AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಕರಣ: ಸಿಎಂ‌ ಪತ್ನಿ ಕೇಳಿದ್ದು 13 ಸೈಟ್, ಕೊಟ್ಟಿ‌ದ್ದು 14 ಸೈಟ್! ಅರ್ಜಿಗೆ ಪಾರ್ವತಿ ಬದಲಿಗೆ ಆಪ್ತ ಸಹಾಯಕನ ಸಹಿ

ಮೈಸೂರು ಅಭಿವೃದ್ಧಿ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ನಿತ್ಯ ಒಂದೊಂದೇ ಅಕ್ರಮ ಹೊರಗೆ ಬರುತ್ತಿದೆ. ಇದೀಗ ನಿವೇಶನ ಖಾತೆ ಮಾಡಿಸಿಕೊಡುವುದಾಗಿ ಬರೆದ ಪತ್ರ ಬಹಿರಂಗಗೊಂಡಿದೆ. ಪತ್ರದಲ್ಲಿ ಸಿಎಂ ಪತ್ನಿ ಪಾರ್ವತಿ ಅವರ ಬದಲಾಗಿ ಬೇರಯವರದ್ದೇ ಸಹಿ ಇದೆ.

ಮುಡಾ ಪ್ರಕರಣ: ಸಿಎಂ‌ ಪತ್ನಿ ಕೇಳಿದ್ದು 13 ಸೈಟ್, ಕೊಟ್ಟಿ‌ದ್ದು 14 ಸೈಟ್! ಅರ್ಜಿಗೆ ಪಾರ್ವತಿ ಬದಲಿಗೆ ಆಪ್ತ ಸಹಾಯಕನ ಸಹಿ
ಮುಡಾ
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 13, 2024 | 9:54 AM

Share

ಮೈಸೂರು, ಸೆಪ್ಟೆಂಬರ್​ 13: ಮೈಸೂರು ಅಭಿವೃದ್ಧಿ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದಿದೆ ಎನ್ನಲಾಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕೈವಾಡವಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಒಟ್ಟು 14 ನಿವೇಶನಗಳಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಮುಡಾದಿಂದ ಮಂಜೂರಾದ ವಿಜಯನಗರ 3ನೇ ಹಂತ ಸಿ, ಡಿ, ಇ ಮತ್ತು ಜಿ ಬ್ಲಾಕ್​ನಲ್ಲಿ ನಿವೇಶನ ಸಂಖ್ಯೆ 25, 331,332,213, 214, 215, 05 ಮತ್ತು ವಿಜಯನಗರ 4ನೇ ಹಂತ 2ನೇ ಫೇಸ್ ನಿವೇಶನ ಸಂಖ್ಯೆ 5108, 5085, 11189, 10855, 12065 ಮತ್ತು 12068 ಸಂಖ್ಯೆಯ ಒಟ್ಟು 13 ನಿವೇಶನಗಳ ಖಾತೆ ನೋಂದಣಿ ಕೋರಿ ಪಾರ್ವತಿ ಅವರು 2022 ಜನವರಿ 1 ರಂದು ಪತ್ರ ಬರೆದಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್‌ನಲ್ಲಿ ಮುಡಾ ಕೇಸ್‌ ವಿಚಾರಣೆ, ಅಂತಿಮ ವಾದ

ಈ ಪತ್ರಕ್ಕೆ ಪಾರ್ವತಿ ಅವರ ಬದಲಿಗೆ ಮುಖ್ಯಮಂತ್ರಿಗಳು ಖಾಸಗಿ ಆಪ್ತ ಸಹಾಯಕ ಎಸ್.ಜಿ ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ.ಕುಮಾರ್ ಸಹಿ ಹಾಕಿದ್ದಾರೆ. ಅರ್ಜಿದಾರ ಹೊರತುಪಡಿಸಿ ಉಳಿದವರಿಗೆ ಸಹಿ ಮಾಡಲು ಅವಕಾಶವಿಲ್ಲ. ಇದು ಗೊತ್ತಿದ್ದೂ ಅಧಿಕಾರಿಗಳು ನಿವೇಶನ ಖಾತೆ ಮಾಡಿದ್ದಾರೆ. ಕೇಳಿದ್ದು ಮಂಜೂರಾಗಿದ್ದ 13 ನಿವೇಶನ, ಆದರೆ 14 ನಿವೇಶನ ಖಾತೆ ಮಾಡಿಕೊಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:51 am, Fri, 13 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ