AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆದಷ್ಟು ಬಯಲಾಗ್ತಿದೆ ಮುಡಾ ರಹಸ್ಯ: 22 ಕೋಟಿ ರೂ. ಲಂಚ ಪಡೆದಿದ್ದ ಮಾಜಿ ಆಯುಕ್ತ, ಇಡಿ ತನಿಖೆಯಲ್ಲಿ ಬಟಾಬಯಲು

ಮುಡಾ ಹಗರಣ ಸಂಬಧ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಂಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ ಬರೋಬ್ಬರಿ 22.47 ಕೋಟಿ ರೂ. ಲಂಚ ಪಡೆದಿದ್ದರು ಎಂಬ ಸ್ಫೋಟಕ ಮಾಹಿತಿ ಈಗ ಹೊರಬಿದ್ದಿದೆ. 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲು ಅವರು ಈ ಲಂಚ ಪಡೆದಿದ್ದರು ಎನ್ನಲಾಗಿದೆ.

ಬಗೆದಷ್ಟು ಬಯಲಾಗ್ತಿದೆ ಮುಡಾ ರಹಸ್ಯ: 22 ಕೋಟಿ ರೂ. ಲಂಚ ಪಡೆದಿದ್ದ ಮಾಜಿ ಆಯುಕ್ತ, ಇಡಿ ತನಿಖೆಯಲ್ಲಿ ಬಟಾಬಯಲು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Dec 12, 2025 | 10:24 AM

Share

ಬೆಂಗಳೂರು, ಡಿಸೆಂಬರ್ 12: ಮುಡಾ ಹಗರಣ ಸಂಬಂಧ ನಡೆಯುತ್ತಿರುವ ಜಾರಿ ನಿರ್ದೇಶನಾಲಯದ (ED) ತನಿಖೆ ಒಂದೊಂದೇ ರಹಸ್ಯಗಳನ್ನು ಬಯಲಿಗೆಳೆಯುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು. ಅದಕ್ಕಾಗಿ 22.47 ಕೋಟಿ ರೂ. ಲಂಚ ಪಡೆದಿದ್ದರು ಎಂಬುದು ಇಡಿ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ವರದಿಯಾಗಿದೆ.

ಮನಿ ಲಾಂಡರಿಂಗ್ ಆ್ಯಕ್ಟ್ (ಪಿಎಂಎಲ್‌ಎ) ಅಡಿಯಲ್ಲಿ ನಡೆಸಲಾದ ತನಿಖೆ ವೇಳೆ, ಸುಮಾರು 700 ಕೋಟಿ ರೂ. ಮೌಲ್ಯದ 1,095 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿರುವುದು ಎಂದು ಮೂಲಗಳು ತಿಳಿಸಿವೆ. ಈ 1,095 ನಿವೇಶನಗಳ ಪಟ್ಟಿಯನ್ನು ಹಾಲಿ ಮುಡಾ ಆಯುಕ್ತರು ತನಿಖೆ ವೇಳೆ ಇಡಿಗೆ ಸಲ್ಲಿಸಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಹಗರಣದ ಸೂತ್ರಧಾರಿ

ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಇಡೀ ಹಗರಣದ ಸೂತ್ರಧಾರಿ ಎಂಬುದು ಇಡಿ ತನಿಖೆಯಿಂಗ ಗೊತ್ತಾಗಿದೆ. ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲು ಅವರು ನಗದು, ಚರ ಮತ್ತು ಸ್ಥಿರ ಆಸ್ತಿಗಳ ರೂಪದಲ್ಲಿ ಲಂಚ ಪಡೆದಿದ್ದಾರೆ ಎಂಬುದೂ ಬಹಿರಂಗವಾಗಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಉಲ್ಲೇಖಿಸಿದೆ.

ಯಾವೆಲ್ಲ ರೂಪದಲ್ಲಿ ಲಂಚ ಪಡೆದಿದ್ದಾರೆ ನೋಡಿ ಮುಡಾ ಮಾಜಿ ಆಯುಕ್ತ!

ದಿನೇಶ್ ಕುಮಾರ್ ಪಡೆದ 22.47 ಕೋಟಿ ರೂ. ಲಂಚದ ಪೈಕಿ, 34.65 ಲಕ್ಷ ರೂ. ನಗದು ಆಗಿದೆ. ಹೈ ಸೆಕ್ಯೂರಿಟಿ ಬಾಂಡ್ ಪೇಪರ್​ಗಳನ್ನು ದುರುಪಯೋಗಪಡಿಸಿಕೊಂಡು 8.28 ಕೋಟಿ ರೂ. ಪಡೆದಿದ್ದಾರೆ. ಚಾಮುಂಡೇಶ್ವರಿ ನಗರ ಸರ್ವೋದಯ ಸಂಘದ ಸದಸ್ಯರ ಮೂಲಕ 5.86 ಕೋಟಿ ರೂ., ಅಬ್ದುಲ್ ವಹೀದ್ ಅವರಿಂದ 3.62 ಕೋಟಿ ರೂ., ಕ್ಯಾಥೆಡ್ರಲ್ ಪ್ಯಾರಿಷ್ ಸೊಸೈಟಿಯಿಂದ 1.70 ಕೋಟಿ ರೂ., ನಿಂಗಮ್ಮ ಅವರಿಂದ 1.13 ಕೋಟಿ ರೂ., ಜೆಎಸ್‌ಎಸ್ ಮಹಾವಿದ್ಯಾಪೀಠ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ 1.02 ಕೋಟಿ ರೂ. ಮತ್ತು ನಿಂಗಮ್ಮ ಅವರಿಂದ 49 ಲಕ್ಷ ರೂ.ಗಳನ್ನು ಪಡೆದಿದ್ದಾರೆ. ಈ ಮೊತ್ತವನ್ನು ಪರಿಹಾರ ನಿವೇಶನಗಳನ್ನು ಅಕ್ರಮವಾಗಿ ಹಂಚಿದ್ದಕ್ಕೆ ಪ್ರತಿಯಾಗಿ ಪಡೆದಿದ್ದಾರೆ ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್,ವರದಿಯಲ್ಲೇನಿದೆ?

ಅಕ್ರಮ ನಿವೇಶನ ಹಂಚಿಕೆ ಮತ್ತು ಮಾರಾಟದ ಮೂಲಕ ಅಕ್ರಮವಾಗಿ ಹಣ ಗಳಿಸಿದವರಲ್ಲಿ ಹಲವಾರು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳು ಶಾಮೀಲಾಗಿರುವುದು ಕಂಡುಬಂದಿದೆ. ಸದ್ಯ ಪ್ರಕರಣ ಸಂಬಂಧ ಇಡಿ ತನಿಖೆ ಇನ್ನಷ್ಟು ಚುರುಕುಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್