AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Bangalore Expressway: ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಮಾಜಿ ಸಿಎಂ ಎಸ್.ಎಂ.ಕೃಷ್ಣ

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಎರಡನೇ ಹೆಸರು ಮುನ್ನಲೆಗೆ ಬಂದಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

Mysore Bangalore Expressway: ಮೈಸೂರು-ಬೆಂಗಳೂರು ಹೆದ್ದಾರಿಗೆ ಒಡೆಯರ್ ಹೆಸರಿಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಮಾಜಿ ಸಿಎಂ ಎಸ್.ಎಂ.ಕೃಷ್ಣ
ಎಸ್.ಎಂ.ಕೃಷ್ಣ ಮತ್ತು ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
TV9 Web
| Updated By: Rakesh Nayak Manchi|

Updated on:Jan 01, 2023 | 5:17 PM

Share

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್ ವೇ (Mysore-Bengaluru Expressway)ಗೆ ಎರಡನೇ ಹೆಸರು ಮುನ್ನಲೆಗೆ ಬಂದಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ (Nalwadi Krishnaraja Wadiyar) ಅವರ ಹೆಸರು ಇಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ (S.M Krishna) ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೂ ಪತ್ರ ಬರೆದು ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಸಂಸದ ಪ್ರತಾಪ್ ಸಿಂಹ (Pratap Simha) ಅವರು ಇದೇ ಹೆದ್ದಾರಿಗೆ ಕಾವೇರಿ ನದಿ (Kaveri River) ಹೆಸರು ಇಡುವಂತೆ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದರು. 10ಲೇನ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಭಾರತಮಾಲಾ ಪರಿಯೋಜನಾ ಹಂತ-ಎಲ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಎಕ್ಸ್‌ಪ್ರೆಸ್‌ವೇಯ ಪ್ರಯೋಜನವು ಬಹು ಆಯಾಮಗಳಾಗಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಮುಂತಾದವು ಪ್ರಮುಖ ಪ್ರಯೋಜನಗಳಿವೆ ಎಂದು ಹೇಳಿದ್ದರು.

ಇದನ್ನೂ ಓದಿ: Bengaluru-Mysuru Expressway: ಕೇಂದ್ರ ಸಚಿವ ನಿತಿನ್ ಗಡ್ಕರಿಯಿಂದ ಜ. 5ರಂದು ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಪರಿಶೀಲನೆ

ಇಷ್ಟೇ ಅಲ್ಲದೇ ಉತ್ತರ ಪ್ರದೇಶದ ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ ಕಾವೇರಿ ಎಕ್ಸ್​​ಪ್ರೆಸ್ ವೇ ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದರು. ದಶಪಥ ಹೆದ್ದಾರಿಯಿಂದಾಗಿ ಮೈಸೂರು ಬೆಂಗಳೂರು ಮಧ್ಯದ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.

ಸಾವಿರಾರು ಕೋಟಿ ರೂ ವೆಚ್ಚದಲ್ಲಿ ಕೆಲವೇ ತಿಂಗಳುಗಳ ಕೆಳಗೆ ನಿರ್ಮಾಣವಾಗಿರುವ ಈ ಹೆದ್ದಾರಿ ಕೆಲವೇ ಗಂಟೆಗಳಲ್ಲಿ ಎರಡು ಪ್ರಮುಖ ನಗರಗಳನ್ನ ಬೆಸೆಯುತ್ತದೆ. ಆದರೆ ಇದೇ ಹೆದ್ದಾರಿ ಮೃತ್ಯುಕೂಪವಾಗಿಯೂ ಪ್ರಯಾಣಿಕರನ್ನು ಕಾಡುತ್ತಿದೆ. ಹೆದ್ದಾರಿ ಉದ್ಘಾಟನೆಗೂ ಮೊದಲೇ ಅಪಘಾತಗಳ ಸಂಖ್ಯೆ, ಸಾಯುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಂದರವಾದ ರಸ್ತೆಯಲ್ಲಿ ವಾಹನಗಳ ವೇಗದ ಮಿತಿಗೆ ಇದುವರೆಗೂ ಕಡಿವಾಣ ಬಿದ್ದಿಲ್ಲ. ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ, ಅಪಘಾತದಿಂದಾಗಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಇದು ವಾಹನ ಸವಾರರು, ಸ್ಥಳೀಯರ ಆತಂಕಕ್ಕೂ ಕೂಡ ಕಾರಣವಾಗಿದೆ. ಹೀಗಾಗಿ ಹೆದ್ದಾರಿಯಲ್ಲಿ ವಾಹನಗಳ ವೇಗದ ಮಿತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Sun, 1 January 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?