AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಕರಣ: ಸಿಎಂ‌ ಪತ್ನಿ ಕೇಳಿದ್ದು 13 ಸೈಟ್, ಕೊಟ್ಟಿ‌ದ್ದು 14 ಸೈಟ್! ಅರ್ಜಿಗೆ ಪಾರ್ವತಿ ಬದಲಿಗೆ ಆಪ್ತ ಸಹಾಯಕನ ಸಹಿ

ಮೈಸೂರು ಅಭಿವೃದ್ಧಿ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ನಿತ್ಯ ಒಂದೊಂದೇ ಅಕ್ರಮ ಹೊರಗೆ ಬರುತ್ತಿದೆ. ಇದೀಗ ನಿವೇಶನ ಖಾತೆ ಮಾಡಿಸಿಕೊಡುವುದಾಗಿ ಬರೆದ ಪತ್ರ ಬಹಿರಂಗಗೊಂಡಿದೆ. ಪತ್ರದಲ್ಲಿ ಸಿಎಂ ಪತ್ನಿ ಪಾರ್ವತಿ ಅವರ ಬದಲಾಗಿ ಬೇರಯವರದ್ದೇ ಸಹಿ ಇದೆ.

ಮುಡಾ ಪ್ರಕರಣ: ಸಿಎಂ‌ ಪತ್ನಿ ಕೇಳಿದ್ದು 13 ಸೈಟ್, ಕೊಟ್ಟಿ‌ದ್ದು 14 ಸೈಟ್! ಅರ್ಜಿಗೆ ಪಾರ್ವತಿ ಬದಲಿಗೆ ಆಪ್ತ ಸಹಾಯಕನ ಸಹಿ
ಮುಡಾ
ದಿಲೀಪ್​, ಚೌಡಹಳ್ಳಿ
| Edited By: |

Updated on:Sep 13, 2024 | 9:54 AM

Share

ಮೈಸೂರು, ಸೆಪ್ಟೆಂಬರ್​ 13: ಮೈಸೂರು ಅಭಿವೃದ್ಧಿ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದಿದೆ ಎನ್ನಲಾಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕೈವಾಡವಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಒಟ್ಟು 14 ನಿವೇಶನಗಳಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಮುಡಾದಿಂದ ಮಂಜೂರಾದ ವಿಜಯನಗರ 3ನೇ ಹಂತ ಸಿ, ಡಿ, ಇ ಮತ್ತು ಜಿ ಬ್ಲಾಕ್​ನಲ್ಲಿ ನಿವೇಶನ ಸಂಖ್ಯೆ 25, 331,332,213, 214, 215, 05 ಮತ್ತು ವಿಜಯನಗರ 4ನೇ ಹಂತ 2ನೇ ಫೇಸ್ ನಿವೇಶನ ಸಂಖ್ಯೆ 5108, 5085, 11189, 10855, 12065 ಮತ್ತು 12068 ಸಂಖ್ಯೆಯ ಒಟ್ಟು 13 ನಿವೇಶನಗಳ ಖಾತೆ ನೋಂದಣಿ ಕೋರಿ ಪಾರ್ವತಿ ಅವರು 2022 ಜನವರಿ 1 ರಂದು ಪತ್ರ ಬರೆದಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್‌ನಲ್ಲಿ ಮುಡಾ ಕೇಸ್‌ ವಿಚಾರಣೆ, ಅಂತಿಮ ವಾದ

ಈ ಪತ್ರಕ್ಕೆ ಪಾರ್ವತಿ ಅವರ ಬದಲಿಗೆ ಮುಖ್ಯಮಂತ್ರಿಗಳು ಖಾಸಗಿ ಆಪ್ತ ಸಹಾಯಕ ಎಸ್.ಜಿ ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ.ಕುಮಾರ್ ಸಹಿ ಹಾಕಿದ್ದಾರೆ. ಅರ್ಜಿದಾರ ಹೊರತುಪಡಿಸಿ ಉಳಿದವರಿಗೆ ಸಹಿ ಮಾಡಲು ಅವಕಾಶವಿಲ್ಲ. ಇದು ಗೊತ್ತಿದ್ದೂ ಅಧಿಕಾರಿಗಳು ನಿವೇಶನ ಖಾತೆ ಮಾಡಿದ್ದಾರೆ. ಕೇಳಿದ್ದು ಮಂಜೂರಾಗಿದ್ದ 13 ನಿವೇಶನ, ಆದರೆ 14 ನಿವೇಶನ ಖಾತೆ ಮಾಡಿಕೊಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:51 am, Fri, 13 September 24

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?