ಮೈಸೂರು ಜನರಿಗೆ ಸಿಹಿ ಸುದ್ದಿ: ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿ ವಿಸ್ತರಣೆ

ಮೈಸೂರು ಜನತೆಗೆ ಮಹಾನಗರ ಪಾಲಿಕೆ ಸಿಹಿ ಸುದ್ದಿ ನೀಡಿದೆ. ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್​​ ಬಿಎಲ್​​​ ಭೈರಪ್ಪ ಮತ್ತು ಸಾರ್ವಜನಿಕರ ಒತ್ತಾಯದ ಮೇರೆಗೆ ಮಹಾನಗರ ಪಾಲಿಕೆ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನುನ್ನು ಒಂದು ತಿಂಗಳು ವಿಸ್ತರಣೆ ಮಾಡಿದೆ.

ಮೈಸೂರು ಜನರಿಗೆ ಸಿಹಿ ಸುದ್ದಿ: ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿ ವಿಸ್ತರಣೆ
ಮೈಸೂರು ಮಹಾನಗರ ಪಾಲಿಕೆ
Follow us
| Updated By: ವಿವೇಕ ಬಿರಾದಾರ

Updated on: Jun 11, 2024 | 11:08 AM

ಮೈಸೂರು, ಜೂನ್​ 11: ಮೈಸೂರು (Mysore) ನಗರ ಜನರಿಗೆ ಮಹಾನಗರ ಪಾಲಿಕೆ ಸಿಹಿ ಸುದ್ದಿ ನೀಡಿದೆ. ಆಸ್ತಿ ತೆರಿಗೆಯಲ್ಲಿ ಶೇ5 ರಷ್ಟು ರಿಯಾಯಿತಿ ನೀಡಿದ್ದು, ಪಾವತಿ ಅವಧಿಯನ್ನು 2024ರ ಜುಲೈ ವರೆಗೆ ವಿಸ್ತರಣೆ ಮಾಡಿದೆ. ಮೈಸೂರು ಮಹಾನಗರ ಪಾಲಿಕೆ (Mysore City Corporation) ಆಸ್ತಿ ತೆರಿಗೆ ಪಾವತಿಗೆ ಏ.30 ಗಡುವು ನೀಡಿತ್ತು. ಆದರೆ, ತಾಂತ್ರಿಕ ಕಾರಣ ಮತ್ತು ಲೋಕಸಭೆ ಚುನಾವಣೆ ಹಿನ್ನೆಲೆ ಅಧಿಕಾರಿಗಳ ಅನುಪಸ್ತಿಯಲ್ಲಿ ತೆರಿಗೆ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಆಸ್ತಿ ತೆರಿಗೆ ಪಾವತಿಯನ್ನು ಒಂದು ತಿಂಗಳು ವಿಸ್ತರಿಸಬೇಕು ಎಂದು ಮಾಜಿ ಮೇಯತ್​ ಬಿಎಲ್​​​ ಭೈರಪ್ಪ ಪಾಲಿಕೆಗೆ ಮನವಿ ಮಾಡಿದ್ದರು.

ಮಹಾನಗರ ಪಾಲಿಕೆ ಏಪ್ರಿಲ್​ 1 ರಿಂದ 30ರ ವರೆಗೆ ಶೇ5 ರಷ್ಟು ಆಸ್ತಿ ತೆರಿಗೆ ರಿಯಾಯಿತಿಯನ್ನು ನೀಡಿತ್ತು. ಆದರೆ, ಆನ್​ಲೈನ್​ನಲ್ಲಿ ಆಸ್ತಿ ತೆರಿಗೆ ಪಾವತಿಸಲು ತಾಂತ್ರಿಕ ದೋಷ ಕಂಡುಬಂತು. ಅಲ್ಲದೆ ಸಾರ್ವಜನಿಕ ರಜಾ, ಮತ್ತು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನರು ಈ ವಿನಾಯಿತಿಯನ್ನು ಸದುಪಯೋಗ ಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ರಿಯಾಯಿತಿ ಅವದಿಯನ್ನು ಇನ್ನೂ ಒಂದು ತಿಂಗಳು ಅವದಿ ವಿಸ್ತರಿಸುವಂತೆ ಸಾರ್ವಜನಿಕರು ಮತ್ತು ಮಾಜಿ ಮೇಯರ್​ ಬಿಎಲ್​ ಭೈರಪ್ಪ ಒತ್ತಾಯಿಸಿದ್ದರು.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿದಾರರಿಗೆ ಮತ್ತೆ ಬಿಸಿ ಮುಟ್ಟಿಸಲು ಪ್ಲಾನ್; ಜೂನ್ 7ರ ಬಳಿಕ ಬಾಕಿ ವಸೂಲಿಗೆ BBMP ಸಜ್ಜು

ಮೈಸೂರು ಮಹಾನಗರ ಪಾಲಿಕೆ ಮೇ ಒಂದೇ ತಿಂಗಳಲ್ಲಿ ಬರೋಬ್ಬರಿ 92.24 ಕೋಟಿ ರೂ. ತೆರಿಗೆ ಸಂಗ್ರಹಿಸಿತ್ತು. 2024-25ನೇ ಸಾಲಿನಲ್ಲಿ 220 ಕೋಟಿ ರೂ. ಸಂಗ್ರಹ ಗುರಿ ಹೊಂದಿದ್ದ ಪಾಲಿಕೆಯು, ಕೇವಲ ಒಂದು ತಿಂಗಳ ಒಳಗಾಗಿ ಇಷ್ಟು ಪ್ರಮಾಣದ ತೆರಿಗೆ ಸಂಗ್ರಹಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚುವರಿಯಾಗಿ 7.81 ಕೋಟಿ ರೂ. ಸಂಗ್ರಹವಾಗಿದೆ. ಈ ತೆರಿಗೆ ರಿಯಾತಿ ಗ್ರಾಹಕರಿಗೂ ಅನುಕಲವಾಗಿದ್ದು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ