AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ಅಧಿಕಾರಿಗಳಿಂದ ತೂರಿಬಂದ ಪ್ರಶ್ನೆಗಳಿವು

ಮುಡಾ ಹಗರಣ ಸಂಬಂಧ ದಾಖಲೆಗಳ ಪರಿಶೀಲನೆ, ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಚುರುಕುಗೊಳಿಸಿದೆ. ಮಂಗಳವಾರ ಮೈಸೂರಿನ ವಿವಿಧೆಡೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ಮಾಡಿ ಕೇಳಿರುವ ಪ್ರಶ್ನೆಗಳ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ವಿವರ ಇಲ್ಲಿದೆ.

ಮುಡಾ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ಅಧಿಕಾರಿಗಳಿಂದ ತೂರಿಬಂದ ಪ್ರಶ್ನೆಗಳಿವು
ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ದಾಳಿ, ಪರಿಶೀಲನೆ
ದಿಲೀಪ್​, ಚೌಡಹಳ್ಳಿ
| Edited By: |

Updated on: Oct 30, 2024 | 9:38 AM

Share

ಮೈಸೂರು, ಅಕ್ಟೋಬರ್ 30: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ 50:50 ಹಗರಣ ಸಂಬಂಧ ಮೈಸೂರಿನ ವಿವಿಧೆಡೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅನೇಕ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದರು. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಮೇಲೂ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅನೇಕ ದಾಖಲೆಗಳನ್ನು ಪರಿಶೀಲನೆ ಮಾಡಿದ್ದರು. ಇದರಿಂದ, ವಕ್ರತುಂಡ ಸೊಸೈಟಿ ಹೆಸರಿನಲ್ಲಿಯೂ ಅವ್ಯವಹಾರ ನಡೆದಿತ್ತೇ ಎಂಬ ಅನುಮಾನ ಬಲವಾಗಿತ್ತು.

ಇದೀಗ, ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಕೇಳಿದ್ದು ತಿಳಿದುಬಂದಿದೆ. ಇಡಿ ಅಧಿಕಾರಿಗಳ ಪ್ರಶ್ನೆಗಳು ‘ಟಿವಿ9’ಗೆ ಲಭ್ಯವಾಗಿದೆ.

ಹಲವು ಪ್ರಶ್ನೆಗಳನ್ನ ಸಿದ್ಧಪಡಿಸಿಕೊಂಡು ಬಂದಿದ್ದ ಇಡಿ ಅಧಿಕಾರಿಗಳು ಬ್ಯುಲ್ಡರ್ ಜಯರಾಮ್​​ಗೆ ಸೇರಿದ ಎಂಎಂಜಿ ಕನ್ಸಟ್ರಕ್ಷನ್ ಕಚೇರಿ ಹಾಗೂ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದಲ್ಲೇ ಹೇಳಿಕೆ ದಾಖಲಿಸಿದ್ದಾರೆ. ಪ್ರತಿಯೊಂದು ಪ್ರಶ್ನೆ ಹಾಗೂ ಉತ್ತರವನ್ನ ಕಚೇರಿಯಲ್ಲೇ ಕುಳಿತು ಟೈಪ್ ಮಾಡಿಕೊಂಡಿದ್ದಾರೆ. ಸಿದ್ದಪಡಿಸಿದ ಪ್ರಶ್ನೆಗಳು ಜೊತೆಗೆ ದಾಖಲೆ ಪರಿಶೀಲನೆ ನಂತರ ಬಂದ ಅನುಮಾನದ ಮೇಲೆ ಪ್ರಶ್ನೆಗಳನ್ನು ಕೇಳಲಾಗಿದೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಡಿ ಅಧಿಕಾರಿಗಳು ಕೇಳಿದ್ದಾರೆ.

ಇ.ಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿವು

  1. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ?
  2. ಎಷ್ಟು ಬ್ಯಾಂಕ್ ಅಕೌಂಟ್​​ಗಳನ್ನು ಹೊಂದಿದ್ದೀರಿ?
  3. ಸಂಘದ ಸಾಮಾನ್ಯ ಸಭೆ ಯಾವಾಗ ನಡೆಸಿದ್ದೀರಿ?
  4. ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಯಾವುದು?
  5. ಸಹಕಾರ ಸಂಘದ ನಿರ್ದೇಶಕರ ವಿವರ ವಿವರಿಸಿ?
  6. ಇಲ್ಲಿಯವರೆಗೆ ಎಷ್ಟು ಲೇಔಟ್ ನಿರ್ಮಾಣ ಮಾಡಿದ್ದೀರಿ?
  7. ಎಷ್ಟು ಜನರಿಂದ ಮುಂಗಡವಾಗಿ ಹಣ ಪಡೆದಿದ್ದೀರಿ?
  8. ಇನ್ನೂ ಎಷ್ಟು ಜನರಿಗೆ ನಿವೇಶನ ಕೊಡಬೇಕು?
  9. ಹಲವು ಬ್ಯಾಂಕ್ ಖಾತೆಗಳಿಗೆ kyc ಲಿಂಕ್ ಆಗಿಲ್ಲ, ದಾಖಲೆಗಳು ಇಲ್ಲದಿದ್ದರು ಹೇಗೆ ವ್ಯವಹಾರ ಮಾಡುತ್ತಿದ್ದೀರಿ?
  10. ಮುಡಾದಿಂದ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘಕ್ಕೆ 50:50 ಅನುಪಾತದಡಿ ಮುಡಾದಿಂದ ಎಷ್ಟು ನಿವೇಶನ ಬಂದಿದೆ?

ಇದನ್ನೂ ಓದಿ: ಇಡಿ ದಾಳಿ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ನಡೆದಿತ್ತಾ ಬಹುದೊಡ್ಡ ಭ್ರಷ್ಟಾಚಾರ?

ಕಚೇರಿಯಲ್ಲಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ಮಾಡಿ ಇಡಿ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್