AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ, ನಕಲಿ ಸಹಿ ಆರೋಪ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಸಂಕಷ್ಟ ತಂದೊಡ್ಡುತ್ತಲೇ ಇದೆ. ಇದೀಗ ನಕಲಿ ಸಹಿ ಮಾಡಿರುವ ಆರೋಪದಲ್ಲಿ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರು ಮಾಡಿರುವ ಆರೋಪಗಳ ವಿವರ ಇಲ್ಲಿದೆ.

ಮುಡಾ ಹಗರಣ, ನಕಲಿ ಸಹಿ ಆರೋಪ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು
ಸಿದ್ದರಾಮಯ್ಯImage Credit source: PTI
ದಿಲೀಪ್​, ಚೌಡಹಳ್ಳಿ
| Edited By: |

Updated on:Aug 28, 2024 | 11:29 AM

Share

ಮೈಸೂರು, ಆಗಸ್ಟ್ 28: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಕಂಟಕ ತಪ್ಪುತ್ತಲೇ ಇಲ್ಲ. ಒಂದೆಡೆ, ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್​ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲೇ ಇದೀಗ ಮೈಸೂರಿನಲ್ಲಿ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ. ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.

ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಸಹಚರರ ವಿರುದ್ಧವೂ ಕ್ರಮ ವಹಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಸಿಎಂ ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆಯೇ ದೂರು ದಾಖಲಾಗಿದೆ. ಪತ್ರದಲ್ಲಿರುವ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವೈಟ್ನರ್ ಹಿಂದಿನ ಪದಗಳನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಎಂ.ಲಕ್ಷ್ಮಣ್ ಹಾಗೂ ಪಾರ್ವತಿ ಸಂಚು ರೂಪಿಸಿ ಸುಳ್ಳು ಪತ್ರ ಸೃಷ್ಟಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಪಾರ್ವತಿ ಸಹಿಯಲ್ಲಿ ಒಟ್ಟು ಒಂಬತ್ತು ವ್ಯತ್ಯಾಸಗಳನ್ನು ದೂರುದಾರರು ಗುರುತಿಸಿದ್ದಾರೆ.

ದೂರುದಾರರು ಗುರುತಿಸಿರುವ 9 ಸಹಿ ವ್ಯತ್ಯಾಸಗಳು

  1. ಸಹಿಗಳ ಪಕ್ಕದಲ್ಲಿರುವ ಎಕ್ಸ್ ಗುರುತುಗಳಲ್ಲಿ ವ್ಯತ್ಯಾಸ ಕಂಡು ಬರುತ್ತದೆ (ಬೇರೆ, ಬೇರೆ ರಿತಿಯಾಗಿದೆ).
  2. ನನ್ನ ಬಳಿ ಇರುವ ದಾಖಲೆಯಲ್ಲಿ ಇರುವ ಸಹಿಗೂ ಮತ್ತು ಪಕ್ಕದಲ್ಲಿರುವ ಎಕ್ಸ್ ಗುರುತಿಗೂ ಅಂತರ ಕಡಿಮೆ ಇರುವುದು ಕಂಡು ಬಂದರೆ, ನಂತರ ಬಿಡುಗಡೆ ಮಾಡಲಾದ ವೀಡಿಯೋದಲ್ಲಿ ಕಂಡು ಬರುವ ದಾಖಲೆಯ ಸಹಿಗೂ ಮತ್ತು ಪಕ್ಕದಲ್ಲಿರುವ ಎಕ್ಸ್ ಗುರುತಿಗೂ ಅಂತರ ಹೆಚ್ಚು ಇರುವುದು ಕಂಡು ಬರುತ್ತದೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.
  3. ನನ್ನ ಬಳಿ ಇರುವ ದಾಖಲೆಯಲ್ಲಿ ತ ಅಕ್ಷರ ಪಕ್ಕದಲ್ಲೇ ಪಿ ಅಕ್ಷರದ ಕೆಳಭಾಗದ ಗೆರೆ ಬಂದಿರುವುದು ಕಂಡು ಬರುತ್ತದೆ, ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿ ತ ಅಕ್ಷರದ ಮೇಲೆ ಪಿ ಅಕ್ಷರದ ಗೆರೆ ಇರುವುದು ಕಂಡು ಬರುತ್ತದೆ ಎಂದು ಅವರು ಆರೋಪಿಸಿದ್ದಾರೆ.
  4. ನನ್ನ ಬಳಿ ಇರುವ ದಾಖಲೆಯಲ್ಲಿ ಪಿ ಅಕ್ಷರದ ಉದ್ದಗೆರೆಯ ಮೇಲ್ಬಾಗದಲ್ಲಿ ಮುಂದೆ ಅಡ್ಡಗೆರೆ ಬಂದಿರುವುದಿಲ್ಲ, ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿ ಪಿ ಅಕ್ಷರದ ಉದ್ದಗೆರೆಯ ಮೇಲ್ಬಾಗದಲ್ಲಿ ಉದ್ದಗೆರೆಯ ಮುಂದೆ ಅಡ್ಡಗೆರೆ ಬಂದಿರುತ್ತದೆ ಎಂದು ಸ್ನೇಹಮಯಿ ಕೃಷ್ಣ ಉಲ್ಲೇಖಿಸಿದ್ದಾರೆ.
  5. ನನ್ನ ಬಳಿ ಇರುವ ದಾಖಲೆಯಲ್ಲಿರುವ ಆರ್ ಅಕ್ಷರಕ್ಕೂ, ವೀಡಿಯೋದಲ್ಲಿ ಕಂಡು ಬರುವ ದಾಖಲೆ ಯಲ್ಲಿರುವ ಆ‌ರ್ ಅಕ್ಷರಕ್ಕೂ ವ್ಯತ್ಯಾಸ ಕಂಡು ಬರುತ್ತದೆ ಎಂದು ಅವರು ದೂರಿದ್ದಾರೆ.
  6. ನನ್ನ ಬಳಿ ಇರುವ ದಾಖಲೆಯಲ್ಲಿರುವ ವಿ ಅಕ್ಷರಕ್ಕೂ, ವೀಡಿಯೋದಲ್ಲಿ ಕಂಡು ಬರುವ ದಾಖಲೆ ಯಲ್ಲಿರುವ ವಿ” ಅಕ್ಷರಕ್ಕೂ ವ್ಯತ್ಯಾಸ ಕಂಡು ಬರುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.
  7. ನನ್ನ ಬಳಿ ಇರುವ ದಾಖಲೆಯಲ್ಲಿರುವ ಟಿ ಅಕ್ಷರದ ಮೇಲ್ಬಾಗದಲ್ಲಿ ಎರಡು ಗೆರೆಗಳ ಮಧ್ಯೆ ಅಂತರ ಕಂಡು ಬರುವುದಿಲ್ಲ, ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿರುವ ಟಿ ಅಕ್ಷರದ ಮೇಲ್ಬಾಗದಲ್ಲಿ ಎರಡು ಗೆರೆಗಳ ನಡುವೆ ಅಂತರ ಕಾಣಿಸುತ್ತದೆ.
  8. ನನ್ನ ಬಳಿ ಇರುವ ದಾಖಲೆಯಲ್ಲಿರುವ ಐ ಅಕ್ಷರದ ಮೇಲ್ಬಾಗದಲ್ಲಿ ಚುಕ್ಕಿ ಇರುವುದು ಕಂಡು ಬರುವುದಿಲ್ಲ, ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿರುವ ಐ ಅಕ್ಷರದ ಮೇಲ್ಬಾಗದಲ್ಲಿ ಚುಕ್ಕಿ ಇರುವುದು ಕಂಡುಬರುತ್ತದೆ ಎಂದು ಅವರು ತಿಳಿಸಿದ್ದಾರೆ.
  9. ನನ್ನ ಬಳಿ ಇರುವ ದಾಖಲೆಯಲ್ಲಿನ ಎರಡನೇ ಗುಟದ ಎಡಭಾಗದಲ್ಲಿ ಟ್ಯಾಗ್ ಹಾಕಿರುವ ಗುರುತು ಕಾಣಿಸಿದರೆ, ಸೃಷ್ಟಿಸಿರುವ ದಾಖಲೆಯ ಬಲಭಾಗದಲ್ಲಿ ಟ್ಯಾಗ್ ಗುರುತು ಕಾಣಿಸುತ್ತದೆ.

ಇದನ್ನೂ ಓದಿ: ರಿಟ್ ಅರ್ಜಿಯಲ್ಲಿ ಕೋರ್ಟ್​ ಕಣ್ತಪ್ಪಿಸಿದ್ದಾರೆ ಸಿದ್ದರಾಮಯ್ಯ: ದೂರದಾರ ಸ್ನೇಹಮಹಿ ಕೃಷ್ಣ ಗಂಭೀರ ಆರೋಪ

ಈ ಮೇಲ್ಕಂಡಂತೆ ಒಟ್ಟು ಒಂಬತ್ತು ಪ್ರಮುಖ ವ್ಯತ್ಯಾಸಗಳು ಕಂಡುಬರುತ್ತವೆ ಎಂದು ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Wed, 28 August 24

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ