Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2023: ಮೈಸೂರು ದಸರಾಗೆ ಚಾಲನೆ, ಹಂಸಲೇಖ ಉದ್ಘಾಟನಾ ಭಾಷಣದ ಮುಖ್ಯಾಂಶಗಳು

ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು.

Mysore Dasara 2023: ಮೈಸೂರು ದಸರಾಗೆ ಚಾಲನೆ, ಹಂಸಲೇಖ ಉದ್ಘಾಟನಾ ಭಾಷಣದ ಮುಖ್ಯಾಂಶಗಳು
ಮೈಸೂರು ದಸರಾಗೆ ಚಾಲನೆ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Oct 15, 2023 | 11:19 AM

ಮೈಸೂರು ಅ.15: ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ (Mysore Dasara) ಸಂಗೀತ ನಿರ್ದೇಶಕ ಹಂಸಲೇಖ (Hamsaleka) ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ (Chamundeshwari) ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆ​.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿ ದೇವೇಗೌಡ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್​ ಉಪಸ್ಥಿತರಿದ್ದರು.

ಉದ್ಘಾಟನೆ ಬಳಿಕ ಮಾತನಾಡಿದ ಅವರು ಕರ್ನಾಟಕ ಏಕೀಕರಣವಾಗಿ ಐವತ್ತುವರ್ಷವಾಯಿತು. ಹೀಗಾಗಿ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ ಕಾಯಕಲ್ಪಕ್ಕೂ 50 ವರ್ಷವಾಗಿದೆ. ಈ ನನ್ನ ಐದಶದಲ್ಲಿ ಸಿಕ್ಕಿದ ಈ ಅವಕಾಶ  ಬಹಳ ಬೆಲೆ ಬಾಳುವಂತಹದ್ದು. ಈ ಅವಕಾಶ ನಿರಾಯಾಸವಾಗಿ ಬಂದಿಲ್ಲ. ಇದಕ್ಕಾಗಿ ಸಾವಿರ ಮೆಟ್ಟಿಲು ಹತ್ತಿ ಬಂದಿದ್ದೇನೆ ಎಂದು ನಾದಬ್ರಹ್ಮ ಹಂಸಲೇಖ ಹೇಳಿದರು.

ಮೈಸೂರು ದಸರಾ ಚಾಲನೆ ನೀಡಲು ನನಗೆ ಅವಕಾಶ ನೀಡಿದ್ದಕ್ಕೆ ಯಾರನ್ನು ಮೊದಲು ನೆನೆಯಲಿ? ಅಪ್ಪ ಗೋವಿಂದರಾಜ ಮಾನೆ, ಅಮ್ಮ ರಾಜಮ್ಮ ಗುರು ನೀಲಕಂಠ ಅಥವಾ ನಾದ ನಾಟಕರಂಗ? ಸರ್ಕಾರ ಅಥವಾ ಸಂವಿಧಾನವನ್ನೇ? ಸಂವಿಧಾನದ ಧ್ವನಿ ಸಿದ್ದರಾಮಯ್ಯ ಅವರನ್ನೇ ? ಪ್ರಬಲ ಶಕ್ತಿ ಸಂಘಟಕ ಡಿಸಿಎಂ ಕ ಡಿ ಕೆ ಶಿವಕುಮಾರ್, ನನ್ನ ಹೆಸರು ಸೂಚಿಸಿದ ಡಾ ಎಚ್ ಸಿ ಮಹದೇವಪ್ಪ ಅವರನ್ನೇ ?  ನನ್ನ ಹೆಂಡತಿ ಮಕ್ಕಳು ಅಭಿಮಾನಿಗಳನ್ನೇ ? ಅಥವಾ ಭೂಮಿ ತಾಯಿಯನ್ನೇ ಯಾರು ಯಾರು ಅಂತ ನೆನೆಯಲ್ಲಿ ಎಂದು ಹೇಳುವ ಮೂಲಕ ಅವಕಾಶ ನೀಡಿದವರಿಗೆ ಧನ್ಯವಾದ ಹೇಳಿದರು.

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಉತ್ಸವ; ಸರೋದ್​ ವಾದಕ ಪಂ.ರಾಜೀವ್ ತಾರಾನಾಥ್ ಕಾರ್ಯಕ್ರಮ ನಿಗದಿ

ನಾನು ಈಗ ಕನ್ನಡದ ದೀಪ ಹಚ್ಚಿದ್ದೇನೆ. ಕನ್ನಡಿಗರ ಆಶಯದಂತೆ ದೀಪ ಹಚ್ಚಿದ್ದೇನೆ. ದಸರಾ ಎನ್ನುವುದು ಜೀವಂತ ಮಹಾಕಾವ್ಯ. ದಕ್ಷಿಣ ಭಾರತದ ವೀರರ ಕಥೆಯೆ ಈ ಮಹಾಕಾವ್ಯ, ವಿಜಯನಗರ ಮಹಾಸಾಮ್ರಾಜ್ಯದಿಂದ ಆರಂಭವಾಗಿದೆ. ದಸರಾ ಒಂದು ರೀತಿ ಕಥಾ ಕಣಜ. ಇದು ಮಹಾಕಾವ್ಯವಾಗಿ ಬೆಳಗಬೇಕು. ಕನ್ನಡ ನಮ್ಮ ಶೃತಿ ಆಗಬೇಕು, ಅಭಿವೃದ್ಧಿ ನಮ್ಮ ಕೃತಿ ಆಗಬೇಕು. ಕನ್ನಡದ ಭಾಷೆಗೆ ಮಿತಿ ಇದೆ. ಆದರೆ ಭಾವಕ್ಕೆ ಮಿತಿ ಎಲ್ಲಿದೆ? ನಮಗೆ ದೆಹಲಿ ಬೇಕು, ದೆಹಲಿಗೂ ನಾವು ಬೇಕು. ಆದರೆ ದೆಹಲಿಗೆ ಕನ್ನಡವೇ ಬೇಕಾಗುತ್ತಿಲ್ಲ ಇದಕ್ಕೆ ತಲೆ ಕೆಡಿಸಿ ಕೊಳ್ಳೋದು ಬೇಡ. ನಾವು ಕನ್ನಡವನ್ನು ಜಗತ್ತಿನಲ್ಲಿ ಮೆರೆಸಬೇಕಿದೆ. ಕರ್ನಾಟಕದ ಶಾಂತಿ ಸಮೃದ್ಧಿ ಕನ್ನಡಿಗರ ಮಂತ್ರ ಆಗಬೇಕು. ಕರ್ನಾಟಕದಲ್ಲಿ ವಾಸ ಮಾಡುವವರೆಲ್ಲಾ ಕನ್ನಡಿಗರು. ಯಾರಿಗೂ ಕನ್ನಡ ಮಾತಾಡಲು ಬರಲ್ಲ. ಯಾರಿಗೆ ಅರ್ಥವಾಗಲ್ಲ ಈ ಬಗ್ಗೆ ಒಂದು ಸಮೀಕ್ಷೆ ಆಗಬೇಕು. ಕಾರ್ಪೊರೇಟ್ ಸಂಸ್ಥೆ ಈ ಸಮೀಕ್ಷೆ ಮಾಡುತ್ತದೆ ಇದಕ್ಕೆ ಜನರ ಸಹಕಾರ ಇರಲಿ ಎಂದರು.

ನಮ್ಮ ಕಾವೇರಿಗೆ ಒಂದು ಮಿತಿಯಿದೆ, ಕನ್ನಡದ ಭಾಷೆಗೆ ಒಂದು ಮಿತಿಯಿದೆ. ಅದರ ಭಾವಕ್ಕೆ ಎಲ್ಲಿ ಮಿತಿಯಿದೆ ? ನಾಡಿಗೆ ಕನ್ನಡ ಮತ್ತು ಅಭಿವೃದ್ದಿ ಶಾಂತಿ ಮಂತ್ರ. ಹುಬ್ಬಳ್ಳಿ ಬೆಳಗಾವಿ ಜೋಡಿ ಆಗಬೇಕು, ಮಂಗಳೂರು ಮೈಸೂರು ಜೋಡಿ ಆಗಬೇಕು. ಈ ಎರಡು ಜಿಲ್ಲೆಗಳಲ್ಲಿ ವ್ಯಾಪಾರ ಇದೆ‌ ಸಂಪ್ರದಾಯಿತೆಯೂ ಇದೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Sun, 15 October 23

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು