ಮುಡಾ ಪ್ರಕರಣ: ಸಿಎಂ‌ ಪತ್ನಿ ಕೇಳಿದ್ದು 13 ಸೈಟ್, ಕೊಟ್ಟಿ‌ದ್ದು 14 ಸೈಟ್! ಅರ್ಜಿಗೆ ಪಾರ್ವತಿ ಬದಲಿಗೆ ಆಪ್ತ ಸಹಾಯಕನ ಸಹಿ

ಮೈಸೂರು ಅಭಿವೃದ್ಧಿ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ನಿತ್ಯ ಒಂದೊಂದೇ ಅಕ್ರಮ ಹೊರಗೆ ಬರುತ್ತಿದೆ. ಇದೀಗ ನಿವೇಶನ ಖಾತೆ ಮಾಡಿಸಿಕೊಡುವುದಾಗಿ ಬರೆದ ಪತ್ರ ಬಹಿರಂಗಗೊಂಡಿದೆ. ಪತ್ರದಲ್ಲಿ ಸಿಎಂ ಪತ್ನಿ ಪಾರ್ವತಿ ಅವರ ಬದಲಾಗಿ ಬೇರಯವರದ್ದೇ ಸಹಿ ಇದೆ.

ಮುಡಾ ಪ್ರಕರಣ: ಸಿಎಂ‌ ಪತ್ನಿ ಕೇಳಿದ್ದು 13 ಸೈಟ್, ಕೊಟ್ಟಿ‌ದ್ದು 14 ಸೈಟ್! ಅರ್ಜಿಗೆ ಪಾರ್ವತಿ ಬದಲಿಗೆ ಆಪ್ತ ಸಹಾಯಕನ ಸಹಿ
ಮುಡಾ
Edited By: ವಿವೇಕ ಬಿರಾದಾರ

Updated on: Sep 13, 2024 | 9:54 AM

ಮೈಸೂರು, ಸೆಪ್ಟೆಂಬರ್​ 13: ಮೈಸೂರು ಅಭಿವೃದ್ಧಿ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆಯಲ್ಲಿ ಹಗರಣ ನಡೆದಿದೆ ಎನ್ನಲಾಗಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಕೈವಾಡವಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಒಟ್ಟು 14 ನಿವೇಶನಗಳಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಮುಡಾದಿಂದ ಮಂಜೂರಾದ ವಿಜಯನಗರ 3ನೇ ಹಂತ ಸಿ, ಡಿ, ಇ ಮತ್ತು ಜಿ ಬ್ಲಾಕ್​ನಲ್ಲಿ ನಿವೇಶನ ಸಂಖ್ಯೆ 25, 331,332,213, 214, 215, 05 ಮತ್ತು ವಿಜಯನಗರ 4ನೇ ಹಂತ 2ನೇ ಫೇಸ್ ನಿವೇಶನ ಸಂಖ್ಯೆ 5108, 5085, 11189, 10855, 12065 ಮತ್ತು 12068 ಸಂಖ್ಯೆಯ ಒಟ್ಟು 13 ನಿವೇಶನಗಳ ಖಾತೆ ನೋಂದಣಿ ಕೋರಿ ಪಾರ್ವತಿ ಅವರು 2022 ಜನವರಿ 1 ರಂದು ಪತ್ರ ಬರೆದಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ: ಹೈಕೋರ್ಟ್‌ನಲ್ಲಿ ಮುಡಾ ಕೇಸ್‌ ವಿಚಾರಣೆ, ಅಂತಿಮ ವಾದ

ಈ ಪತ್ರಕ್ಕೆ ಪಾರ್ವತಿ ಅವರ ಬದಲಿಗೆ ಮುಖ್ಯಮಂತ್ರಿಗಳು ಖಾಸಗಿ ಆಪ್ತ ಸಹಾಯಕ ಎಸ್.ಜಿ ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ.ಕುಮಾರ್ ಸಹಿ ಹಾಕಿದ್ದಾರೆ. ಅರ್ಜಿದಾರ ಹೊರತುಪಡಿಸಿ ಉಳಿದವರಿಗೆ ಸಹಿ ಮಾಡಲು ಅವಕಾಶವಿಲ್ಲ. ಇದು ಗೊತ್ತಿದ್ದೂ ಅಧಿಕಾರಿಗಳು ನಿವೇಶನ ಖಾತೆ ಮಾಡಿದ್ದಾರೆ. ಕೇಳಿದ್ದು ಮಂಜೂರಾಗಿದ್ದ 13 ನಿವೇಶನ, ಆದರೆ 14 ನಿವೇಶನ ಖಾತೆ ಮಾಡಿಕೊಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:51 am, Fri, 13 September 24

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us