AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Bangalore Expressway: ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಮಾಜಿ ಸಿಎಂ ಎಸ್.ಎಂ.ಕೃಷ್ಣ

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಎರಡನೇ ಹೆಸರು ಮುನ್ನಲೆಗೆ ಬಂದಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

Mysore Bangalore Expressway: ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಮಾಜಿ ಸಿಎಂ ಎಸ್.ಎಂ.ಕೃಷ್ಣ
ಎಸ್.ಎಂ.ಕೃಷ್ಣ ಮತ್ತು ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
TV9 Web
| Edited By: |

Updated on:Jan 01, 2023 | 5:17 PM

Share

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ (Mysore-Bengaluru Expressway)ಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ (Nalwadi Krishnaraja Wadiyar) ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ (S.M Krishna) ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೂ ಪತ್ರ ಬರೆದು ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಸಂಸದ ಪ್ರತಾಪ್ ಸಿಂಹ (Pratap Simha) ಅವರು ಇದೇ ಹೆದ್ದಾರಿಗೆ ಕಾವೇರಿ ನದಿ (Kaveri River) ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದರು. 10ಲೇನ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಭಾರತಮಾಲಾ ಪರಿಯೋಜನಾ ಹಂತ-ಎಲ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಎಕ್ಸ್‌ಪ್ರೆಸ್‌ವೇಯ ಪ್ರಯೋಜನವು ಬಹು ಆಯಾಮಗಳಾಗಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಮುಂತಾದವು ಪ್ರಮುಖ ಪ್ರಯೋಜನಗಳಿವೆ ಎಂದು ಹೇಳಿದ್ದರು.

ಇದನ್ನೂ ಓದಿ: Bengaluru-Mysuru Expressway: ಕೇಂದ್ರ ಸಚಿವ ನಿತಿನ್ ಗಡ್ಕರಿಯಿಂದ ಜ. 5ರಂದು ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಪರಿಶೀಲನೆ

ಇಷ್ಟೇ ಅಲ್ಲದೇ ಉತ್ತರ ಪ್ರದೇಶದ ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ ಕಾವೇರಿ ಎಕ್ಸ್​​ಪ್ರೆಸ್ ವೇ ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದರು. ದಶಪಥ ಹೆದ್ದಾರಿಯಿಂದಾಗಿ ಮೈಸೂರು ಬೆಂಗಳೂರು ಮಧ್ಯದ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.

ಸಾವಿರಾರು ಕೋಟಿ ರೂ ವೆಚ್ಚದಲ್ಲಿ ಕೆಲವೇ ತಿಂಗಳುಗಳ ಕೆಳಗೆ ನಿರ್ಮಾಣವಾಗಿರುವ ಈ ಹೆದ್ದಾರಿ ಕೆಲವೇ ಗಂಟೆಗಳಲ್ಲಿ ಎರಡು ಪ್ರಮುಖ ನಗರಗಳನ್ನ ಬೆಸೆಯುತ್ತದೆ. ಆದರೆ ಇದೇ ಹೆದ್ದಾರಿ ಮೃತ್ಯುಕೂಪವಾಗಿಯೂ ಪ್ರಯಾಣಿಕರನ್ನು ಕಾಡುತ್ತಿದೆ. ಹೆದ್ದಾರಿ ಉದ್ಘಾಟನೆಗೂ ಮೊದಲೇ ಅಪಘಾತಗಳ ಸಂಖ್ಯೆ, ಸಾಯುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಂದರವಾದ ರಸ್ತೆಯಲ್ಲಿ ವಾಹನಗಳ ವೇಗದ ಮಿತಿಗೆ ಇದುವರೆಗೂ ಕಡಿವಾಣ ಬಿದ್ದಿಲ್ಲ. ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ, ಅಪಘಾತದಿಂದಾಗಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಇದು ವಾಹನ ಸವಾರರು, ಸ್ಥಳೀಯರ ಆತಂಕಕ್ಕೂ ಕೂಡ ಕಾರಣವಾಗಿದೆ. ಹೀಗಾಗಿ ಹೆದ್ದಾರಿಯಲ್ಲಿ ವಾಹನಗಳ ವೇಗದ ಮಿತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Sun, 1 January 23

Follow Us
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ