AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ಬಿಟ್ಟು ಹೋಗಿದ್ದ 1.5 ಲಕ್ಷ ಮೌಲ್ಯದ ಚಿನ್ನಾಭರಣ ಮಾಲೀಕರಿಗೆ ಹಿಂದಿರುಗಿಸಿದ ಮೈಸೂರಿನ ಆಟೋ ಡ್ರೈವರ್

ಆಟೋದಲ್ಲೇ ಬಿಟ್ಟು ಹೋದ ಒಡವೆಗಳನ್ನು ಮಾಲೀಕರಿಗೆ ಹಿಂದಿರುಗಿಸಿದ ಆಟೋ ಚಾಲಕನ ನಿಷ್ಠೆಗೆ ಜನರು ಹೊಗಳಿಕೆಯ ಮಾತುಗಳನ್ನಾಡುತ್ತಿದ್ದಾರೆ.

ಆಟೋದಲ್ಲಿ ಬಿಟ್ಟು ಹೋಗಿದ್ದ 1.5 ಲಕ್ಷ ಮೌಲ್ಯದ ಚಿನ್ನಾಭರಣ ಮಾಲೀಕರಿಗೆ ಹಿಂದಿರುಗಿಸಿದ ಮೈಸೂರಿನ ಆಟೋ ಡ್ರೈವರ್
ಆಟೋದಲ್ಲಿ ಬಿಟ್ಟು ಹೋಗಿದ್ದ 1.5 ಲಕ್ಷ ಮೌಲ್ಯದ ಚಿನ್ನಾಭರಣ ಮಾಲೀಕರಿಗೆ ಹಿಂದಿರುಗಿಸಿದ ಮೈಸೂರಿನ ಆಟೋ ಡ್ರೈವರ್
TV9 Web
| Edited By: |

Updated on: Dec 11, 2022 | 12:27 PM

Share

ಮೈಸೂರು: ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಆಟೋ ಚಾಲಕ ಸ್ವಾಮಿಯೇ ನಿದರ್ಶನ. ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು (Gold jewelleries) ಆಟೋ ಚಾಲಕ (Auto Driver) ಸ್ವಾಮಿ ಎಂಬವರು ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದು, ಸ್ವಾಮಿ ನಿಷ್ಠೆ (Loyalty) ಹಾಗೂ ಪ್ರಾಮಾಣಿಕತೆಯನ್ನು ಮೆಚ್ಚಿ ಪೊಲೀಸರು ಸನ್ಮಾನ ಮಾಡಿದ್ದಾರೆ. ದೇವರಾಜ ಸಂಚಾರ ಪೊಲೀಸ್ ಠಾಣೆ ಇನ್ಸಪೆಕ್ಟರ್ ಮುನಿಯಪ್ಪ ಅವರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನಿಸಿ ಗೌರವಿಸಿದರು.

ಇದನ್ನೂ ಓದಿ: ವಿದೇಶಿಗನ ಮೇಲೆ ಪ್ರಭಾವ ಬೀರಿದ ‘ಓಂ’, ತನ್ನ ಬೆನ್ನಿನ ಮೇಲೆ‌ ಓಂ ಟ್ಯಾಟೂ‌ ಹಾಕಿಸಿಕೊಂಡ‌ ಆ್ಯಂಡಿ

ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದಿದ್ದರು. ಇಲ್ಲಿಂದ ಮನೆಗೆ ಸ್ವಾಮಿ ಎಂಬವರ ಆಟೋದಲ್ಲಿ ಹೋಗಿದ್ದಾರೆ. ಅದರಂತೆ ಸ್ವಾಮಿ ಅವರು ಚೇತನ ಅವರನ್ನು ಮನೆ ಬಳಿ ಬಿಟ್ಟು ವಾಪಸ್ ಆಗಿದ್ದಾರೆ. ಹೀಗೆ ಬಂದು ಹಿಂಬದಿ ಸೀಟ್ ನೋಡಿದಾಗ ಚಿನ್ನಾಭರಣ ಪತ್ತೆಯಾಗಿದೆ.

ಇದನ್ನೂ ಓದಿ: ಮೈಸೂರು: ಅಮ್ಮ ಹುಲಿಯ ನಿಗ್ರಾಣಿಯಲ್ಲಿ ಮರಿಗಳು ಸ್ವಚ್ಛಂದವಾಗಿ ಓಡಾಡುವ ದೃಶ್ಯ ಕಣ್ಮನ ಸೆಳೆಯುತ್ತದೆ

ತಮ್ಮ ಆಟೋದಲ್ಲಿ ಪತ್ತೆಯಾದ ಚಿನ್ನಾಭರಣಗಳನ್ನು ಸ್ವಾಮಿಯವರು ದೇವರಾಜ ಸಂಚಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿ ಚೇತನಾ ಅವರನ್ನು ಠಾಣೆಗೆ ಕರೆಸಿ ಚಿನ್ನಾಭರಣಗಳನ್ನು ಒಪ್ಪಿಸಿದ್ದಾರೆ. ಸುಮಾರು 1.5 ಲಕ್ಷ ಮೌಲ್ಯದ 24 ಗ್ರಾಂನ ಮಾಂಗಲ್ಯ ಸರ, 10 ಗ್ರಾಂ ಸರ , 2 ಗ್ರಾಂ ಉಂಗುರವನ್ನು ಚೇತನ ಅವರು ಆಟೋಪದಲ್ಲಿ ಬಿಟ್ಟು ಹೋಗಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!