AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜನರಿಗೆ ಸಿಹಿ ಸುದ್ದಿ: ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿ ವಿಸ್ತರಣೆ

ಮೈಸೂರು ಜನತೆಗೆ ಮಹಾನಗರ ಪಾಲಿಕೆ ಸಿಹಿ ಸುದ್ದಿ ನೀಡಿದೆ. ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್​​ ಬಿಎಲ್​​​ ಭೈರಪ್ಪ ಮತ್ತು ಸಾರ್ವಜನಿಕರ ಒತ್ತಾಯದ ಮೇರೆಗೆ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನುನ್ನು ಒಂದು ತಿಂಗಳು ವಿಸ್ತರಣೆ ಮಾಡಿದೆ.

ಮೈಸೂರು ಜನರಿಗೆ ಸಿಹಿ ಸುದ್ದಿ: ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿ ವಿಸ್ತರಣೆ
ಮೈಸೂರು ಮಹಾನಗರ ಪಾಲಿಕೆ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Jun 11, 2024 | 11:08 AM

Share

ಮೈಸೂರು, ಜೂನ್​ 11: ಮೈಸೂರು (Mysore) ನಗರ ಜನರಿಗೆ ಮಹಾನಗರ ಪಾಲಿಕೆ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆಯಲ್ಲಿ ಶೇ5 ರಷ್ಟು ರಿಯಾಯಿತಿ ನೀಡಿದ್ದು, ಪಾವತಿ ಅವಧಿಯನ್ನು 2024ರ ಜುಲೈ ವರೆಗೆ ವಿಸ್ತರಣೆ ಮಾಡಿದೆ. ಮೈಸೂರು ಮಹಾನಗರ ಪಾಲಿಕೆ (Mysore City Corporation) ಆಸ್ತಿ ತೆರಿಗೆ ಪಾವತಿಗೆ ಏ.30 ಗಡುವು ನೀಡಿತ್ತು. ಆದರೆ, ತಾಂತ್ರಿಕ ಕಾರಣ ಮತ್ತು ಲೋಕಸಭೆ ಚುನಾವಣೆ ಹಿನ್ನೆಲೆ ಅಧಿಕಾರಿಗಳ ಅನುಪಸ್ತಿಯಲ್ಲಿ ತೆರಿಗೆ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಆಸ್ತಿ ತೆರಿಗೆ ಪಾವತಿಯನ್ನು ಒಂದು ತಿಂಗಳು ವಿಸ್ತರಿಸಬೇಕು ಎಂದು ಮಾಜಿ ಮೇಯತ್​ ಬಿಎಲ್​​​ ಭೈರಪ್ಪ ಪಾಲಿಕೆಗೆ ಮನವಿ ಮಾಡಿದ್ದರು.

ಮಹಾನಗರ ಪಾಲಿಕೆ ಏಪ್ರಿಲ್​ 1 ರಿಂದ 30ರ ವರೆಗೆ ಶೇ5 ರಷ್ಟು ಆಸ್ತಿ ತೆರಿಗೆ ರಿಯಾಯಿತಿಯನ್ನು ನೀಡಿತ್ತು. ಆದರೆ, ಆನ್​ಲೈನ್​ನಲ್ಲಿ ಆಸ್ತಿ ತೆರಿಗೆ ಪಾವತಿಸಲು ತಾಂತ್ರಿಕ ದೋಷ ಕಂಡುಬಂತು. ಅಲ್ಲದೆ ಸಾರ್ವಜನಿಕ ರಜಾ, ಮತ್ತು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನರು ಈ ವಿನಾಯಿತಿಯನ್ನು ಸದುಪಯೋಗ ಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ರಿಯಾಯಿತಿ ಅವದಿಯನ್ನು ಇನ್ನೂ ಒಂದು ತಿಂಗಳು ಅವದಿ ವಿಸ್ತರಿಸುವಂತೆ ಸಾರ್ವಜನಿಕರು ಮತ್ತು ಮಾಜಿ ಮೇಯರ್​ ಬಿಎಲ್​ ಭೈರಪ್ಪ ಒತ್ತಾಯಿಸಿದ್ದರು.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿದಾರರಿಗೆ ಮತ್ತೆ ಬಿಸಿ ಮುಟ್ಟಿಸಲು ಪ್ಲಾನ್; ಜೂನ್ 7ರ ಬಳಿಕ ಬಾಕಿ ವಸೂಲಿಗೆ BBMP ಸಜ್ಜು

ಮೈಸೂರು ಮಹಾನಗರ ಪಾಲಿಕೆ ಮೇ ಒಂದೇ ತಿಂಗಳಲ್ಲಿ ಬರೋಬ್ಬರಿ 92.24 ಕೋಟಿ ರೂ. ತೆರಿಗೆ ಸಂಗ್ರಹಿಸಿತ್ತು. 2024-25ನೇ ಸಾಲಿನಲ್ಲಿ 220 ಕೋಟಿ ರೂ. ಸಂಗ್ರಹ ಗುರಿ ಹೊಂದಿದ್ದ ಪಾಲಿಕೆಯು, ಕೇವಲ ಒಂದು ತಿಂಗಳ ಒಳಗಾಗಿ ಇಷ್ಟು ಪ್ರಮಾಣದ ತೆರಿಗೆ ಸಂಗ್ರಹಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚುವರಿಯಾಗಿ 7.81 ಕೋಟಿ ರೂ. ಸಂಗ್ರಹವಾಗಿದೆ. ಈ ತೆರಿಗೆ ರಿಯಾತಿ ಗ್ರಾಹಕರಿಗೂ ಅನುಕಲವಾಗಿದ್ದು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ