AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಕೋಕನಟ್ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರ, ಇಡಿ ತನಿಖೆಯಲ್ಲಿ ಬಯಲು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಇಡಿ 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. ಬಿಲ್ಡರ್ ಜಯರಾಮ್ "ಕೋಕನಟ್" ಕೋಡ್ ವರ್ಡ್ ಬಳಸಿ ಕಪ್ಪು ಹಣ ವ್ಯವಹಾರ ನಡೆಸುತ್ತಿದ್ದ ಎಂದು ಪತ್ತೆಯಾಗಿದೆ. 631 ನಿವೇಶನಗಳ ಅಕ್ರಮದಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಇಡಿ ತನಿಖೆ ಚುರುಕಾಗಿದೆ.

ಮುಡಾ ಹಗರಣ: ಕೋಕನಟ್ ಕೋಡ್ವರ್ಡ್ ಬಳಸಿ ಅಕ್ರಮ ವ್ಯವಹಾರ, ಇಡಿ ತನಿಖೆಯಲ್ಲಿ ಬಯಲು
ಮುಡಾ
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on:Jan 19, 2025 | 8:54 AM

ಮೈಸೂರು, ಜನವರಿ 19: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ರಾಜಕಾರಣದಲ್ಲಿ ಭಾರಿ ವಿವಾದವನ್ನು ಸೃಷ್ಟಿಸಿದೆ. ಈ ಹಿಂದೆ ಇಡಿ (ED) ದಾಳಿಗೆ ಒಳಗಾಗಿದ್ದ ಮೈಸೂರು ಮೂಲದ ಬಿಲ್ದಡ್​ ಜಯರಾಮ್​ ಕೋಕನಟ್ ಕೋಡ್ವರ್ಡ್​ ಬಳಸಿ ಅಕ್ರಮ ವ್ಯವಹಾರ ನಡೆಸುತ್ತಿದ್ದನು ಎಂದು ಜಾರಿ ನಿರ್ದೇಶನಾಯಲ ಪತ್ತೆ ಹಚ್ಚಿದೆ.

ಮುಡಾದಲ್ಲಿ ನಡೆದಿರುವ ಹಗರಣದಲ್ಲಿ ಬಿಲ್ಡರ್ ಜಯರಾಮ್ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಬೇನಾಮಿಯಾಗಿದ್ದ ಎಂದು ಹೇಳಲಾಗುತ್ತಿದೆ. ಅದರಲ್ಲೂ ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದಿಂದ ಸಾಕಷ್ಟು ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಅಲ್ಲದೇ, ಇಲ್ಲಿ ಸಾಕಷ್ಟು ಕಪ್ಪು ಹಣದ ವ್ಯವಹಾರ ಕೂಡ ನಡೆದಿದ್ದು, ಇದಕ್ಕೆ ಜಯರಾಮ್ ಕೋಕನಟ್ ​ಎಂದು ಕೋಡ್ವರ್ಡ್ ಬಳಸುತ್ತಿದ್ದನು ಎಂದು ಇಡಿ ತನಿಖೆ ವೇಳೆ ಬಯಲಾಗಿದೆ.

1 ಕೋಕನಟ್ಎಂದರೆ 1 ಲಕ್ಷ ರೂ. 50 ಕೋಕನಟ್​ ಎಂದರೆ 50 ಲಕ್ಷ ರೂ. ಮತ್ತು 100 ಕೋಕನಟ್​ ಎಂದರೆ 1 ಕೋಟಿ ಎಂದು ಕೋಡ್ವರ್ಡ್ ಬಳಸುತ್ತಿದ್ದನು ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಮುಟ್ಟುಗೋಲು ಹಾಕಿಕೊಂಡ 142 ನಿವೇಶನದ ಮಾಹಿತಿ ಬಹಿರಂಗಪಡಿಸಿ; ಮುಡಾ ಆಯುಕ್ತರಿಗೆ ಸ್ನೇಹಮಯಿ ಕೃಷ್ಣ ಪತ್ರ

300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಬಳಿಕ, ಇಡಿ ಅಧಿಕಾರಿಗಳು 631 ನಿವೇಶನಗಳ ವಿವರ ಕೇಳಿ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ 631 ನಿವೇಶನಗಳ ಅಕ್ರಮದಲ್ಲಿ ಬಹುತೇಕರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೇ ಭಾಗಿಯಾಗಿದ್ದಾರೆ. ಇದರಲ್ಲಿ, ಮುಡಾ ಮಾಜಿ ಆಯುಕ್ತರಿಗೆ ಸೇರಿದ 198 ಬೇನಾಮಿ ನಿವೇಶನಗಳಿವೆ ಎಂದು ತಿಳಿದುಬಂದಿದೆ.

ಅದೇ ರೀತಿ ಮುಡಾದ ಅಧಿಕಾರಿ ಒಬ್ಬರಿಗೆ ಅಕ್ರಮವಾಗಿ 92 ನಿವೇಶನಗಳನ್ನು ಹಾಗೂ ಮೈಸೂರಿನ ಎಂಎಲ್​ಸಿ ಒಬ್ಬರಿಗೆ 128 ನಿವೇಶನಗಳನ್ನು ಅಕ್ರಮವಾಗಿ ಬದಲಿ ನಿವೇಶನ ಹಾಗೂ ಬಿಟ್ ಲ್ಯಾಡ್ ಮೂಲಕ ನೀಡಲಾಗಿದೆ. ನಿವೇಶನಗಳ ವ್ಯವಹಾರದಲ್ಲಿ ಕಪ್ಪು ಹಣ ವರ್ಗಾವಣೆ ಕೂಡ ನಡೆದಿರುವ ಮಾಹಿತಿ ಸಿಕ್ಕಿದೆ. ಇದರಿಂದ 631 ನಿವೇಶನಗಳ ವಿವವರವನ್ನು ತುರ್ತಾಗಿ ನೀಡಿ ಅಂತ ಮುಡಾ ಆಯುಕ್ತರಿಗೆ ಇಡಿ ಪತ್ರ ಬರೆದಿದೆ. ಇಡಿ ತನಿಖೆ ಇದೀಗಾ ಮತ್ತೆ ಚುರುಕಾಗಿದ್ದು, ಮುಡಾ ಭ್ರಷ್ಟರಿಗೆ ಮತ್ತೆ ನಡುಕ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:44 am, Sun, 19 January 25

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ