Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಉದ್ಘಾಟನೆ ನನಗೆ ಸಿಕ್ಕಿರುವುದು ಸಾಮಾಜಿಕ ಕಲಾ ನ್ಯಾಯ: ಸಂಗೀತ ನಿರ್ದೇಶಕ ಹಂಸಲೇಖ

ರೈತರ ವಿಚಾರವನ್ನು ಗಮನಿಸ ಬೇಕು. ಹಬ್ಬದ ಮೂಲವೇ ರೈತ. ಅದರ ಬಗ್ಗೆ ನನ್ನ ಚಿಂತೆ ಜಾಸ್ತಿ ಇದೆ. ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡಬೇಕು ಎಂಬುದು ನನ್ನ ಆಸೆ. ರೈತರ ಮನಸ್ಸಿಗೆ ನೋವಾಗುವದು ಬೇಡ ಅನ್ನುವುದು ನನ್ನ ಭಾವನೆ ಎಂದು ಬರಗಾಲದ ನಡುವೆ ಅದ್ದೂರಿ‌ ದಸರಾ ಆಚರಣೆ ವಿಚಾರವಾಗಿ ಹಂಸಲೇಖ ತಮ್ಮ ಅಭಿಪ್ರಾಯ ತಿಳಿಸಿದರು.

ದಸರಾ ಉದ್ಘಾಟನೆ ನನಗೆ ಸಿಕ್ಕಿರುವುದು ಸಾಮಾಜಿಕ ಕಲಾ ನ್ಯಾಯ: ಸಂಗೀತ ನಿರ್ದೇಶಕ ಹಂಸಲೇಖ
ಸಂಗೀತ ನಿರ್ದೇಶಕ ಹಂಸಲೇಖ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Sep 12, 2023 | 12:26 PM

ಮೈಸೂರು ಸೆ.12: ಈ ಬಾರಿಯ ಮೈಸೂರು ದಸರಾ (Mysore Dasara) ಉದ್ಘಾಟಕರಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಕೆಲವರು ಕಾವ್ಯಕ್ಕೆ ಸಿಕ್ಕ ಗೌರವ ಅಂದರು. ಇನ್ನೂ ಕೆಲವರು ಸಾಮಾಜಿಕ ನ್ಯಾಯ ಅಂತ ಹೇಳಿದರು. ಆದರೆ ಅದ್ಯಾವುದನ್ನು ವ್ಯಾಖ್ಯಾನಿಸಲು ಕಷ್ಟ. ದಸರಾ ಉದ್ಘಾಟನೆ ನನಗೆ ಸಿಕ್ಕಿರುವುದು ಸಾಮಾಜಿಕ ಕಲಾ ನ್ಯಾಯ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಹೇಳಿದರು. ಮೈಸೂರಿನಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡಿದ ಅವರು ನಾನು ಸಿನಿಮಾ ಬರಹಾಗಾರ, ನನಗೆ ಕವಿ ಪಟ್ಟ ಬೇಡ ಅಂತ ಹೇಳುತ್ತೇನೆ. ಕವಿ ಪಟ್ಟ ತೆಗೆದುಕೊಂಡರೇ, ಮೇಲೆ, ಮಧ್ಯ, ಕೆಳಗೆ ಮೂರು ಭಾಗ ಮಾಡುತ್ತಾರೆ ಎಂದರು.

ಬರಗಾಲದ ನಡುವೆ ಅದ್ದೂರಿ‌ ದಸರಾ ಆಚರಣೆ ವಿಚಾರವಾಗಿ ಮಾತನಾಡಿದ ಅವರು ರೈತರ ವಿಚಾರವನ್ನು ಗಮನಿಸ ಬೇಕು. ಹಬ್ಬದ ಮೂಲವೇ ರೈತ. ಅದರ ಬಗ್ಗೆ ನನ್ನ ಚಿಂತೆ ಜಾಸ್ತಿ ಇದೆ. ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡಬೇಕು ಎಂಬುದು ನನ್ನ ಆಸೆ. ರೈತರ ಮನಸ್ಸಿಗೆ ನೋವಾಗುವದು ಬೇಡ ಅನ್ನುವುದು ನನ್ನ ಭಾವನೆ. ಸ್ಮಾರ್ಟಿ ಸಿಟಿಗಿಂತ ಸ್ಮಾರ್ಟ್ ವಿಲೇಜ್ ಆಗಬೇಕಿದೆ. ಕೃಷಿ ತಜ್ಞರು ಸಹಾಯದಿಂದ ಸ್ಮಾರ್ಟ್ ವಿಲೇಜ್ ಮಾಡಬೇಕಿದೆ ಎಂದು ಕರೆಕೊಟ್ಟರು.

ಇದನ್ನೂ ಓದಿ: ಮೈಸೂರು ದಸರಾ ಗಜಪಡೆಗೆ ತೂಕ ಪರೀಕ್ಷೆ, ಯಾವ್ಯಾವ ಆನೆ ಎಷ್ಟು ತೂಕ?

ನನಗೆ ಕನ್ನಡ ಒಂದಂಶ ಆಗಬೇಕು. ಕನ್ನಡದ ಅಸ್ಮಿತೆ ಕಾಪಾಡುವ ಕೆಲಸವಾಬೇಕು. ಕನ್ನಡಕ್ಕಾಗಿ ಕಾವಲಿಡಿ ಕನ್ನಡವನ್ನು ರಕ್ಷಿಸಬೇಕು. ಹಿಂದಿ ಹೇರಿಕೆ‌ ಇಂದಿನಿಂದ ಅಲ್ಲ ನಾನು ಎಂಟನೇ ತರಗತಿಯಿಂದ ಇದೆ. ದೆಹಲಿಗೆ ಕನ್ನಡ ಬೇಕಾಗಿಲ್ಲ ನಮಗೆ ಹಿಂದಿ ಬೇಕಾಗಿಲ್ಲ. ಆದರೆ ನಮಗೆ ದೆಹಲಿ ಬೇಕಾಗಿದೆ. ಹಿಂದಿ ಹೇರುವ ಹುನ್ನಾರ, ಹಿಂದಿನ ಕಾಲದಿಂದಲು ಕೂಡ ಇದೆ. ಈಗ ಅದು ಜಾಸ್ತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಶಾಲೆ ಮುಚ್ಚುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು ತಾಯಿ ಮಕ್ಕಳಿಗೆ ಕನ್ನಡದ ಬಗ್ಗೆ ಹೇಳಿಕೊಡಬೇಕು. ಮಕ್ಕಳು ಇಂಗ್ಲಿಷ್​​ನಲ್ಲೇ ಓದಬೇಕೆಂಬ ಆಸೆ ಪೊಷಕರು ವ್ಯಕ್ತಪಡಿಸುತ್ತಿದ್ದಾರೆ. ಇಂಗ್ಲಿಷ್ ಇದ್ದರೆ ಮಾತ್ರ ಕೆಲಸ ಸಿಗುವುದು ಎಂಬ ಭಾವನೆ ಜನರಲ್ಲಿ ಪೋಷಕರಲ್ಲಿ ಮೂಡಿದೆ. ಹಾಗಾಗಿ ಮನೆಯಲ್ಲಿ ಇಂಗ್ಲಿಷ್ ಕಲಿಸುವ ಹಂತಕ್ಕೆ ಪೋಷಕರು ಹೋಗಿದ್ದಾರೆ. ಇಂಗ್ಲಿಷ್ ಕೆಲಸಕ್ಕೆ ಇಟ್ಟುಕೊಳ್ಳಿ ಕನ್ನಡದ ಅಸ್ಮಿತೆ ಉಳಿಸಲು ಕಲಿಯಿರಿ. ಶಾಲೆಯಿಂದ ಮಾತ್ರವಲ್ಲ, ಮನೆಯಿಂದಲೇ ಕನ್ನಡ ಕಲಿಕೆ‌ ಆಗಬೇಕು. ಈ ವೇಳೆ‌ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಆಗುತ್ತೆ ಎಂದು ಕರೆ ಕೊಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್