ಮೈಸೂರು: ಕೆವೈಸಿ ಅಪ್‌ಡೇಟ್ ನೆಪ ಹೇಳಿ 1.45 ಲಕ್ಷ ರೂ ಮೋಸ, ವ್ಯಕ್ತಿಗೆ ಹೃದಯಾಘಾತ

ಕೆವೈಸಿ ಅಪ್‌ಡೇಟ್​ ಮಾಡುವುದಾಗಿ ನಂಬಿಸಿ ಬರೋಬ್ಬರಿ 1.45 ಲಕ್ಷ ರೂ. ವಂಚನೆ ಮಾಡಿದ್ದು, ಕೂಡಿಟ್ಟ ಹಣ ಕಳೆದುಕೊಂಡ ಆಘಾತದದಿಂದ ಹೃದಯಾಘಾತವಾಗಿ ವೃದ್ದ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಹನುಮಂತನಗರದಲ್ಲಿ ನಡೆದಿದೆ. ಮತ್ತೊಂದು ಪ್ರಕರಣಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರಿನ ಯಡಿಯೂರು ಬಳಿಯ ಎಂಬಿಆರ್​ಬಾರ್​ನಲ್ಲಿ ನಡೆದಿದೆ.

ಮೈಸೂರು: ಕೆವೈಸಿ ಅಪ್‌ಡೇಟ್ ನೆಪ ಹೇಳಿ 1.45 ಲಕ್ಷ ರೂ ಮೋಸ, ವ್ಯಕ್ತಿಗೆ ಹೃದಯಾಘಾತ
ಪ್ರಾತಿನಿಧಿಕ ಚಿತ್ರ
Edited By:

Updated on: Sep 01, 2023 | 8:10 AM

ಮೈಸೂರು, ಸೆಪ್ಟೆಂಬರ್ 1: ಇತ್ತೀಚಿನ ದಿನಗಳಲ್ಲಿ ಆನ್​ಲೈನ್​ ವಂಚನೆಗಳು ಹೆಚ್ಚಾಗುತ್ತಿದ್ದು, ಸಾಕಷ್ಟು ಜನರು ವಂಚನೆ (Cheating) ಗೊಳಗಾಗುತ್ತಿದ್ದಾರೆ. ಸದ್ಯ ಅಂತಹದೇ ಒಂದು ಆನ್‌ಲೈನ್ ವಂಚನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಕೆವೈಸಿ ಅಪ್‌ಡೇಟ್​ ಮಾಡುವುದಾಗಿ ನಂಬಿಸಿ ಬರೋಬ್ಬರಿ 1.45 ಲಕ್ಷ ರೂ. ವಂಚನೆ ಮಾಡಿದ್ದು, ಕೂಡಿಟ್ಟ ಹಣ ಕಳೆದುಕೊಂಡ ಆಘಾತದದಿಂದ ಹೃದಯಾಘಾತವಾಗಿ ವೃದ್ದ ಸಾವನ್ನಪ್ಪಿರುವಂತಹ ಘಟನೆ ಮೈಸೂರಿನ ಹನುಮಂತನಗರದಲ್ಲಿ ನಡೆದಿದೆ. ಹಾರೂನ್ ರಷೀದ್‌ ಖಾನ್ (79) ಮೃತ ವ್ಯಕ್ತಿ. ಈ ಸಂಬಂಧ ಮೈಸೂರು ಸೈಬರ್ ಠಾಣೆಗೆ ಮೃತ ರಷೀದ್ ಖಾನ್​ ದೂರು ಸಹ ನೀಡಿದ್ದರು. ಈ ಸಂಬಂಧ ಎನ್​ಆರ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಲ್ ವಸೂಲಿಗೆ ಹೋಗಿದ್ದ ಲೈನ್ ಮ್ಯಾನ್‌ ಮೇಲೆ ಹಲ್ಲೆಗೆ ಯತ್ನ ಆರೋಪ: ಎಫ್ಐಆರ್​ ದಾಖಲು

ಬಿಲ್​ ವಸೂಲಿಗೆ ಹೋಗಿದ್ದ ಲೈನ್ ಮ್ಯಾನ್​ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಮೈಸೂರು ತಾಲ್ಲೂಕು ಮರಟಿಕ್ಯಾತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮರಿಗೌಡ ಎಂಬುವವರಿಂದ ಹಲ್ಲೆಗೆ ಯತ್ನಿಸಿದ್ದಾರೆಂದು ಲೈನ್‌ಮ್ಯಾನ್ ವಿಶ್ವನಾಥ್​ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ ನಡೆಸಿ ರಾಯಚೂರಿನ ವೈದ್ಯನ ಹತ್ಯೆಗೆ ಯತ್ನ: ಫೈರಿಂಗ್ ಮಾಡಿ ಎಸ್ಕೇಪ್​ ಆದ ದುಷ್ಕರ್ಮಿಗಳು

ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಮತ್ತೆ ಊರಿಗೆ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜಯಪುರ ಪೊಲೀಸ್ ಠಾಣೆಗೆ ವಿಶ್ವನಾಥ್​ ದೂರು ನೀಡಿದ್ದು, ಮರೀಗೌಡ ವಿರುದ್ದ ಸೆಕ್ಷನ್ 353, 355, 504, 506 ಅಡಿಯಲ್ಲಿ ಎಫ್ಐಆರ್​ ದಾಖಲಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿತ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಾರ್ ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಯಡಿಯೂರು ಬಳಿಯ ಎಂಬಿಆರ್​ಬಾರ್​ನಲ್ಲಿ ಆಗಸ್ಟ್ 28 ರ ರಾತ್ರಿ 1.40 ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕ್ಯಾಶಿಯರ್ ಸ್ವಾಗತ್ ಗೌಡ ಎಂಬಾತನಿಗೆ, ಪುನೀತ್ ಮತ್ತು ಸಹಚರರಿಂದ ಚಾಕುವಿನಿಂದ ಇರಿಯಲಾಗಿದೆ. ಎಣ್ಣೆ ಸಾಲ ಕೊಡಲಿಲ್ಲ ಎಂದು ಹಲ್ಲೆ ಮಾಡಿ ಪುಂಡಾಟ ಮಾಡಿದ್ದಾರೆ.

ಇದನ್ನೂ ಓದಿ: ಸುಳ್ಯ: ಬಲೆಗೆ ಸಿಲುಕಿ ಎರಡು ವರ್ಷದ ಚಿರತೆ ಸಾವು: ಇಬ್ಬರ ಬಂಧನ

ಸದ್ಯ ಸ್ವಾಗತ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬನಶಂಕರಿ ಪೊಲೀಸರು ಬಲೆ ಬೀಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 am, Fri, 1 September 23

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us