AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ಅಧಿಕಾರಿಗಳಿಂದ ತೂರಿಬಂದ ಪ್ರಶ್ನೆಗಳಿವು

ಮುಡಾ ಹಗರಣ ಸಂಬಂಧ ದಾಖಲೆಗಳ ಪರಿಶೀಲನೆ, ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಚುರುಕುಗೊಳಿಸಿದೆ. ಮಂಗಳವಾರ ಮೈಸೂರಿನ ವಿವಿಧೆಡೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ಮಾಡಿ ಕೇಳಿರುವ ಪ್ರಶ್ನೆಗಳ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ವಿವರ ಇಲ್ಲಿದೆ.

ಮುಡಾ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ಅಧಿಕಾರಿಗಳಿಂದ ತೂರಿಬಂದ ಪ್ರಶ್ನೆಗಳಿವು
ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ದಾಳಿ, ಪರಿಶೀಲನೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Oct 30, 2024 | 9:38 AM

Share

ಮೈಸೂರು, ಅಕ್ಟೋಬರ್ 30: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ 50:50 ಹಗರಣ ಸಂಬಂಧ ಮೈಸೂರಿನ ವಿವಿಧೆಡೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅನೇಕ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದರು. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಮೇಲೂ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅನೇಕ ದಾಖಲೆಗಳನ್ನು ಪರಿಶೀಲನೆ ಮಾಡಿದ್ದರು. ಇದರಿಂದ, ವಕ್ರತುಂಡ ಸೊಸೈಟಿ ಹೆಸರಿನಲ್ಲಿಯೂ ಅವ್ಯವಹಾರ ನಡೆದಿತ್ತೇ ಎಂಬ ಅನುಮಾನ ಬಲವಾಗಿತ್ತು.

ಇದೀಗ, ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಕೇಳಿದ್ದು ತಿಳಿದುಬಂದಿದೆ. ಇಡಿ ಅಧಿಕಾರಿಗಳ ಪ್ರಶ್ನೆಗಳು ‘ಟಿವಿ9’ಗೆ ಲಭ್ಯವಾಗಿದೆ.

ಹಲವು ಪ್ರಶ್ನೆಗಳನ್ನ ಸಿದ್ಧಪಡಿಸಿಕೊಂಡು ಬಂದಿದ್ದ ಇಡಿ ಅಧಿಕಾರಿಗಳು ಬ್ಯುಲ್ಡರ್ ಜಯರಾಮ್​​ಗೆ ಸೇರಿದ ಎಂಎಂಜಿ ಕನ್ಸಟ್ರಕ್ಷನ್ ಕಚೇರಿ ಹಾಗೂ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದಲ್ಲೇ ಹೇಳಿಕೆ ದಾಖಲಿಸಿದ್ದಾರೆ. ಪ್ರತಿಯೊಂದು ಪ್ರಶ್ನೆ ಹಾಗೂ ಉತ್ತರವನ್ನ ಕಚೇರಿಯಲ್ಲೇ ಕುಳಿತು ಟೈಪ್ ಮಾಡಿಕೊಂಡಿದ್ದಾರೆ. ಸಿದ್ದಪಡಿಸಿದ ಪ್ರಶ್ನೆಗಳು ಜೊತೆಗೆ ದಾಖಲೆ ಪರಿಶೀಲನೆ ನಂತರ ಬಂದ ಅನುಮಾನದ ಮೇಲೆ ಪ್ರಶ್ನೆಗಳನ್ನು ಕೇಳಲಾಗಿದೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಡಿ ಅಧಿಕಾರಿಗಳು ಕೇಳಿದ್ದಾರೆ.

ಇ.ಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿವು

  1. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ?
  2. ಎಷ್ಟು ಬ್ಯಾಂಕ್ ಅಕೌಂಟ್​​ಗಳನ್ನು ಹೊಂದಿದ್ದೀರಿ?
  3. ಸಂಘದ ಸಾಮಾನ್ಯ ಸಭೆ ಯಾವಾಗ ನಡೆಸಿದ್ದೀರಿ?
  4. ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಯಾವುದು?
  5. ಸಹಕಾರ ಸಂಘದ ನಿರ್ದೇಶಕರ ವಿವರ ವಿವರಿಸಿ?
  6. ಇಲ್ಲಿಯವರೆಗೆ ಎಷ್ಟು ಲೇಔಟ್ ನಿರ್ಮಾಣ ಮಾಡಿದ್ದೀರಿ?
  7. ಎಷ್ಟು ಜನರಿಂದ ಮುಂಗಡವಾಗಿ ಹಣ ಪಡೆದಿದ್ದೀರಿ?
  8. ಇನ್ನೂ ಎಷ್ಟು ಜನರಿಗೆ ನಿವೇಶನ ಕೊಡಬೇಕು?
  9. ಹಲವು ಬ್ಯಾಂಕ್ ಖಾತೆಗಳಿಗೆ kyc ಲಿಂಕ್ ಆಗಿಲ್ಲ, ದಾಖಲೆಗಳು ಇಲ್ಲದಿದ್ದರು ಹೇಗೆ ವ್ಯವಹಾರ ಮಾಡುತ್ತಿದ್ದೀರಿ?
  10. ಮುಡಾದಿಂದ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘಕ್ಕೆ 50:50 ಅನುಪಾತದಡಿ ಮುಡಾದಿಂದ ಎಷ್ಟು ನಿವೇಶನ ಬಂದಿದೆ?

ಇದನ್ನೂ ಓದಿ: ಇಡಿ ದಾಳಿ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ನಡೆದಿತ್ತಾ ಬಹುದೊಡ್ಡ ಭ್ರಷ್ಟಾಚಾರ?

ಕಚೇರಿಯಲ್ಲಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ಮಾಡಿ ಇಡಿ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್