AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ಅಧಿಕಾರಿಗಳಿಂದ ತೂರಿಬಂದ ಪ್ರಶ್ನೆಗಳಿವು

ಮುಡಾ ಹಗರಣ ಸಂಬಂಧ ದಾಖಲೆಗಳ ಪರಿಶೀಲನೆ, ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಚುರುಕುಗೊಳಿಸಿದೆ. ಮಂಗಳವಾರ ಮೈಸೂರಿನ ವಿವಿಧೆಡೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ಮಾಡಿ ಕೇಳಿರುವ ಪ್ರಶ್ನೆಗಳ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ವಿವರ ಇಲ್ಲಿದೆ.

ಮುಡಾ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ಅಧಿಕಾರಿಗಳಿಂದ ತೂರಿಬಂದ ಪ್ರಶ್ನೆಗಳಿವು
ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ದಾಳಿ, ಪರಿಶೀಲನೆ
Follow us
ದಿಲೀಪ್​, ಚೌಡಹಳ್ಳಿ
| Updated By: Ganapathi Sharma

Updated on: Oct 30, 2024 | 9:38 AM

ಮೈಸೂರು, ಅಕ್ಟೋಬರ್ 30: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ 50:50 ಹಗರಣ ಸಂಬಂಧ ಮೈಸೂರಿನ ವಿವಿಧೆಡೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅನೇಕ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದರು. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಮೇಲೂ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅನೇಕ ದಾಖಲೆಗಳನ್ನು ಪರಿಶೀಲನೆ ಮಾಡಿದ್ದರು. ಇದರಿಂದ, ವಕ್ರತುಂಡ ಸೊಸೈಟಿ ಹೆಸರಿನಲ್ಲಿಯೂ ಅವ್ಯವಹಾರ ನಡೆದಿತ್ತೇ ಎಂಬ ಅನುಮಾನ ಬಲವಾಗಿತ್ತು.

ಇದೀಗ, ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಕೇಳಿದ್ದು ತಿಳಿದುಬಂದಿದೆ. ಇಡಿ ಅಧಿಕಾರಿಗಳ ಪ್ರಶ್ನೆಗಳು ‘ಟಿವಿ9’ಗೆ ಲಭ್ಯವಾಗಿದೆ.

ಹಲವು ಪ್ರಶ್ನೆಗಳನ್ನ ಸಿದ್ಧಪಡಿಸಿಕೊಂಡು ಬಂದಿದ್ದ ಇಡಿ ಅಧಿಕಾರಿಗಳು ಬ್ಯುಲ್ಡರ್ ಜಯರಾಮ್​​ಗೆ ಸೇರಿದ ಎಂಎಂಜಿ ಕನ್ಸಟ್ರಕ್ಷನ್ ಕಚೇರಿ ಹಾಗೂ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದಲ್ಲೇ ಹೇಳಿಕೆ ದಾಖಲಿಸಿದ್ದಾರೆ. ಪ್ರತಿಯೊಂದು ಪ್ರಶ್ನೆ ಹಾಗೂ ಉತ್ತರವನ್ನ ಕಚೇರಿಯಲ್ಲೇ ಕುಳಿತು ಟೈಪ್ ಮಾಡಿಕೊಂಡಿದ್ದಾರೆ. ಸಿದ್ದಪಡಿಸಿದ ಪ್ರಶ್ನೆಗಳು ಜೊತೆಗೆ ದಾಖಲೆ ಪರಿಶೀಲನೆ ನಂತರ ಬಂದ ಅನುಮಾನದ ಮೇಲೆ ಪ್ರಶ್ನೆಗಳನ್ನು ಕೇಳಲಾಗಿದೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಡಿ ಅಧಿಕಾರಿಗಳು ಕೇಳಿದ್ದಾರೆ.

ಇ.ಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿವು

  1. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ?
  2. ಎಷ್ಟು ಬ್ಯಾಂಕ್ ಅಕೌಂಟ್​​ಗಳನ್ನು ಹೊಂದಿದ್ದೀರಿ?
  3. ಸಂಘದ ಸಾಮಾನ್ಯ ಸಭೆ ಯಾವಾಗ ನಡೆಸಿದ್ದೀರಿ?
  4. ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಯಾವುದು?
  5. ಸಹಕಾರ ಸಂಘದ ನಿರ್ದೇಶಕರ ವಿವರ ವಿವರಿಸಿ?
  6. ಇಲ್ಲಿಯವರೆಗೆ ಎಷ್ಟು ಲೇಔಟ್ ನಿರ್ಮಾಣ ಮಾಡಿದ್ದೀರಿ?
  7. ಎಷ್ಟು ಜನರಿಂದ ಮುಂಗಡವಾಗಿ ಹಣ ಪಡೆದಿದ್ದೀರಿ?
  8. ಇನ್ನೂ ಎಷ್ಟು ಜನರಿಗೆ ನಿವೇಶನ ಕೊಡಬೇಕು?
  9. ಹಲವು ಬ್ಯಾಂಕ್ ಖಾತೆಗಳಿಗೆ kyc ಲಿಂಕ್ ಆಗಿಲ್ಲ, ದಾಖಲೆಗಳು ಇಲ್ಲದಿದ್ದರು ಹೇಗೆ ವ್ಯವಹಾರ ಮಾಡುತ್ತಿದ್ದೀರಿ?
  10. ಮುಡಾದಿಂದ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘಕ್ಕೆ 50:50 ಅನುಪಾತದಡಿ ಮುಡಾದಿಂದ ಎಷ್ಟು ನಿವೇಶನ ಬಂದಿದೆ?

ಇದನ್ನೂ ಓದಿ: ಇಡಿ ದಾಳಿ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ನಡೆದಿತ್ತಾ ಬಹುದೊಡ್ಡ ಭ್ರಷ್ಟಾಚಾರ?

ಕಚೇರಿಯಲ್ಲಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ಮಾಡಿ ಇಡಿ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್