AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಮೈಸೂರಿನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

ಮೈಸೂರಿನಲ್ಲಿ ಜನರ ಆತಂಕಕ್ಕೆ ಕಾರಣವಾಗಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಇನ್ನೊಂದೆಡೆ ಹಾವೇರಿಯಲ್ಲೂ ಚಿರತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಜನರಲ್ಲಿ ಭಯ ಹುಟ್ಟಿಸಿದೆ.

Mysore News: ಮೈಸೂರಿನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ
ಮೈಸೂರಿನಲ್ಲಿ ಸೆರೆಯಾದ ಚಿರತೆ ಮತ್ತು ಹಾವೇರಿಯಲ್ಲಿ ಪ್ರತ್ಯಕ್ಷಗೊಂಡಿರುವ ಚಿರತೆ
TV9 Web
| Updated By: Rakesh Nayak Manchi|

Updated on:Dec 27, 2022 | 12:08 PM

Share

ಮೈಸೂರು: ಚಿರತೆಗಳ ವಿಪರೀತ ಹಾವಳಿ (Leopard menace in Mysore) ಇರುವ ಜಿಲ್ಲೆಗಳಲ್ಲೊಂದಾಗಿರುವ ಮೈಸೂರಿನಲ್ಲಿ ಮತ್ತೊಂದು ಚಿರತೆ ಬೋನಿಗೆ (Leopard falls into cage) ಬಿದ್ದಿದೆ. ಮೈಸೂರು ತಾಲೂಕಿನ ಕೀಳನಪುರ (Keelanapura) ಗ್ರಾಮದಲ್ಲಿ ಇಟ್ಟಿದ್ದ ಬೋನಿನೊಳಗೆ ಚಿರತೆ ಸೆರೆಯಾಗುವ ಮೂಲಕ ಗ್ರಾಮಸ್ಥರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಚಿರತೆ ಓಡಾಟ ನಡೆಸುತ್ತಿತ್ತು. ಮೂರು ದಿನಗಳ ಹಿಂದೆ ಕರು ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದಾಗಿ ಜನರು ಭೀತಿಗೊಳಲಾಗಿದ್ದರು. ಅಖಾಡಕ್ಕಿಳಿದ ಅರಣ್ಯಾಧಿಕಾರಿಗಳು ಅದೇ ಕರುವಿನ ಮೃತದೇಹವನ್ನು ಬೋನಿನಲ್ಲಿಟ್ಟು ಚಿರತೆ ಸೆರೆಗೆ ಕಾಯುತ್ತಿದ್ದರು. ಇದೀಗ ಕರು ಬಲಿ ಪಡೆದ ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಸೆರೆಯಾದ ಚಿರತೆಗೆ ಸುಮಾರು 8 ವರ್ಷ ವಯಸ್ಸು ಆಗಿರಬಹುದು ಎಂದು ನಂಬಲಾಗಿದೆ. ಆರ್​ಎಫ್​​ಓ ಸುರೇಂದ್ರ, ಡಿಆರ್‌ಎಫ್‌ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇದನ್ನೂ ಓದಿ: ಮಂಡ್ಯ: ಮನೆ ಮುಂದೆ ಕಟ್ಟಿಹಾಕಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ

ಕೂರಗುಂದ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ

ಹಾವೇರಿ: ತಾಲುಕಿನ ಗುತ್ತಲ ಕೂರಗುಂದ ಬರಡಿ ಬಸಾಪುರ ಕನವಳ್ಳಿ ಕಾಟೆನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಚಿರತೆ ಭಯ ಕಾಡುತ್ತಿದೆ. ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿ (Leopard Spotted)ಕೊಂಡಿದ್ದು, ಕೂರಗುಂದ ಗ್ರಾಮದ ತೋಟವೊಂದರಲ್ಲಿ ಆಕಳನ್ನು ತಿಂದುಹಾಕಿದೆ. ಅಲ್ಲದೆ, ಜಮೀನೊಂದರಲ್ಲಿ ಚಿರತೆ ರಾಜಾರೊಷವಾಗಿ ಸಂಚರಿಸುತ್ತಿರುವ ದೃಶ್ಯವನ್ನು ರೈತರೊಬ್ಬರು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಚಿರತೆ ಮರಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ

ಇತ್ತಿಚೆಗೆ ಗಡ್ಡಿತಾಂಡ ಗ್ರಾಮದ ತೋಟದಲ್ಲಿ ಚಿರತೆಯೊಂದು ನಾಯಿ ಮೇಲೆ ದಾಳಿ ನಡೆಸಿ ಕೊಂದು ತಿಂದು ಹಾಕಿತ್ತು. ಈ ಎಲ್ಲಾ ಬೆಳವಣಿಗೆಗಳು ಸಹಜವಾಗಿ ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ಹೀಗಾಗಿ ಕೂಡಲೇ ಚಿರತೆಯನ್ನ ಸೆರೆ ಹಿಡಿಯುವಂತೆ ಜನರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Tue, 27 December 22

ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?
ನಾಡೆಲ್ಲಾರಿಂದ ಸುಂದರ್ ಪಿಚ್ಚೈವರೆಗೆ ಟ್ರಂಪ್ ಔತಣ ಕೂಟದಲ್ಲಿ ಯಾರ್ಯಾರಿದ್ರು?