AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ

ಮುಡಾ ಹಗರಣ ಸಂಬಂಧ ಸರ್ಚ್ ವಾರಂಟ್ ಜಾರಿಯಾಗಿದ್ರೂ ಲೋಕಾಯುಕ್ತ ದಾಳಿ ಮಾಡದೇ ಇದ್ದುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಮುಡಾ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಕುರಿತಾದ ಮಾಹಿತಿ ಸೋರಿಕೆಯಾಗಿದ್ದು ಹೇಗೆ? ಆರ್​ಟಿಐ ಕಾರ್ಯಕರ್ತ ಗಂಗರಾಜು ಮಾಡಿರುವ ಗಂಭೀರ ಆರೋಪವೇನು? ಇಲ್ಲಿದೆ ವಿವರ.

ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ
ಆರ್​​ಟಿಐ ಕಾರ್ಯಕರ್ತ ಗಂಗರಾಜು
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 27, 2024 | 10:05 AM

Share

ಮೈಸೂರು, ನವೆಂಬರ್ 27: ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂಪಾಯಿ ಡೀಲ್ ನಡೆದಿತ್ತು ಎಂದು ಆರ್​​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಡೀಲ್ ನಡೆದಿರುವ ಬಗ್ಗೆ ನನ್ನ ಬಳಿ ದಾಖಲೆ‌ ಇದೆ. ಇವತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗಾಗಿ ಇಂದು ಇಡಿ ಕಚೇರಿಗೆ ಬರಲು ಹೇಳಿದ್ದಾರೆ ಎಂದು ಅವರು ತಿಳಿಸಿದ್ದು, ವಿಚಾರಣೆಗೆ ಹಾಜರಾಗುವ ಮುನ್ನ ‘ಟಿವಿ9’ ಜತೆ ಮಾತನಾಡಿದ್ದಾರೆ.

ಮೈಸೂರು ಮುಡಾ ಕಚೇರಿಯಲ್ಲಿ ಶೋಧ ಕಾರ್ಯ ನಡೆಸಲು ಲೋಕಾಯುಕ್ತ ವಾರೆಂಟ್ ಪಡೆದಿತ್ತು. ಆದರೆ, ನಂತರ ಸರ್ಚ್ ಮಾಡದೆ ಸರ್ಚ್ ವಾರೆಂಟ್ ವಾಪಸ್ಸು ಕೊಡಲಾಗಿತ್ತು. ಸರ್ಚ್ ವಾರೆಂಟ್ ಬಗ್ಗೆ ಲೋಕಾಯುಕ್ತ ಡಿವೈಎಸ್‌ಪಿ ಮಾಲ್ತೇಶ್‌‌ರಿಂದ ಮಾಹಿತಿ ಸೋರಿಕೆಯಾಗಿತ್ತು. ಸಚಿವ ಬೈರತಿ ಸುರೇಶ್ ಹಿಂದಿನ ಆಯುಕ್ತಾದ ಜಿಟಿ ದಿನೇಶ್ ಕುಮಾರ್ ಹಾಗೂ ನಟೇಶ್‌ಗೆ ಮಾಹಿತಿ ನೀಡಿದ್ದರು. ಇದಕ್ಕಾಗಿ 8 ಕೋಟಿ ರೂಪಾಯಿ ಹಣದ ಡೀಲ್ ನಡೆದಿದ್ದ ದಾಖಲೆ ನನ್ನ ಬಳಿ ಇದೆ. ಆ ದಾಖಲೆಯನ್ನು ಇಡಿಗೆ ನೀಡುತ್ತೇನೆ. ತನಿಖೆಯ ದೃಷ್ಟಿಯಿಂದ ಮಾಧ್ಯಮಗಳಿಗೆ ನೀಡುವುದಿಲ್ಲ. ಈಗಾಗಲೆ ಈ ಸಂಬಂಧ ರಾಜ್ಯಪಾಲರಿಗೂ ದೂರು ನೀಡಿದ್ದೇನೆ ಎಂದು ಗಂಗರಾಜು ಹೇಳಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸರ್ಚ್ ವಾರಂಟ್ ಜಾರಿಯಾಗಿದ್ರೂ ದಾಳಿ ಮಾಡಿರಲಿಲ್ಲ ಲೋಕಾಯುಕ್ತ, ಹಲವು ಅನುಮಾನ ಸೃಷ್ಟಿ

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಯಾವುದೇ ಮಾಹಿತಿ‌ ಕೇಳಿದರೂ ನೀಡುವೆ. ಮುಡಾದಲ್ಲಿ ಸಿದ್ದರಾಮಯ್ಯ ಅವರದ್ದು 20 ರಿಂದ 25 ಕೋಟಿ‌ ರೂ. ಅಕ್ರಮ. ಆದರೆ, ಒಟ್ಟಾರೆಯಾಗಿ 5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. 50:50 ಅನುಪಾತದಲ್ಲಿ ಬದಲಿ ಭೂಮಿಯನ್ನು ಖಾತೆ ಕಂದಾಯ ಸೆಟಲ್​ಮೆಂಟ್ ಡೀಡ್‌ಗಳ ಮೂಲಕ ಕಿಕ್ ಬ್ಯಾಕ್ ಪಡೆಯಲಾಗಿದೆ. ಇದರ ದಾಖಲೆ ಹೀಗಾಗಲೇ ಇಡಿಗೆ ನೀಡಿದ್ದೇನೆ. ಈ ತನಿಖೆಗಳು ಏನೇ ಇರಲಿ. ಈ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕು. ಆಗ ಮಾತ್ರ ಸತ್ಯ ಹೊರಬರಲು ಸಾಧ್ಯ ಎಂದು ಗಂಗರಾಜು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು