ಮುಡಾ ನಿವೇಶನ ಹಂಚಿಕೆ ಪಟ್ಟಿ ಲಭ್ಯ: ಒಬ್ಬರಿಗೆ 26 ಸೈಟ್​ ಹಂಚಿದ್ದ ಮುಡಾ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಮುಡಾ ನಿವೇಶನ ಪಡೆದವರ ಪಟ್ಟಿ ಟಿವಿ9ಗೆ ಲಭ್ಯವಾಗಿದೆ.

ಮುಡಾ ನಿವೇಶನ ಹಂಚಿಕೆ ಪಟ್ಟಿ ಲಭ್ಯ: ಒಬ್ಬರಿಗೆ 26 ಸೈಟ್​ ಹಂಚಿದ್ದ ಮುಡಾ!
ಮುಡಾ
Edited By: ವಿವೇಕ ಬಿರಾದಾರ

Updated on: Nov 09, 2024 | 1:42 PM

ಮೈಸೂರು, ನವೆಂಬರ್​ 09: 50:50 ಅನುಪಾತದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಿಂಪಡೆದಿತ್ತು. ಮುಡಾದ (Muda) ಈ ನಿರ್ಧಾರದಿಂದ ನಿವೇಶನ ಪಡೆದವರಿಗೆ ಸಂಕಷ್ಟ ಶುರುವಾಗಿದೆ. ಇನ್ನು, ಮುಡಾ ಹಂಚಿಕೆ ಮಾಡಿದ್ದ 211 ನೀವೇಶನ ಪಟ್ಟಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಒಟ್ಟು 241 ನಿವೇಶನ ಮಂಜೂರಾಗಿದ್ದು, ಇದರಲ್ಲಿ 211 ನಿವೇಶನಗಳ ಬಗ್ಗೆ ಮಾತ್ರ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಅಬ್ದುಲ್ ವಾಜಿದ್ ಎಂಬುವರಿಗೆ 26 ನಿವೇಶನ ಮಂಜೂರು ಮಾಡಲಾಗಿದೆ. ಯಾವತ್ತೋ ವಶಪಡಿಸಿಕೊಂಡ ಭೂಮಿಗಳಿಗೆ 2020 ರಿಂದ 2023ರ ಅವಧಿಯಲ್ಲಿ ಆಯುಕ್ತರ ತೀರ್ಮಾನದಂತೆ ಸೈಟ್ ಹಂಚಿಕೆ ಮಾಡಲಾಗಿದೆ.

ಮುಡಾ 50-50 ನಿಯಮದಡಿ ಸೈಟ್ ಪಡೆದವರ ಪಟ್ಟಿ

  1. ಎಂ.ಸಿ.ಪದ್ಮಾ ಮಕ್ಕಳಾದ ಬ್ರಿಜೇಸ್ ಅರಸ್ – 5
  2. ಸುಶೀಲ ಮಕ್ಕಳಾದ ಸುಮಂತ್ ಅರಸ್, ಜಯಂತ್ ಅರಸ್ – 6
  3. ಮನು ಅರಸ್, ಜಯಂತ್, ಅರ್ಚನಾ, ಸುಮಂತ್ – 4
  4. ಪೊ.ಮಹದೇವ್ ಮತ್ತು ಗೀತಾ – 12
  5. ಅಬ್ದುಲ್ ವಾಜಿದ್ – 26
  6. ಸೈಯದ್ ಯುಸಫ್ – 21
  7. ರೂಪ – 3
  8. ಪ್ರೇಮಾ- 2
  9. ಕನಕ -3
  10. ಲೋಕೇಶ್- 2
  11. ರವಿ – 2
  12. ನಿಂಗಪ್ಪ- 2
  13. ಲಕ್ಷಿ- 1
  14. ವೈರಮುಡಿ- 7
  15. ಮಲ್ಲಪ್ಪ- 19
  16. ಸುರೇಶಮ್ಮ- 11
  17. ಮಹದೇವಮ್ಮ -1
  18. ವಿಶಕಂಠ – 4
  19. ಸಿದ್ದಯ್ಯ – 4
  20. ಕಮಲಮ್ಮ – 1
  21. ಕೆ.ಪಿ.ಶಿವಪ್ರಸಾದ್ – 1
  22. ಸೈಯದ್ ನುಸ್ರುತ – 4
  23. ವೈಶಾಲಿ – 1
  24. ಪ್ರವೀಣ್ – 2
  25. ಸಿ.ಕೆ.ಬಾಸ್ಕರ್ – 1
  26. ಸಿ.ಜೆ.ರಾಜರಾಮ್ – 1
  27. ಚೌಡಯ್ಯ – 7
  28. ಕ್ಯಾಥಡ್ರಲ್ ಸೊಸೈಟಿ ಕಾರ್ಯದರ್ಶಿ ಅಲಮೇಡಾ – 6
  29.  ಸುನಂದ – 1
  30. ಎಸ್.ಜಿ. ಶಿವಶಂಕರ್ – 1
  31. ಕೆ.ರಘುವೀರ್ ಕಾಮತ್ – 1
  32. ವಿಮಲಾ – 1
  33. ನಾಗರತ್ನ – 1
  34. ವೆಂಕಟಪ್ಪ – 17
  35. ದೇವಮ್ಮ – 16
  36. ಆಲನಹಳ್ಳಿ ಗೃಹನಿರ್ಮಾಣ ಸಹಕಾರ ಸಂಘ-ಅಧ್ಯಕ್ಷ/ಕಾರ್ಯದರ್ಶಿ – 13 ನಿವೇಶನ ಹಂಚಿಕೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕ ತಂದಿಟ್ಟಿರುವ ಮುಡಾ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಜುಲೈನಲ್ಲಿ ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಆಯೋಗ ರಚಿಸಿದ್ದು, ಅವರಿಗೆ ವರದಿ ಸಲ್ಲಿಕೆಗೆ ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ: ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ: 50:50 ಅನುಪಾತದಲ್ಲಿ ಸೈಟ್‌ ಪಡೆದವರಿಗೆ ಬಿಗ್ ಶಾಕ್

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಲೋಕಾಯುಕ್ತ ಅಧಿಕಾರಿಗಳು ಬರೊಬ್ಬರಿ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಸಿಎಂ ಸ್ಥಾನದಲ್ಲಿದ್ದು, ಲೋಕಾಯುಕ್ತ ವಿಚಾರಣೆಗೆ ಹಾಜರಾದ ಮೊದಲ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೂ ಸಿದ್ದರಾಮಯ್ಯ ಭಾಜನರಾದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us