AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಕಾರು ಪಲ್ಟಿಯಾಗಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಎನ್ನುವವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಊಟಿ ಬಳಿ ನಡೆದಿದ್ದು, ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ
ಕಿರಣ್ ಹನುಮಂತ್​ ಮಾದಾರ್
|

Updated on:Jun 09, 2023 | 7:49 AM

Share

ಮೈಸೂರು: ಕಾರು ಪಲ್ಟಿಯಾಗಿ ಮೈಸೂರು ಬಿಜೆಪಿ(BJP) ಮುಖಂಡ ಸ್ವಾಮಿಗೌಡ ಎನ್ನುವವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಊಟಿ (Ooty) ಬಳಿ ನಡೆದಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸ್ವಾಮಿಗೌಡ ಅವರು ಸ್ನೇಹಿತರ ಕುಟುಂಬದವರ ಜೊತೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದುರಂತ ನಡೆದಿದ್ದು, ಸ್ವಾಮಿಗೌಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ನದಿಗೆ ಹಾರಿ ಆತ್ಮಹತ್ಯೆ

ಮೈಸೂರು: ಹುಣಸೂರು ನಗರದ ಬಳಿಯ ಲಕ್ಷ್ಮಣ ತೀರ್ಥ ನದಿಗೆ ಹಾರಿ ರಾಮಚಂದ್ರಪ್ಪ(65) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ವಿಶೇಷಚೇತನರಾಗಿದ್ದರು. ಹೌದು ರಾಮಚಂದ್ರಪ್ಪಗೆ ಮಾತು ಬರುತ್ತಿರಲಿಲ್ಲ. ಜೊತೆಗೆ ಇತ ಲೋಕೋಪಯೋಗಿ ಇಲಾಖೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಇತ 3 ತಿಂಗಳಿಂದ ಕಿಡ್ನಿ ಸಮಸ್ಯೆಯಿಂದ ಕೂಡ ಬಳಲುತ್ತಿದ್ದ. ಇದೀಗ ನದಿಗೆ ಹಾರಿ ಸಾವನ್ನಪ್ಪಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪರಿಹಾರ ಧನ ಪಡೆಯಲು ರೈಲು ಅಪಘಾತದಲ್ಲಿ ಪತಿ ಸಾವಿಗೀಡಾಗಿದ್ದಾನೆ ಎಂದು ಸುಳ್ಳು ಹೇಳಿದ ಮಹಿಳೆ; ಗಂಡನಿಂದಲೇ ದೂರು

ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವು

ಬಾಗಲಕೋಟೆ: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ  ಹೊಡೆದ ಪರಿಣಾಮ ವೃದ್ಧೆ ಸೇರಿದಂತೆ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹುನಗುಂದ ತಾಲೂಕಿನ ರಕ್ಕಸಗಿ ಬಳಿ ನಡೆದಿದೆ. ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದಾರ(39), ಶಾಂತವ್ವ ಕಟ್ಟಿಮನಿ(43), ಮಾಂತವ್ವ ಮುರಡಿ(75) ಮೃತರು. ಸ್ಥಳಕ್ಕೆ ಅಮೀನ್​ಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ, ಮೂವರು ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಬಳಿ ಲಾರಿಗೆ ಡಿಕ್ಕಿಯಾಗಿ ಌಂಬುಲೆನ್ಸ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಌಂಬುಲೆನ್ಸ್​ನಲ್ಲಿದ್ದ ಕನಕಮಣಿ(72), ಆಕಾಶ್(17), ಚಾಲಕ ಮೃತರು. ಮತ್ತಿಬ್ಬರಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಜರಾತ್​ನಿಂದ ತಮಿಳುನಾಡಿಗೆ ತೆರಳುತ್ತಿದ್ದ ಌಂಬುಲೆನ್ಸ್, ಅಹಮದಾಬಾದ್​ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:48 am, Fri, 9 June 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ