AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕೆವೈಸಿ ಅಪ್‌ಡೇಟ್ ನೆಪ ಹೇಳಿ 1.45 ಲಕ್ಷ ರೂ ಮೋಸ, ವ್ಯಕ್ತಿಗೆ ಹೃದಯಾಘಾತ

ಕೆವೈಸಿ ಅಪ್‌ಡೇಟ್​ ಮಾಡುವುದಾಗಿ ನಂಬಿಸಿ ಬರೋಬ್ಬರಿ 1.45 ಲಕ್ಷ ರೂ. ವಂಚನೆ ಮಾಡಿದ್ದು, ಕೂಡಿಟ್ಟ ಹಣ ಕಳೆದುಕೊಂಡ ಆಘಾತದದಿಂದ ಹೃದಯಾಘಾತವಾಗಿ ವೃದ್ದ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಹನುಮಂತನಗರದಲ್ಲಿ ನಡೆದಿದೆ. ಮತ್ತೊಂದು ಪ್ರಕರಣಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಯಡಿಯೂರು ಬಳಿಯ ಎಂಬಿಆರ್​ಬಾರ್​ನಲ್ಲಿ ನಡೆದಿದೆ.

ಮೈಸೂರು: ಕೆವೈಸಿ ಅಪ್‌ಡೇಟ್ ನೆಪ ಹೇಳಿ 1.45 ಲಕ್ಷ ರೂ ಮೋಸ, ವ್ಯಕ್ತಿಗೆ ಹೃದಯಾಘಾತ
ಪ್ರಾತಿನಿಧಿಕ ಚಿತ್ರ
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 01, 2023 | 8:10 AM

Share

ಮೈಸೂರು, ಸೆಪ್ಟೆಂಬರ್ 1: ಇತ್ತೀಚಿನ ದಿನಗಳಲ್ಲಿ ಆನ್​ಲೈನ್​ ವಂಚನೆಗಳು ಹೆಚ್ಚಾಗುತ್ತಿದ್ದು, ಸಾಕಷ್ಟು ಜನರು ವಂಚನೆ (Cheating) ಗೊಳಗಾಗುತ್ತಿದ್ದಾರೆ. ಸದ್ಯ ಅಂತಹದೇ ಒಂದು ಆನ್‌ಲೈನ್ ವಂಚನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಕೆವೈಸಿ ಅಪ್‌ಡೇಟ್​ ಮಾಡುವುದಾಗಿ ನಂಬಿಸಿ ಬರೋಬ್ಬರಿ 1.45 ಲಕ್ಷ ರೂ. ವಂಚನೆ ಮಾಡಿದ್ದು, ಕೂಡಿಟ್ಟ ಹಣ ಕಳೆದುಕೊಂಡ ಆಘಾತದದಿಂದ ಹೃದಯಾಘಾತವಾಗಿ ವೃದ್ದ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಹನುಮಂತನಗರದಲ್ಲಿ ನಡೆದಿದೆ. ಹಾರೂನ್ ರಷೀದ್‌ ಖಾನ್ (79) ಮೃತ ವ್ಯಕ್ತಿ. ಈ ಸಂಬಂಧ ಮೈಸೂರು ಸೈಬರ್ ಠಾಣೆಗೆ ಮೃತ ರಷೀದ್ ಖಾನ್​ ದೂರು ಸಹ ನೀಡಿದ್ದರು. ಈ ಸಂಬಂಧ ಎನ್​ಆರ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಲ್ ವಸೂಲಿಗೆ ಹೋಗಿದ್ದ ಲೈನ್ ಮ್ಯಾನ್‌ ಮೇಲೆ ಹಲ್ಲೆಗೆ ಯತ್ನ ಆರೋಪ: ಎಫ್ಐಆರ್​ ದಾಖಲು

ಬಿಲ್​ ವಸೂಲಿಗೆ ಹೋಗಿದ್ದ ಲೈನ್ ಮ್ಯಾನ್​ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಮೈಸೂರು ತಾಲ್ಲೂಕು ಮರಟಿಕ್ಯಾತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮರಿಗೌಡ ಎಂಬುವವರಿಂದ ಹಲ್ಲೆಗೆ ಯತ್ನಿಸಿದ್ದಾರೆಂದು ಲೈನ್‌ಮ್ಯಾನ್ ವಿಶ್ವನಾಥ್​ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ ನಡೆಸಿ ರಾಯಚೂರಿನ ವೈದ್ಯನ ಹತ್ಯೆಗೆ ಯತ್ನ: ಫೈರಿಂಗ್ ಮಾಡಿ ಎಸ್ಕೇಪ್​ ಆದ ದುಷ್ಕರ್ಮಿಗಳು

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಮತ್ತೆ ಊರಿಗೆ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜಯಪುರ ಪೊಲೀಸ್ ಠಾಣೆಗೆ ವಿಶ್ವನಾಥ್​ ದೂರು ನೀಡಿದ್ದು, ಮರೀಗೌಡ ವಿರುದ್ದ ಸೆಕ್ಷನ್ 353, 355, 504, 506 ಅಡಿಯಲ್ಲಿ ಎಫ್ಐಆರ್​ ದಾಖಲಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿತ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಯಡಿಯೂರು ಬಳಿಯ ಎಂಬಿಆರ್​ಬಾರ್​ನಲ್ಲಿ ಆಗಸ್ಟ್ 28 ರ ರಾತ್ರಿ 1.40 ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ಯಾಶಿಯರ್ ಸ್ವಾಗತ್ ಗೌಡ ಎಂಬಾತನಿಗೆ, ಪುನೀತ್ ಮತ್ತು ಸಹಚರರಿಂದ ಚಾಕುವಿನಿಂದ ಇರಿಯಲಾಗಿದೆ. ಎಣ್ಣೆ ಸಾಲ ಕೊಡಲಿಲ್ಲ ಎಂದು ಹಲ್ಲೆ ಮಾಡಿ ಪುಂಡಾಟ ಮಾಡಿದ್ದಾರೆ.

ಇದನ್ನೂ ಓದಿ: ಸುಳ್ಯ: ಬಲೆಗೆ ಸಿಲುಕಿ ಎರಡು ವರ್ಷದ ಚಿರತೆ ಸಾವು: ಇಬ್ಬರ ಬಂಧನ

ಸದ್ಯ ಸ್ವಾಗತ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬನಶಂಕರಿ ಪೊಲೀಸರು ಬಲೆ ಬೀಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 am, Fri, 1 September 23

ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ
ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್