AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ: ದಲಿತ ಸಮಿತಿ, ಭಕ್ತರ ನಡುವೆ ಮಾತಿನ ಚಕಮಕಿ

ನಂಜುಂಡೇಶ್ವರ, ಪಾರ್ವತಿ ದೇವರ ಉತ್ಸವ ಮೂರ್ತಿ ಹೊತ್ತವರು ಮಹಿಷಾಸುರ ರಂಗೋಲಿ ತುಳಿದು ಅಳಿಸಿ ಹಾಕುವುದು ವಾಡಿಕೆ. ನಾವು ಮಹಿಷಾಸುರನನ್ನು ರಾಜ ಎಂದು ಪೂಜಿಸುತ್ತೇವೆ. ಇದು ನಮ್ಮ ಭಾವನೆಗೆ ದಕ್ಕೆಯಾಗುತ್ತೆ ಎಂದು ಮುಖಂಡರು ಪಟ್ಟು ಹಿಡಿದಿದ್ದಾರೆ. ತಲತಲಾಂತರದಿಂದ ಈ ಪದ್ದತಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಭಕ್ತರು ಹೇಳಿದ್ದಾರೆ. ಸದ್ಯ ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದೆ. 

ಮೈಸೂರಿನಲ್ಲಿ ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ: ದಲಿತ ಸಮಿತಿ, ಭಕ್ತರ ನಡುವೆ ಮಾತಿನ ಚಕಮಕಿ
ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ
ರಾಮ್​, ಮೈಸೂರು
| Edited By: |

Updated on:Dec 26, 2023 | 9:36 PM

Share

ಮೈಸೂರು, ಡಿಸೆಂಬರ್​ 26: ಮಹಿಷಾಸುರ (Mahishasura) ವಿಚಾರವಾಗಿ ಮತ್ತೆ ಸಂಘರ್ಷ ಶುರುವಾಗಿದೆ. ನಂಜನಗೂಡು ದೇವಾಲಯದ ಬಳಿ ದಲಿತ ಸಂಘರ್ಷ ಸಮಿತಿ ಹಾಗೂ ನಂಜುಂಡೇಶ್ವರ ಭಕ್ತರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ನಂಜುಂಡೇಶ್ವರ, ಪಾರ್ವತಿ ದೇವರ ಉತ್ಸವ ಮೂರ್ತಿ ಹೊತ್ತವರು ಮಹಿಷಾಸುರ ರಂಗೋಲಿ ತುಳಿದು ಅಳಿಸಿ ಹಾಕುವುದು ವಾಡಿಕೆ. ನಾವು ಮಹಿಷಾಸುರನನ್ನು ರಾಜ ಎಂದು ಪೂಜಿಸುತ್ತೇವೆ. ಇದು ನಮ್ಮ ಭಾವನೆಗೆ ದಕ್ಕೆಯಾಗುತ್ತೆ ಎಂದು ಮುಖಂಡರು ಪಟ್ಟು ಹಿಡಿದಿದ್ದಾರೆ.

ತಲತಲಾಂತರದಿಂದ ಈ ಪದ್ದತಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಭಕ್ತರು ಹೇಳಿದ್ದಾರೆ. ಸದ್ಯ ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದೆ.

ಇದನ್ನೂ ಓದಿ: ಅ.13 ರಂದು ಮಹಿಷ ದಸರಾ, ಆಹ್ವಾನ ಪತ್ರಿಕೆ ಬಿಡುಗಡೆ, ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಹೆಸರು

ಪ್ರತಿವರ್ಷ ನಂಜುಂಡೇಶ್ವರ ದೇಗುಲ ಬಳಿ ರಂಗೋಲಿ ಬಿಡಿಸಲಾಗುತ್ತದೆ. ಬಿಡಿಸಿದ ರಂಗೋಲಿಯನ್ನು ಕಾಲಿನಲ್ಲಿ ತುಳಿದು ಅಳಿಸಲಾಗುತ್ತದೆ. ಈ ದಿನವನ್ನು ಅಂದಕಾಸುರ ಸಂಹಾರ ದಿನ ಎಂದು ಆಚರಿಸಲಾಗುತ್ತದೆ. ನಂತರ ತೇರಿನ ಬೀದಿಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಗುತ್ತೆ. ಆದರೆ ಇದನ್ನು ಮಾಡಬಾರದೆಂದು ದಲಿತ ಮುಖಂಡರಿಂದ ವಿರೋಧ ವ್ಯಕ್ತಪಡಿಸಿದ್ದಾರೆ.

ಮಹಿಷಾ ದಸರಾ ಆಚರಣೆ ವಿಚಾರ ಸಾಕಷ್ಟು ಜಟಾಪಟಿಗೆ ಕಾರಣವಾಗಿತ್ತು. ಇದನ್ನ ವಿರೋಧಿಸಿ ಬಿಜೆಪಿ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿತ್ತು. ಆದರೆ ಇಷ್ಟೆಲ್ಲ ವಿವಾದದ ಬೆನ್ನಲ್ಲೆ ಕೆಲವು ಷರತ್ತು ಬದ್ದ ಅನುಮತಿಯಿಂದ ಮಹೋತ್ಸವನ್ನ ನಗರದ ಪುರಭವನದ ಆವರಣದಲ್ಲಿ ಆಚರಣೆ ಮಾಡಲಾಗಿತ್ತು. ಮೊದಲಿಗೆ ನಿರೀಕ್ಷಿತ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಜನರು ಬಂದಿದ್ದು ನೋಡಿ ಆಯೋಜಕರು ಖುಷಿಯಾಗಿದ್ದರು.

ಇದನ್ನೂ ಓದಿ: ಅ.15ಕ್ಕೆ ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ, ದ್ರಾವಿಡ ದೊರೆ ಮಹಿಷ ಬಗ್ಗೆ ಜಾಗೃತಿ ಕಾರ್ಯಕ್ರಮ

ನಂತರ ಪ್ರೋ‌ ಭಗವಾನ್ ಮಾತುಗಳು ಮತ್ತೆ ವಿವಾದದ ಕಿಡಿ ಹೊತ್ತಿಸಿತ್ತು. ಪ್ರೋ. ಭಗವಾನ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಕೊನೆಯಲ್ಲಿ ಮಾಡಿದ ಭಾಷಣ ವಿವಾದ ಎಬ್ಬಿಸಿತ್ತು. ಒಕ್ಕಲಿಗರು ಸಂಸ್ಕೃತಿ ಹೀನಾರು, ಈ ಮಾತನ್ನು ನಾನು ಹೇಳಿಲ್ಲ. ಈ ಮಾತನ್ನು ಕುವೆಂಪುರು ಹೇಳಿದ್ದು. ಈ ಮಾತನ್ನು ನಾನು ಹೇಳಿದ್ರೆ ಹೊಡೆಯೋಕೆ ಬರ್ತಿದ್ರು. ನಿಜ ಹೇಳಿದವರನ್ನು ಯಾರು ಬಿಡಲ್ಲ, ಆದರೆ ನಿಜ ಹೇಳಿಯೇ ಸಾಯಬೇಕು ಅಂತ ಹೇಳಿ ವಿವಾದ ಕಿಡಿ ಹೊತ್ತಿಸಿದ್ದಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Tue, 26 December 23

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ