ಮೂಡಾ ನಿವೇಶನ ಅಕ್ರಮ: ಸಿಎಂ ಪತ್ನಿಗೆ 2 ಸಾವಿರ ಬೆಲೆಯ ಭೂಮಿ ಬದಲಾಗಿ 10 ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿ ಕೊಟ್ಟಿದೆ ಮೂಡಾ

ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಮಂಜೂರು ಪ್ರಕರಣಕ್ಕೆ ಸಂಬಂಧಿಸಿ ಮೂಡಾ 2 ಸಾವಿರ ಬೆಲೆಯ ಭೂಮಿ ಬದಲಾಗಿ 10 ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿ ಕೊಟ್ಟಿದೆ. ಇನ್ನು ಮತ್ತೊಂದೆಡೆ ಈ ಹಿಂದೆ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು ಎಂದು ತಿಳಿದು ಬಂದಿದೆ.

ಮೂಡಾ ನಿವೇಶನ ಅಕ್ರಮ: ಸಿಎಂ ಪತ್ನಿಗೆ 2 ಸಾವಿರ ಬೆಲೆಯ ಭೂಮಿ ಬದಲಾಗಿ 10 ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿ ಕೊಟ್ಟಿದೆ ಮೂಡಾ
ಮೂಡಾ ನಿವೇಶನ ಅಕ್ರಮ
Follow us
| Updated By: ಆಯೇಷಾ ಬಾನು

Updated on:Jul 03, 2024 | 9:18 AM

ಮೈಸೂರು, ಜುಲೈ.03: 50:50 ಅನುಪಾತದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿಗೆ ಮೂಡಾ (Muda) ನಿವೇಶನ ಮಂಜೂರು ಪ್ರಕರಣಕ್ಕೆ ಸಂಬಂಧಿಸಿ ಮೂಡಾ 2 ಸಾವಿರ ಬೆಲೆಯ ಭೂಮಿ ಬದಲಾಗಿ 10 ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿ ಕೊಟ್ಟಿದೆ. ಮೂಡಾ ನಡೆಯ ವಿರುದ್ಧ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ರಿಂಗ್ ರಸ್ತೆಯ ಹೊರವಲಯ ದೇವನೂರು ಬಡವಾಣೆಯಲ್ಲಿ ವಶಪಡಿಸಿಕೊಂಡಿದ್ದ ಭೂಮಿ ಪ್ರಸ್ತುತ ಚದರ ಅಡಿಗೆ 2 ರಿಂದ 3 ಸಾವಿರ ಹಣ ನಿಗದಿ ಮಾಡಲಾಗಿದೆ. ಅದಕ್ಕೆ ಬದಲಾಗಿ ಸಿಎಂ ಪತ್ನಿ ಪಾರ್ವತಿ ಅವರಿಗೆ ವಿಜಯನಗರದ ಎರಡು ಹಂತಗಳಲ್ಲಿ 14 ಸೈಟ್ ಮಂಜೂರು ಮಾಡಲಾಗಿದೆ.

ಅಲ್ಲಿ ಚದರ ಅಡಿಗೆ ಕನಿಷ್ಟ 10 ಸಾವಿರ ಬೆಲೆ ಇದೆ. ಮೂಡಾ ನೀಡಿರುವ ಬದಲಿ ನಿವೇಶನದ ಸುತ್ತಾ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಪ್ರಸ್ತುತ ವಿಜಯನಗರದ 3ನೇ ಹಂತ ಇ ಬ್ಲಾಕ್‌ನಲ್ಲಿ 4, ಡಿ ಬ್ಲಾಕ್‌ನಲ್ಲಿ 2, ಜಿ ಬ್ಲಾಕ್ ಹಾಗೂ ಸಿ ಬ್ಲಾಕ್ ನಲ್ಲಿ ತಲಾ ಒಂದು ಸೈಟ್ ಮಂಜೂರಾಗಿದೆ. ಅದೇ ರೀತಿ ವಿಜಯನಗರ 4ನೇ ಹಂತ 2ನೇ ಫೇಸ್‌ನಲ್ಲಿ 6 ಸೈಟ್ ನೀಡಲಾಗಿದೆ.

ಇನ್ನು ಈ ಹಿಂದೆಯೇ ಸರ್ಕಾರಕ್ಕೆ ಈ ಬಗ್ಗೆ ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ 15 ಪತ್ರ ಬರೆದಿದ್ದರು. ತುರ್ತು ಕ್ರಮಕ್ಕೆ ಸಮಿತಿ ರಚಿಸಲು ಶಿಫಾರಸ್ಸು ಮಾಡಿದ್ದರು. ಸಾಕಷ್ಟು ಅಂಶಗಳನ್ನು ತಿಳಿಸಿ ನಗರಾಭಿವೃದ್ಧಿ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಹಾಗೂ ಫೆ 8ರಿಂದ ಮುಡಾ ಆಯುಕ್ತರಾಗಿ ಸ್ಪಷ್ಟನೆ ಕೇಳಿ ನಿರಂತರವಾಗಿ ಪತ್ರ ಬರೆದಿದ್ದರು. ಆದರೆ ಮೈಸೂರು ಡಿಸಿ ಪತ್ರಗಳಿಗೆ ಆಯುಕ್ತರು ಯಾವುದೇ ಉತ್ತರ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ಭ್ರಷ್ಟಾಚಾರ: ಮೂಡಾ ವಿರುದ್ಧ 2.5 ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ ಆರೋಪ

ಇನ್ನು ಮತ್ತೊಂದೆಡೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂಕಬಳಿಕೆದಾರರಿಗೆ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ತಿಳಿಸಿದ್ದಾರೆ.

ಸೋಮವಾರ ಮೈಸೂರಿಗೆ ಆಗಮಿಸಿ ಮುಡಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬೈರತಿ ಸುರೇಶ್ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 50:50 ಯೋಜನೆಯಡಿ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಸರಕಾರ ಆದೇಶಿಸಿದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:59 am, Wed, 3 July 24

ತಾಜಾ ಸುದ್ದಿ
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಮಂಗಳೂರು-ಮೂಡಬಿದರೆ ರಸ್ತೆಯಲ್ಲಿ ಗುಡ್ಡಕುಸಿತವುಂಟಾಗುವ ಭೀತಿ!
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
ಕರಾವಳಿ ಪ್ರಾಂತ್ಯದಲ್ಲಿ ನಿಲ್ಲದ ಮಳೆ ಅಬ್ಬರ, ಅರಬ್ಬೀ ಸಮುದ್ರ ಪ್ರಕ್ಷುಬ್ದ
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
‘ದರ್ಶನ್ ಆರೋಪಿ , ಕಣ್ಣಾರೆ ನೋಡದ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ‘
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಪ್ರೈಮ್ ಡೇ ವಿಶೇಷ ಆಫರ್ ಸೇಲ್ ದಿನಾಂಕ ಪ್ರಕಟಿಸಿದ ಅಮೆಜಾನ್
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಮಾಸದಲ್ಲಿ ಮೆಹಂದಿ ಹಚ್ಚಿಕೊಳ್ಳುವುದರ ಮಹತ್ವ ತಿಳಿದುಕೊಳ್ಳಿ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಆಷಾಢ ಅಮಾವಾಸ್ಯೆ ದಿನ ಲಕ್ಷ್ಮಿ ದರ್ಶನ, ಗೋವು ಸ್ಪರ್ಶದಿಂದ ಒಳಿತಾಗಲಿದೆ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್