AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ನಿವೇಶನ ವಾಪಸ್ ಕೊಟ್ಟು ತನಿಖೆ ಮಾಡಿಸಿ: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸಲಹೆ

ಮುಡಾ ಹಗರಣದ ವಿಚಾರವಾಗಿ ಮೈಸೂರು ಕೊಡಗು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅಚ್ಚರಿಯ ಮಾತುಗಳನ್ನಾಡಿದ್ದಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯಗೆ ಕೆಲವು ಸಲಹೆಯನ್ನೂ ನೀಡಿದ್ದಾರೆ. ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು ಎಂಬುದರ ವಿವರ ಇಲ್ಲಿದೆ.

ಮುಡಾ ನಿವೇಶನ ವಾಪಸ್ ಕೊಟ್ಟು ತನಿಖೆ ಮಾಡಿಸಿ: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸಲಹೆ
ಪ್ರತಾಪ್ ಸಿಂಹ
Follow us
ರಾಮ್​, ಮೈಸೂರು
| Updated By: Ganapathi Sharma

Updated on:Jul 24, 2024 | 2:06 PM

ಮೈಸೂರು, ಜುಲೈ 24: ‘ಸಿಎಂ ಸಿದ್ದರಾಮಯ್ಯ ಅವರೇ, ನಿಮಗೆ ಬಂದಿರುವ ನಿವೇಶನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಾಸ್ ಕೊಟ್ಟು ತನಿಖೆ ಮಾಡಿಸಿ’ ಎಂದು ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಸಿದ್ದರಾಮಯ್ಯರ 40 ವರ್ಷದ ರಾಜಕಾರಣವನ್ನು ಗಮನಿಸಿದರೆ ಅವರನ್ನು ಭ್ರಷ್ಟ ಅನ್ನಲು ಸಾಧ್ಯವಿಲ್ಲ. ಆದರೆ, ಈಗ ಸಿದ್ದರಾಮಯ್ಯ ಬಗ್ಗೆ ಅನುಮಾನ ಶುರುವಾಗಿದೆ. ಸೈಟ್ ವಾಪಾಸ್ ಕೊಟ್ಟು ತನಿಖೆ ಮಾಡಿಸುವುದೇ ಸೂಕ್ತ. ಇಲ್ಲದೇ ಇದ್ದರೆ ಸಿಎಂ‌ ಕುಟುಂಬದ ಕೇಸ್ ಇಟ್ಟುಕೊಂಡು ಹಲವರು ಬಚಾವ್ ಆಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯರನ್ನು ಉದ್ದೇಶಿಸಿ ಮಾತನಾಡಿದ ಪ್ರತಾಪ್ ಸಿಂಹ್, 40 ವರ್ಷಗಳಲ್ಲಿ ಕಳಂಕ ಅಂಟಿಸಿ ಕೊಳ್ಳದಿರುವ ನೀವು ಇದ್ಯಾವುದೋ 16 ಸೈಟಿಗೆ ಕಳಂಕ ಅಂಟಿಸಿಕೊಳ್ಳುತ್ತಾ ಇದ್ದೀರಿ. ಇದು ಬೇಕಾ ನಿಮಗೆ? ಮುಂದಿನ ಮೂರವರೆ ವರ್ಷ ನೀವೇ ಸಿಎಂ ಆಗಿ ಇರುತ್ತೀರಿ. ಇಡೀ ಮೂರೂವರೆ ವರ್ಷ ಇದೇ ಆರೋಪಕ್ಕೆ ತುತ್ತಾಗುತ್ತೀರಿ. ನೊಣ ತಿಂದು ಜಾತಿ ಕೆಡಿಸಿಕೊಳ್ಳಬೇಡಿ ಎಂದರು.

ಈ ಹಿಂದೆ ಸಿಎಂ ಆಗಿದ್ದವರ ಆಸ್ತಿಗಳನ್ನೆಲ್ಲ ನೋಡಿದರೆ ಸಿದ್ದರಾಮಯ್ಯ ಆಸ್ತಿ ಏನೂ ಅಲ್ಲ. ಮುಡಾ ಹಗರಣವನ್ನು ಸಂತೋಷ್ ಹೆಗ್ಡೆ, ಎನ್ ಕುಮಾರ್ ಅವರಂಥ ವ್ಯಕ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿಸಿ ಎಂದು ಪ್ರತಾಪ್ ಸಿಂಹ ಹೇಳಿದರು.

ಮರೀಗೌಡ ದಡ್ಡ ಶಿಖಾಮಣಿ. ನಾನು ಮುಡಾದಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಒಂದು ಸೈಟ್ ಕೊಡಿಸಿದ್ದರೆ, ತೆಗೆದುಕೊಂಡಿದ್ದರೆ ತೋರಿಸಲಿ. ನಾನು ಮುಡಾಗೆ ಯಾವಾತ್ತೂ ವ್ಯವಹಾರಕ್ಕೆಂದು ಹೋಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಚಾಮುಂಡಿಯೇ ಮುಂದಿನ ದಾರಿ ತೋರಿಸುತ್ತಾಳೆ: ಪ್ರತಾಪ್ ಸಿಂಹ

ರಾಜಕೀಯದಲ್ಲಿ ಏನೋ ಮಾಡುತ್ತೇವೆ ಎಂದು ಹೇಳಬಾರದು. ಹೇಳಿದರೆ ಕೆಲವರು ಅದಕ್ಕೂ ಬೇರೆ ಸ್ಕೀಂ ಹಾಕಿ ಬಿಡುತ್ತಾರೆ. ತಾಯಿ ಚಾಮುಂಡಿಯೇ ನನಗೆ ಮುಂದಿನ ದಾರಿ ತೋರಿಸುತ್ತಾಳೆ. ನಾನು ಜನರಿಂದ ತಿರಸ್ಕೃತನಾದ ವ್ಯಕ್ತಿ ಅಲ್ಲ. ಏನೋ ಕೆಲವರಿಂದಾಗಿ ಟಿಕೆಟ್ ತಪ್ಪಿತು. ಹಾಗಂತ ಇದೇ ಅಂತಿಮ ಅಲ್ಲವೇ ಅಲ್ಲ ಎಂದರು.

ಸಿದ್ದರಾಮಯ್ಯ ಮೂರೂವರೆ ವರ್ಷ ಸಿಎಂ ಅಗಿರುತ್ತಾರೆ ಎಂದು ಅವರ ಹಿಂಬಾಲಕರು ಹೇಳುತ್ತಿರುತ್ತಾರೆ. ಹೀಗಾಗಿ ನಾನು ಹೇಳಿದೆ ಅಷ್ಟೇ ಎಂದು ಸಿದ್ದರಾಮಯ್ಯ ಅವಧಿ ಬಗ್ಗೆ ಸ್ಪಷ್ಟನೆಯನ್ನೂ ನೀಡಿದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಬೆಂಗಳೂರು-ಮೈಸೂರು ಪಾದಯಾತ್ರೆಗೆ ಬಿಜೆಪಿ ಚಿಂತನೆ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೂ ಖುಷಿಯೇ. ಅವರು ಸಹ ಹಳೇ ಮೈಸೂರು ಭಾಗದವರೇ. ಸಿದ್ದರಾಮಯ್ಯ ಸಹ ಮೈಸೂರಿನವರೇ. ಅವರು ಬೇರೆ ಪಕ್ಷದವರು ಇರಬಹುದು, ಆದರೆ ಅವರು ಮೈಸೂರಿನವರು ಎಂಬ ಹೆಮ್ಮೆ ಇದೆ ಎಂದು ಪ್ರತಾಪ್ ಸಿಂಹ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:05 pm, Wed, 24 July 24

ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ಅವಧಿಗೂ ಮುನ್ನವೇ ತುಂಬುತ್ತಿದೆ ಕೆಆರ್​​ಎಸ್ ಡ್ಯಾಂ: 9 ಅಡಿ ಅಷ್ಟೇ ಬಾಕಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್