AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆಯ ಕಚೇರಿಯಲ್ಲಿ ಸಿಗರೇಟ್ ಸೇದಬೇಡ ಎಂದ ರೆವೆನ್ಯೂ ಇನ್ಸ್​​ಪೆಕ್ಟರ್​​ಗೆ ಹಿಗ್ಗಾಮುಗ್ಗ ಥಳಿಸಿದ ಯುವಕ

ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟ್ ಸೇದದಂತೆ ತಿಳಿವಳಿಕೆ ಹೇಳಿದ್ದಕ್ಕೇ ರೊಚ್ಚಿಗೆದ್ದ ಯುವಕ ಅಧಿಕಾರಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊರಗೆ ಬಾ ನೋಡಿಕೊಳ್ಳುತ್ತೇನೆ ಅಂತಾ ಧಮ್ಕಿ ಹಾಕಿರುವ ಪ್ರಸಂಗ ಮೈಸೂರಿನಲ್ಲಿ ನಡೆದಿದೆ.

ಪಾಲಿಕೆಯ ಕಚೇರಿಯಲ್ಲಿ ಸಿಗರೇಟ್ ಸೇದಬೇಡ ಎಂದ ರೆವೆನ್ಯೂ ಇನ್ಸ್​​ಪೆಕ್ಟರ್​​ಗೆ ಹಿಗ್ಗಾಮುಗ್ಗ ಥಳಿಸಿದ ಯುವಕ
ಸಿಗರೇಟ್ ಸೇದಬೇಡ ಎಂದ ಇನ್ಸ್​​ಪೆಕ್ಟರ್​​ಗೆ ಹಿಗ್ಗಾಮುಗ್ಗ ಥಳಿಸಿದ ಯುವಕ
ರಾಮ್​, ಮೈಸೂರು
| Updated By: ಸಾಧು ಶ್ರೀನಾಥ್​|

Updated on: Dec 08, 2023 | 5:04 PM

Share

ಇತ್ತೀಚೆಗೆ ಬುದ್ದಿ ಹೇಳೋದಕ್ಕೂ ಹೆದರಬೇಕು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ.‌ ಇದಕ್ಕೆ ಕಾರಣ ಮೈಸೂರಿನಲ್ಲಿ ನಡೆದ ಘಟನೆ. ಸರ್ಕಾರಿ ಕಚೇರಿಯ ಆವರಣದಲ್ಲಿ ಸಿಗರೇಟ್ ಸೇದುತ್ತಿದ್ದನ್ನು (smoking) ಪ್ರಶ್ನೆ ಮಾಡಿದಕ್ಕೆ ರೊಚ್ಚಿಗೆದ್ದ ಯುವಕನೊಬ್ಬ ಕಂದಾಯ ನಿರೀಕ್ಷಕ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿದ್ದ ಜನ ತಡೆಯುತ್ತಿದ್ದರೂ ನಿರಂತರವಾಗಿ ಹಲ್ಲೆ (attack) ನಡೆಸಿದ ಯುವಕ (youth). ತಪ್ಪಿಸಿಕೊಳ್ಳಲು ಹರಸಾಹ ಪಟ್ಟ ಅಧಿಕಾರಿ. ಕಿವಿಯಲ್ಲಿ ಕೇಳಲಾಗದಂತಹ ಅಶ್ಲೀಲ ಪದಗಳ ಸುರಿಮಳೆ. ಇಂತಹ ಘಟನೆ ನಡೆದಿರೋದು ಮೈಸೂರಿನ ಬಸವನಗುಡಿ ಬಡಾವಣೆಯಲ್ಲಿರುವ ಮೈಸೂರು (Mysore) ಮಹಾನಗರ ಪಾಲಿಕೆಯ ವಲಯ ಕಚೇರಿ 5 ರಲ್ಲಿ.

ಈ ರೀತಿ ಹಲ್ಲೆ ಮಾಡಿದವನು ಮೈಸೂರಿನ ಕುಂಬಾರಕೊಪ್ಪಲು ನಿವಾಸಿ ಧನುಷ್. ಹಲ್ಲೆಗೊಳಗಾದವರು ಕಂದಾಯ ನಿರೀಕ್ಷಕರಾದ ನಂದಕುಮಾರ್. ಅಷ್ಟಕ್ಕೂ ನಂದಕುಮಾರ್ ಮೇಲೆ ಧನುಷ್ ಹಲ್ಲೆ ನಡೆಸಲು ಕಾರಣ ಏನು ಅಂತಾ ಕೇಳಿದ್ರೆ ನೀವು ಅಚ್ಚರಿ ಪಡ್ತೀರಾ.

ಹೌದು ಆರೋಪಿ ಧನುಷ್ ವಲಯ‌ ಕಚೇರಿ 5 ರ ಆವರಣದಲ್ಲಿ ಸಿಗರೇಟ್ ಸೇದುತ್ತಿದ್ದ. ಅದನ್ನು ಗಮನಿಸಿದ ನಂದಕುಮಾರ್ ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟ್ ಸೇದದಂತೆ ತಿಳಿವಳಿಕೆ ಹೇಳಿದ್ದಾನೆ. ಅಷ್ಟಕ್ಕೇ ರೊಚ್ಚಿಗೆದ್ದ ಧನುಷ್ ಕಚೇರಿ ಒಳಗೆ ನುಗ್ಗಿ ನಂದಕುಮಾರ್‌ರನ್ನು ಎಳೆದಾಡಿ ಹಲ್ಲೆ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊರಗೆ ಬಾ ನೋಡಿಕೊಳ್ಳುತ್ತೇನೆ ಅಂತಾ ಧಮ್ಕಿ ಹಾಕಿದ್ದಾನೆ. ಈ ಸಂಬಂಧ ಪಾಲಿಕೆ ಸಿಬ್ಬಂದಿಗಳು ಪಾಲಿಕೆ ಆಯುಕ್ತ ಅಸಾದ್ ಉರ್ ರಹಮಾನ್ ಷರೀಫ್ ಅವರಿಗೆ ಲಿಖಿತ ದೂರು ನೀಡಿದ್ದಾರೆ.

Also Read: ವರ್ಕ್ ಫ್ರಂ ಹೋಮ್ ಕಡಿಮೆ ಆಗುತ್ತಿದ್ದಂತೆಯೇ ಭಾರತದಲ್ಲಿ ಸಿಗರೇಟ್ ಮಾರಾಟ ಹೆಚ್ಚಳ

ಈ ಸಂಬಂಧ ಹೀಗಾಗಲೇ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಧನುಷ್ ತಲೆ ಮರೆಸಿಕೊಂಡಿದ್ದಾನೆ. ಆತನಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತ ಸಿಬ್ಬಂದಿ ವಿಚಲಿತರಾಗದಂತೆ ಆಯುಕ್ತರು ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲ ಎಲ್ಲರಿಗೂ ಸೂಕ್ತ ರಕ್ಷಣೆ ನೀಡುವ ಭರವಸೆ ನೀಡಿದ್ದಾರೆ. ಒಟ್ಟಾರೆ ಸಿಗರೇಟ್ ಸೇದ ಬೇಡ ಅಂದಿದ್ದೇ ಮಹಾ ಅಪರಾಧ ಎಂಬಂತೆ ಹಲ್ಲೆ ನಡೆಸಿದ ಧನುಷ್‌ ವಿರುದ್ಧ ಕಾನೂನು ರೀತಿ ಕ್ರಮ ಆಗಬೇಕಿದೆ. ಆಗ ಮಾತ್ರ ಇಂತಹ ಘಟನೆಗಳಿಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್