಾಮಯ್ಯರ ಅವರನ್ನು ಹೊಗಳುತ್ತಿದ್ದಂತೆ ಜೆಡಿಎಸ್‌ ಶಾಸಕನಿಗೆ ವೇದಿಕೆಯಲ್ಲೇ ದೊಡ್ಡ ಗೌರವ ಸಿಕ್ಕಿತ್ತು. ಭಾಷಣ ಮುಗಿಸಿ ಬಂದ ಜಿಟಿಡಿಗೆ ಎದ್ದು ನಿಂತು ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಿಟಿಡಿ ತಮ್ಮ ಪರ ಮಾತನಾಡಿದ್ದಕ್ಕೆ ಧನ್ಯವಾದ ಹೇಳಿದ್ರು. ಅಷ್ಟೇ ಅಲ್ಲ ಅವರ ಮಾತಿನಿಂದ ಬಲ ಬಂದಿದೆ, ಸತ್ಯಮೇವ ಜಯತೆ ಎಂದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಸಿಎಂ, ಚಾಮುಂಡಿ ಕೃಪೆಯಿಂದ ಈವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ವರ್ಷ ರಾಜಕಾರಣ ಮಾಡಲು ಆಗ್ತಿರಲಿಲ್ಲ ಅಂತಾ ಪರೋಕ್ಷವಾಗಿ ಮುಡಾ ಹಗರಣದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಹೇಳಿದರು.

ಈ ಮಧ್ಯೆ, ಜಿಟಿಡಿ ಹೇಳಿಕೆ ಕಾಂಗ್ರೆಸ್ ನಾಯಕರಿಗೆ ಅಸ್ತ್ರವಾಗಿ ಸಿಕ್ಕಿದ್ದು, ಜಿಟಿಡಿ ಹೇಳಿಕೆಯನ್ನ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಸಚಿವರು ಸ್ವಾಗತಿಸಿದ್ದಾರೆ. ಆದ್ರೆ, ಬಿಜೆಪಿ ನಾಯಕರು ಜಿಟಿಡಿ ಹೇಳಿಕೆಗೆ ಗರಂ ಆಗಿದ್ದಾರೆ. ದಸರಾ ಕಾರ್ಯಕ್ರಮವನ್ನ ರಾಜಕೀಯಕ್ಕೆ ಬಳಸಿದ್ದು ತಪ್ಪು ಎಂದು ಛಲವಾದಿ ನಾರಾಯಣ ಸ್ವಾಮಿ ಕಿಡಿ ಕಾರಿದ್ದಾರೆ.

ಒಟ್ಟಿನಲ್ಲಿ ಬಿಜೆಪಿ, ಜೆಡಿಎಸ್‌ ಒಟ್ಟಾಗಿ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ರೆ, ಜೆಡಿಎಸ್‌ ನಾಯಕ ಮಾತ್ರ ಸಿದ್ದರಾಮಯ್ಯನವರನ್ನು ಹಾಡಿಹೊಗಳಿದ್ದಾರೆ. ರಾಜೀನಾಮೆ ಯಾಕೆ ಎಂದು ಪ್ರಶ್ನಿಸಿದ್ದಾರೆ. ಅದೇನೇ ಇರಲಿ ನಾಡಹಬ್ಬ ಮುಡಾಮಯ ಆಗಿರೋದಂತು ಸತ್ಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:35 pm, Thu, 3 October 24

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?