ಮೈಸೂರು: ಕೆವೈಸಿ ಅಪ್‌ಡೇಟ್ ನೆಪ ಹೇಳಿ 1.45 ಲಕ್ಷ ರೂ ಮೋಸ, ವ್ಯಕ್ತಿಗೆ ಹೃದಯಾಘಾತ

ಕೆವೈಸಿ ಅಪ್‌ಡೇಟ್​ ಮಾಡುವುದಾಗಿ ನಂಬಿಸಿ ಬರೋಬ್ಬರಿ 1.45 ಲಕ್ಷ ರೂ. ವಂಚನೆ ಮಾಡಿದ್ದು, ಕೂಡಿಟ್ಟ ಹಣ ಕಳೆದುಕೊಂಡ ಆಘಾತದದಿಂದ ಹೃದಯಾಘಾತವಾಗಿ ವೃದ್ದ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಹನುಮಂತನಗರದಲ್ಲಿ ನಡೆದಿದೆ. ಮತ್ತೊಂದು ಪ್ರಕರಣಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಯಡಿಯೂರು ಬಳಿಯ ಎಂಬಿಆರ್​ಬಾರ್​ನಲ್ಲಿ ನಡೆದಿದೆ.

ಮೈಸೂರು: ಕೆವೈಸಿ ಅಪ್‌ಡೇಟ್ ನೆಪ ಹೇಳಿ 1.45 ಲಕ್ಷ ರೂ ಮೋಸ, ವ್ಯಕ್ತಿಗೆ ಹೃದಯಾಘಾತ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 01, 2023 | 8:10 AM

ಮೈಸೂರು, ಸೆಪ್ಟೆಂಬರ್ 1: ಇತ್ತೀಚಿನ ದಿನಗಳಲ್ಲಿ ಆನ್​ಲೈನ್​ ವಂಚನೆಗಳು ಹೆಚ್ಚಾಗುತ್ತಿದ್ದು, ಸಾಕಷ್ಟು ಜನರು ವಂಚನೆ (Cheating) ಗೊಳಗಾಗುತ್ತಿದ್ದಾರೆ. ಸದ್ಯ ಅಂತಹದೇ ಒಂದು ಆನ್‌ಲೈನ್ ವಂಚನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಕೆವೈಸಿ ಅಪ್‌ಡೇಟ್​ ಮಾಡುವುದಾಗಿ ನಂಬಿಸಿ ಬರೋಬ್ಬರಿ 1.45 ಲಕ್ಷ ರೂ. ವಂಚನೆ ಮಾಡಿದ್ದು, ಕೂಡಿಟ್ಟ ಹಣ ಕಳೆದುಕೊಂಡ ಆಘಾತದದಿಂದ ಹೃದಯಾಘಾತವಾಗಿ ವೃದ್ದ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಹನುಮಂತನಗರದಲ್ಲಿ ನಡೆದಿದೆ. ಹಾರೂನ್ ರಷೀದ್‌ ಖಾನ್ (79) ಮೃತ ವ್ಯಕ್ತಿ. ಈ ಸಂಬಂಧ ಮೈಸೂರು ಸೈಬರ್ ಠಾಣೆಗೆ ಮೃತ ರಷೀದ್ ಖಾನ್​ ದೂರು ಸಹ ನೀಡಿದ್ದರು. ಈ ಸಂಬಂಧ ಎನ್​ಆರ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಲ್ ವಸೂಲಿಗೆ ಹೋಗಿದ್ದ ಲೈನ್ ಮ್ಯಾನ್‌ ಮೇಲೆ ಹಲ್ಲೆಗೆ ಯತ್ನ ಆರೋಪ: ಎಫ್ಐಆರ್​ ದಾಖಲು

ಬಿಲ್​ ವಸೂಲಿಗೆ ಹೋಗಿದ್ದ ಲೈನ್ ಮ್ಯಾನ್​ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಮೈಸೂರು ತಾಲ್ಲೂಕು ಮರಟಿಕ್ಯಾತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮರಿಗೌಡ ಎಂಬುವವರಿಂದ ಹಲ್ಲೆಗೆ ಯತ್ನಿಸಿದ್ದಾರೆಂದು ಲೈನ್‌ಮ್ಯಾನ್ ವಿಶ್ವನಾಥ್​ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ ನಡೆಸಿ ರಾಯಚೂರಿನ ವೈದ್ಯನ ಹತ್ಯೆಗೆ ಯತ್ನ: ಫೈರಿಂಗ್ ಮಾಡಿ ಎಸ್ಕೇಪ್​ ಆದ ದುಷ್ಕರ್ಮಿಗಳು

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಮತ್ತೆ ಊರಿಗೆ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜಯಪುರ ಪೊಲೀಸ್ ಠಾಣೆಗೆ ವಿಶ್ವನಾಥ್​ ದೂರು ನೀಡಿದ್ದು, ಮರೀಗೌಡ ವಿರುದ್ದ ಸೆಕ್ಷನ್ 353, 355, 504, 506 ಅಡಿಯಲ್ಲಿ ಎಫ್ಐಆರ್​ ದಾಖಲಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿತ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಯಡಿಯೂರು ಬಳಿಯ ಎಂಬಿಆರ್​ಬಾರ್​ನಲ್ಲಿ ಆಗಸ್ಟ್ 28 ರ ರಾತ್ರಿ 1.40 ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ಯಾಶಿಯರ್ ಸ್ವಾಗತ್ ಗೌಡ ಎಂಬಾತನಿಗೆ, ಪುನೀತ್ ಮತ್ತು ಸಹಚರರಿಂದ ಚಾಕುವಿನಿಂದ ಇರಿಯಲಾಗಿದೆ. ಎಣ್ಣೆ ಸಾಲ ಕೊಡಲಿಲ್ಲ ಎಂದು ಹಲ್ಲೆ ಮಾಡಿ ಪುಂಡಾಟ ಮಾಡಿದ್ದಾರೆ.

ಇದನ್ನೂ ಓದಿ: ಸುಳ್ಯ: ಬಲೆಗೆ ಸಿಲುಕಿ ಎರಡು ವರ್ಷದ ಚಿರತೆ ಸಾವು: ಇಬ್ಬರ ಬಂಧನ

ಸದ್ಯ ಸ್ವಾಗತ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬನಶಂಕರಿ ಪೊಲೀಸರು ಬಲೆ ಬೀಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 am, Fri, 1 September 23

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು