AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿಮಾನಯಾನ ಬಹುತೇಕ ಸ್ತಬ್ಧ! ಬಳಲುತ್ತಿದೆ ಕೈಗಾರಿಕೆ, ಪ್ರವಾಸೋದ್ಯಮ

ವಿಮಾನಗಳ ಹಾರಾಟ ಕಡಿಮೆಯಾಗಲು ಸಾಕಷ್ಟು ಕಾರಣಗಳಿದೆ. ಅದ್ರಲ್ಲಿ ವಿಮಾನಗಳ ಸಂಖ್ಯೆ ಕೂಡ ಕಡಿಮೆ ಇದೆ. ಇದಷ್ಟೆ ಅಲ್ಲದೆ ಹಲವು ತಾಂತ್ರಿಕ ಕಾರಣಗಳೂ ಇದೆ ಎಂದೆ ಹೇಳಲಾಗುತ್ತಿದೆ. ಆದ್ರೆ ಅಸಲಿಗೆ ಉಡಾನ್ ಯೋಜನೆಯಲ್ಲಿ ನೀಡಲಾಗುತ್ತಿದ್ದ ಸಬ್ಸಿಡಿ ಕಡಿತವಾಗಿದ್ರಿಂದ ಈ ಸಮಸ್ಯೆಗೆ ಕಾರಣ ಎನ್ನಲಾಗುತ್ತಿದೆ.

ಮೈಸೂರು ವಿಮಾನಯಾನ ಬಹುತೇಕ ಸ್ತಬ್ಧ! ಬಳಲುತ್ತಿದೆ ಕೈಗಾರಿಕೆ, ಪ್ರವಾಸೋದ್ಯಮ
ಮೈಸೂರು ವಿಮಾನಯಾನ ಬಹುತೇಕ ಸ್ತಬ್ಧ! ಬಳಲುತ್ತಿದೆ ಕೈಗಾರಿಕೆ, ಪ್ರವಾಸೋದ್ಯಮ
ದಿಲೀಪ್​, ಚೌಡಹಳ್ಳಿ
| Edited By: |

Updated on: Jan 26, 2024 | 10:07 AM

Share

ಮೈಸೂರಿನಲ್ಲಿ ವಿಮಾನ ಸೇವೆ ಆರಂಭವಾಗಿ ಸಾಕಷ್ಟು ಪ್ರಯಾಣಿಕರಿಗೆ ಅನುಕೂಲವಾಗಿತ್ತು. ಈ ಕಾರಣದಿಂದಲೇ ಕೈಗಾರಿಕೆ ಅಭಿವೃದ್ಧಿಗೆ ವಿಮಾನಯಾನ ಸೇವೆ ಅನುಕೂಲವಾಗುತ್ತೆ ಅನ್ನೋ ಕಾರಣಕ್ಕೆ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಕಾರ್ಯ ಕೂಡ ಆರಂಭವಾಗಿದೆ. ಆದ್ರೀಗಾ ಮೈಸೂರಿನಲ್ಲಿ ಲೋಹದ ಹಕ್ಕಿಗಳ ಹಾರಾಟ ಬಹುತೇಕ ಕಡಿಮೆಯಾಗಿದೆ. ಒಂದೆರಡು ವಿಮಾನ ಸೇವೆಯಷ್ಟೆ ಇದೆ.

ಇತ್ತೀಚಿಗೆ ಮೈಸೂರು ಕೂಡ ಬೆಂಗಳೂರಿನಷ್ಟೆ ವೇಗವಾಗಿ ಬೆಳೆಯಲು ಆರಂಭಿಸಿದೆ. ಸಾಕಷ್ಟು ಫ್ಯಾಕ್ಟರಿಗಳು ತಲೆ ಎತ್ತಲು ಆರಂಭಿಸಿದೆ. ಆದ್ರೆ ಇಂತಹ ಮೈಸೂರು ನಗರಕ್ಕಿದ್ದ ವಿಮಾನಯಾನ ಸೇವೆ ದಿಢೀರನೆ ರದ್ದಾಗಿದೆ. ಹೌದು, ಮೈಸೂರಿನ ಮಂಡಕಳ್ಳಿಯಲ್ಲಿ ವಿಮಾನ ನಿಲ್ದಾಣ ಇದ್ದರೂ ಅದು ಪ್ರಯೋಜನಕ್ಕೆ ಇರಲಿಲ್ಲ. ಇತ್ತೀಚಿಗೆ ವಿಮಾನ ಹಾರಾಟ ಸಾಕಷ್ಟು ಹೆಚ್ಚಾಗಿತ್ತು. ಇದು ಒಂದು ರೀತಿ ಕೈಗಾರಿಕೆ ಹಾಗೂ ಮೈಸೂರು ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕೂಲವಾಗಿತ್ತು.

ಆದ್ರೆ ರನ್ ವೇ ಚಿಕ್ಕದು ಎಂಬ ಕಾರಣಕ್ಕೆ ದೊಡ್ಡ ವಿಮಾನಗಳ ಹಾರಾಟ ಕಷ್ಟವಾಗಿತ್ತು. ರನ್ ವೇ ದೊಡ್ಡದಾದ್ರೆ ವಿಮಾನ ಹಾರಾಟ ಸಂಖ್ಯೆ ಹೆಚ್ಚಾಗುತ್ತೆ, ಇದು ಕೈಗಾರಿಕೆ, ಪ್ರವಾಸೋದ್ಯಮ ದೃಷ್ಟಿಯಿಂದ ಮೈಸೂರಿಗೆ ಅನುಕೂಲವಾಗುತ್ತೆ ಎಂದೆ ಲೆಕ್ಕಾಚಾರ ಹಾಕಲಾಗಿತ್ತು. ಆದ್ರೀಗಾ ವಿಮಾನ ಹಾರಾಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಲೆ ಇದೆ. ಮೊದಲಿಗೆ ಮೈಸೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ, ಕೊಚ್ಚಿ, ಬೆಂಗಳೂರು, ಹೈದರ್, ಗೋವಾ ಮತ್ತು ಚೆನೈಗೆ ವಿಮಾನಯಾನ ಸೇವೆ ಇತ್ತು. ಇದೀಗಾ ಚೆನ್ನೈ ಹಾಗೂ ಹೈದರಾಬಾದ್ ಮಾತ್ರ ವಿಮಾನ ಸೇವೆಗಳು ಲಭ್ಯವಿದೆ.

ಇಷ್ಟೊಂದು ವಿಮಾನಗಳ ಹಾರಾಟ ಕಡಿಮೆಯಾಗಲು ಸಾಕಷ್ಟು ಕಾರಣಗಳಿದೆ. ಅದ್ರಲ್ಲಿ ವಿಮಾನಗಳ ಸಂಖ್ಯೆ ಕೂಡ ಕಡಿಮೆ ಇದೆ. ಇದಷ್ಟೆ ಅಲ್ಲದೆ ಹಲವು ತಾಂತ್ರಿಕ ಕಾರಣಗಳೂ ಇದೆ ಎಂದೆ ಹೇಳಲಾಗುತ್ತಿದೆ. ಆದ್ರೆ ಅಸಲಿಗೆ ಉಡಾನ್ ಯೋಜನೆಯಲ್ಲಿ ನೀಡಲಾಗುತ್ತಿದ್ದ ಸಬ್ಸಿಡಿ ಕಡಿತವಾಗಿದ್ರಿಂದ ಈ ಸಮಸ್ಯೆಗೆ ಕಾರಣ ಎನ್ನಲಾಗುತ್ತಿದೆ. ಆದ್ರೆ ಮೈಸೂರು ಸಂಸದರು ಮಾತ್ರ ಕೆಲ ವಿಮಾನಗಳ ರಿಪೇರಿ ಕೆಲಸ ನಡೆಯುತ್ತಿದೆ. ಮುಂದಿನ ದಿನದಲ್ಲಿ ವಿಮಾನ ಸಂಖ್ಯೆ ಹೆಚ್ಚಿಸುತ್ತೇವೆ ಎನ್ನುತ್ತಿದ್ದಾರೆ.

ಒಟ್ಟಾರೆ, ಮೈಸೂರಿನಲ್ಲಿ ಈಗಷ್ಟೇ ವಿಮಾನಯಾನ ಸೇವೆಗೆ ಬೇಡಿಕೆ ಹೆಚ್ಚಾಗುತ್ತಿತ್ತು.‌ ಆದ್ರೆ ಬೇಡಿಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲೆ ವಿಮಾನ ಹಾರಾಟ ಸ್ಥಗಿತವಾಗಿರೋದು ಬೇಸರದ ವಿಚಾರ.‌ ಆದಷ್ಟು ಬೇಗ ಹಿಂದಿನಂತೆ ವಿಮಾನಯಾನ ಸೇವೆ ಸಿಗಲಿ ಎಂಬುದೆ ಎಲ್ಲರ ಆಶಯ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?