AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸರ್ಚ್ ವಾರಂಟ್ ಜಾರಿಯಾಗಿದ್ರೂ ದಾಳಿ ಮಾಡಿರಲಿಲ್ಲ ಲೋಕಾಯುಕ್ತ, ಹಲವು ಅನುಮಾನ ಸೃಷ್ಟಿ

ಉಪಚುನಾವಣೆ ಮುಗಿದಿದೆ. ಸಿಎಂ ಸಿದ್ದರಾಮಯ್ಯಗೆ ಶಕ್ತಿ ಬಂದಿದೆ. ಇದೇ ಹೊತ್ತಲ್ಲಿ ಮುಡಾ ಹಗರಣವನ್ನ ಸಿಬಿಐಗೆ ವಹಿಸುವಂತೆ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ಹೈಕೋರ್ಟ್‌ನಲ್ಲಿ ನಡೆಯಲಿದೆ. ಪ್ರಕರಣವನ್ನು ಸಿಬಿಐಗೆ ವಹಿಸಲಾಗುತ್ತದೆಯೇ ಎಂಬ ಕುತೂಹಲದ ನಡುವೆ, ದಾಖಲೆ ಲೋಕಾಯುಕ್ತ ತನಿಖೆ ಮೇಲೆಯೂ ಅನುಮಾನವೊಂದು ಸೃಷ್ಟಿಯಾಗಿದೆ. ಏನದು? ವಿವರಗಳಿಗೆ ಮುಂದೆ ಓದಿ.

ಮುಡಾ ಹಗರಣ: ಸರ್ಚ್ ವಾರಂಟ್ ಜಾರಿಯಾಗಿದ್ರೂ ದಾಳಿ ಮಾಡಿರಲಿಲ್ಲ ಲೋಕಾಯುಕ್ತ, ಹಲವು ಅನುಮಾನ ಸೃಷ್ಟಿ
ಮುಡಾ ಹಗರಣ: ಸರ್ಚ್ ವಾರಂಟ್ ಜಾರಿಯಾಗಿದ್ರೂ ದಾಳಿ ಮಾಡಿರಲಿಲ್ಲ ಲೋಕಾಯುಕ್ತ, ಹಲವು ಅನುಮಾನ ಸೃಷ್ಟಿ
Follow us
ದಿಲೀಪ್​, ಚೌಡಹಳ್ಳಿ
| Updated By: Ganapathi Sharma

Updated on: Nov 25, 2024 | 2:20 PM

ಮೈಸೂರು, ನವೆಂಬರ್ 25: ಮುಡಾ ಹಗರಣದ ತನಿಖೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿರುವಾಗಲೇ ಸ್ಫೋಟಕ ಸಂಗತಿಯೊಂದು ಹೊರಬಿದ್ದಿದೆ. ಲೋಕಾಯುಕ್ತಕ್ಕೆ ಮಧ್ಯಂತರ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದ್ದು, ಮಂಗಳವಾರ ತನಿಖಾ ವರದಿ ಸಲ್ಲಿಕೆಯಾಗಲಿದೆ. ಬಳಿಕ ಪ್ರಕರಣವನ್ನು ಸಿಬಿಐಗೆ ನೀಡಬೇಕೇ ಬೇಡವೇ ಎಂಬ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆ ಇದೆ. ಇದೇ ವೇಳೆ, ಲೋಕಾಯುಕ್ತ ದಾಳಿಯ ಮಾಹಿತಿಯನ್ನ ಅಧಿಕಾರಿಗಳೇ ಸೋರಿಕೆ ಮಾಡಿದರಾ ಎಂಬ ಅನುಮಾನಕ್ಕೆ ಸೃಷ್ಟಿಯಾಗಿದೆ. ಸರ್ಚ್ ವಾರಂಟ್ ಜಾರಿಯಾದ್ರೂ, ದಾಳಿ ನಡೆಸದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ.

ಮುಡಾ ಕಚೇರಿ ಮೇಲೆ ದಾಳಿ ನಡೆಸಲು ಬೆಂಗಳೂರು ಲೋಕಾಯುಕ್ತದಿಂದ ವಾರಂಟ್ ರೆಡಿಯಾಗಿತ್ತು. ಜೂನ್ 28ರಂದು ದಾಳಿ ನಡೆಸಲು ಮೈಸೂರು ಲೋಕಾಯುಕ್ತ ಡಿವೈಎಸ್‌ಪಿ ಮಾಲ್ತೇಶ್ ಹೆಸರಿಗೆ ಸರ್ಚ್ ವಾರಂಟ್ ನೀಡಲಾಗಿತ್ತು. ಆದರೆ, ಜೂನ್ 29ರಂದು ಮುಡಾ ಕಚೇರಿಗೆ ಅಧಿಕಾರಿಗಳ ಎಂಟ್ರಿಯಾಗಿದೆ. ನಗಾರಭಿವೃದ್ಧಿ ಇಲಾಖೆಯ ಎಐಎಸ್ ಅಧಿಕಾರಿಗಳು ಬಂದು 140 ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪವಿದೆ. ಈ ಬಗ್ಗೆ ಬೆಂಗಳೂರು ಲೋಕಾಯುಕ್ತದ ಟಿಪ್ಪಣಿಯಲ್ಲಿ ಉಲ್ಲೇಖವಾಗಿದೆ.

ಲೋಕಾಯುಕ್ತ ತನಿಖೆ ಬಗ್ಗೆ ಮೊದಲಿನಿಂದಲೂ ಅನುಮಾನದಲ್ಲಿರುವ ದೂರುದಾರ ಸ್ನೇಹಮಯಿ ಕೃಷ್ಣ, ಸರ್ಚ್ ವಾರಂಟ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಾಲ್ತೇಶ್ ಹೆಸರಿಗೆ ಜಾರಿಯಾಗಿದ್ದ ಸರ್ಚ್ ವಾರಂಟ್ ಕಾಪಿಯನ್ನು ಅಂದಿನ ಎಸ್‌ಪಿ ಸಜಿತ್, ಮಾಲ್ತೇಶ್‌ಗೆ ಕೊಟ್ಟಿರಲಿಲ್ಲ ಎಂದಿದ್ದಾರೆ. ಹಾಗೆಯೇ ದಾಳಿಗೂ ಮುನ್ನ ಭೈರತಿ ಸುರೇಶ್‌ಗೆ ಮಾಹಿತಿ ನೀಡಿದ್ದಾರೆ. ಭೈರತಿ ಸುರೇಶ್ ದಾಖಲೆ ತೆಗೆದುಕೊಂಡು ಹೋಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಶಾಸಕ ಶ್ರೀವತ್ಸ ಕೂಡಾ ಏಕಾಏಕಿ ಭೈರತಿ ಸುರೇಶ್ ಯಾಕೆ ಬಂದಿದ್ದರು? ಇದು ಕಳ್ಳತನ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

‘ಫೈಲ್ ಹೇಗೆ ತೆಗೆದುಕೊಂಡು ಹೋಗಲು ಸಾಧ್ಯ’ ಡಿಕೆ ಪ್ರಶ್ನೆ

ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಪ್ರತಿ ಫೈಲ್‌ಗಳ ಲೆಕ್ಕಾಚಾರ ಇರುತ್ತದೆ. ಅದ್ಹೇಗೆ ಫೈಲ್ ತೆಗೆದುಕೊಂಡು ಹೋಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ: ‘ಕೈ’ ಹಿಡಿದ ಸಿದ್ದರಾಮಯ್ಯ ತಂತ್ರಗಳು ಇವುಗಳೇ ನೋಡಿ!

ಸದ್ಯ ಲೋಕಾಯುಕ್ತ ಪೊಲೀಸರು ಮಧ್ಯಂತರ ತನಿಖಾ ವರದಿ ಸಲ್ಲಿಸಲು ಸಜ್ಜಾಗಿದ್ದಾರೆ. ಇದೇ ವೇಳೆಯಲ್ಲಿ ಲೋಕಾಯುಕ್ತ ತನಿಖೆ ಬಗ್ಗೆಯೇ ಅನುಮಾನ ಮೂಡುವಂತಹ ಬೆಳವಣಿಗೆಗಳು ನಡೆದಿದ್ದು, ನಾಳೆ ಪ್ರಕರಣವನ್ನ ಸಿಬಿಐ ತನಿಖೆಗೆ ನೀಡಲು ಇದುವೇ ಆಧಾರವಾಗುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್