AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ: ದಲಿತ ಸಮಿತಿ, ಭಕ್ತರ ನಡುವೆ ಮಾತಿನ ಚಕಮಕಿ

ನಂಜುಂಡೇಶ್ವರ, ಪಾರ್ವತಿ ದೇವರ ಉತ್ಸವ ಮೂರ್ತಿ ಹೊತ್ತವರು ಮಹಿಷಾಸುರ ರಂಗೋಲಿ ತುಳಿದು ಅಳಿಸಿ ಹಾಕುವುದು ವಾಡಿಕೆ. ನಾವು ಮಹಿಷಾಸುರನನ್ನು ರಾಜ ಎಂದು ಪೂಜಿಸುತ್ತೇವೆ. ಇದು ನಮ್ಮ ಭಾವನೆಗೆ ದಕ್ಕೆಯಾಗುತ್ತೆ ಎಂದು ಮುಖಂಡರು ಪಟ್ಟು ಹಿಡಿದಿದ್ದಾರೆ. ತಲತಲಾಂತರದಿಂದ ಈ ಪದ್ದತಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಭಕ್ತರು ಹೇಳಿದ್ದಾರೆ. ಸದ್ಯ ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದೆ. 

ಮೈಸೂರಿನಲ್ಲಿ ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ: ದಲಿತ ಸಮಿತಿ, ಭಕ್ತರ ನಡುವೆ ಮಾತಿನ ಚಕಮಕಿ
ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ
ರಾಮ್​, ಮೈಸೂರು
| Edited By: |

Updated on:Dec 26, 2023 | 9:36 PM

Share

ಮೈಸೂರು, ಡಿಸೆಂಬರ್​ 26: ಮಹಿಷಾಸುರ (Mahishasura) ವಿಚಾರವಾಗಿ ಮತ್ತೆ ಸಂಘರ್ಷ ಶುರುವಾಗಿದೆ. ನಂಜನಗೂಡು ದೇವಾಲಯದ ಬಳಿ ದಲಿತ ಸಂಘರ್ಷ ಸಮಿತಿ ಹಾಗೂ ನಂಜುಂಡೇಶ್ವರ ಭಕ್ತರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ನಂಜುಂಡೇಶ್ವರ, ಪಾರ್ವತಿ ದೇವರ ಉತ್ಸವ ಮೂರ್ತಿ ಹೊತ್ತವರು ಮಹಿಷಾಸುರ ರಂಗೋಲಿ ತುಳಿದು ಅಳಿಸಿ ಹಾಕುವುದು ವಾಡಿಕೆ. ನಾವು ಮಹಿಷಾಸುರನನ್ನು ರಾಜ ಎಂದು ಪೂಜಿಸುತ್ತೇವೆ. ಇದು ನಮ್ಮ ಭಾವನೆಗೆ ದಕ್ಕೆಯಾಗುತ್ತೆ ಎಂದು ಮುಖಂಡರು ಪಟ್ಟು ಹಿಡಿದಿದ್ದಾರೆ.

ತಲತಲಾಂತರದಿಂದ ಈ ಪದ್ದತಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಭಕ್ತರು ಹೇಳಿದ್ದಾರೆ. ಸದ್ಯ ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದೆ.

ಇದನ್ನೂ ಓದಿ: ಅ.13 ರಂದು ಮಹಿಷ ದಸರಾ, ಆಹ್ವಾನ ಪತ್ರಿಕೆ ಬಿಡುಗಡೆ, ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಹೆಸರು

ಪ್ರತಿವರ್ಷ ನಂಜುಂಡೇಶ್ವರ ದೇಗುಲ ಬಳಿ ರಂಗೋಲಿ ಬಿಡಿಸಲಾಗುತ್ತದೆ. ಬಿಡಿಸಿದ ರಂಗೋಲಿಯನ್ನು ಕಾಲಿನಲ್ಲಿ ತುಳಿದು ಅಳಿಸಲಾಗುತ್ತದೆ. ಈ ದಿನವನ್ನು ಅಂದಕಾಸುರ ಸಂಹಾರ ದಿನ ಎಂದು ಆಚರಿಸಲಾಗುತ್ತದೆ. ನಂತರ ತೇರಿನ ಬೀದಿಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಗುತ್ತೆ. ಆದರೆ ಇದನ್ನು ಮಾಡಬಾರದೆಂದು ದಲಿತ ಮುಖಂಡರಿಂದ ವಿರೋಧ ವ್ಯಕ್ತಪಡಿಸಿದ್ದಾರೆ.

ಮಹಿಷಾ ದಸರಾ ಆಚರಣೆ ವಿಚಾರ ಸಾಕಷ್ಟು ಜಟಾಪಟಿಗೆ ಕಾರಣವಾಗಿತ್ತು. ಇದನ್ನ ವಿರೋಧಿಸಿ ಬಿಜೆಪಿ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿತ್ತು. ಆದರೆ ಇಷ್ಟೆಲ್ಲ ವಿವಾದದ ಬೆನ್ನಲ್ಲೆ ಕೆಲವು ಷರತ್ತು ಬದ್ದ ಅನುಮತಿಯಿಂದ ಮಹೋತ್ಸವನ್ನ ನಗರದ ಪುರಭವನದ ಆವರಣದಲ್ಲಿ ಆಚರಣೆ ಮಾಡಲಾಗಿತ್ತು. ಮೊದಲಿಗೆ ನಿರೀಕ್ಷಿತ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಜನರು ಬಂದಿದ್ದು ನೋಡಿ ಆಯೋಜಕರು ಖುಷಿಯಾಗಿದ್ದರು.

ಇದನ್ನೂ ಓದಿ: ಅ.15ಕ್ಕೆ ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ, ದ್ರಾವಿಡ ದೊರೆ ಮಹಿಷ ಬಗ್ಗೆ ಜಾಗೃತಿ ಕಾರ್ಯಕ್ರಮ

ನಂತರ ಪ್ರೋ‌ ಭಗವಾನ್ ಮಾತುಗಳು ಮತ್ತೆ ವಿವಾದದ ಕಿಡಿ ಹೊತ್ತಿಸಿತ್ತು. ಪ್ರೋ. ಭಗವಾನ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಕೊನೆಯಲ್ಲಿ ಮಾಡಿದ ಭಾಷಣ ವಿವಾದ ಎಬ್ಬಿಸಿತ್ತು. ಒಕ್ಕಲಿಗರು ಸಂಸ್ಕೃತಿ ಹೀನಾರು, ಈ ಮಾತನ್ನು ನಾನು ಹೇಳಿಲ್ಲ. ಈ ಮಾತನ್ನು ಕುವೆಂಪುರು ಹೇಳಿದ್ದು. ಈ ಮಾತನ್ನು ನಾನು ಹೇಳಿದ್ರೆ ಹೊಡೆಯೋಕೆ ಬರ್ತಿದ್ರು. ನಿಜ ಹೇಳಿದವರನ್ನು ಯಾರು ಬಿಡಲ್ಲ, ಆದರೆ ನಿಜ ಹೇಳಿಯೇ ಸಾಯಬೇಕು ಅಂತ ಹೇಳಿ ವಿವಾದ ಕಿಡಿ ಹೊತ್ತಿಸಿದ್ದಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Tue, 26 December 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?