AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದಕಾಸುರ ಸಂಹಾರ: ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿರುವ ಆರೋಪ

ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಮಂಗಳವಾರ (ಡಿ.26) ಅಂಧಕಾಸುರ ಸಂಹಾರ ದಿನ ಆಚರಣೆ ನಡೆದಿತ್ತು. ಇದಕ್ಕೆ ದಲಿತ ಹೋರಾಟ ಸಮಿತಿ ವಿರೋಧ ವ್ಯಕ್ತಪಡಿಸಿ, ನಂಜುಂಡೇಶ್ವರ ಉತ್ಸವ ಮೂರ್ತಿ ಮೇಲೆ ನೀರು ಎರಿಚಿತ್ತು. ದಲಿತ ಹೋರಾಟ ಸಮಿತಿ ಸದಸ್ಯರು ಎಂಜಲು ನೀರು ಎರಚಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ಅಂದಕಾಸುರ ಸಂಹಾರ: ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿರುವ ಆರೋಪ
ಅಂದಕಾಸುರ ಸಂಹಾರ ಆಚರಣೆ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Dec 27, 2023 | 10:28 AM

ಮೈಸೂರು, ಡಿಸೆಂಬರ್​ 27: ಅಂದಕಾಸುರ ಸಂಹಾರಕ್ಕೆ (Andhakasura Samhara) ವಿರೋಧ ವ್ಯಕ್ತಪಡಿಸಿದ ದಲಿತ ಸಂಘರ್ಷ ಸಮಿತಿ ಸದಸ್ಯರು ನಂಜುಂಡೇಶ್ವರ (Nanjundeshwara) ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ಸಹ ಅಂದಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ನಿನ್ನೆ (ಡಿ.26) ರಂದು ನಂಜನಗೂಡಿನ (Nanjangud) ನಂಜುಂಡೇಶ್ವರ ದೇವಸ್ಥಾನದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂದಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಲಾಗಿತ್ತು.

ಬಳಿಕ ನಂಜುಂಡೇಶ್ವರ, ಪಾರ್ವತಿ ದೇವರ ಉತ್ಸವ ಮೂರ್ತಿ ಹೊತ್ತವರು ಆ ಮಂಟಪದ ಬಳಿ ಬಂದು ಅಂದಕಾಸುರನ ರಂಗೋಲಿಯನ್ನು ಕಾಲಿನಿಂದ ಅಳಿಸಿ ಹಾಕುತ್ತಾರೆ. ಈ ಮೂಲಕ ಅಂದಕಾಸುರನ ಸಂಹಾರ ದಿನ ಆಚರಿಸಲಾಗುತ್ತದೆ. ಈ ಆಚರಣೆಯನ್ನು ಮೈಸೂರು ಜಿಲ್ಲೆಯ ವಿವಿಧ ಊರುಗಳಲ್ಲಿ ಆಚರಿಸಲಾಗುತ್ತದೆ. ಮಂಗಳವಾರ ನಡೆಯುತ್ತಿದ್ದ ಈ ಆಚರಣೆಗೆ ದಲಿತ ಹೋರಾಟ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. “ನಾವು ಮಹಿಷಾಸುರನನ್ನು ರಾಜ ಎಂದು ಪೂಜಿಸುತ್ತೇವೆ. ಇದು ನಮ್ಮ ಭಾವನೆಗೆ ದಕ್ಕೆಯಾಗುತ್ತೆ” ಎಂದು ದಲಿತ ಸಮಿತಿ ಮುಖಂಡರು ಪಟ್ಟು ಹಿಡಿದಿದ್ದರು.

ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ: ದಲಿತ ಸಮಿತಿ, ಭಕ್ತರ ನಡುವೆ ಮಾತಿನ ಚಕಮಕಿ

“ತಲತಲಾಂತರದಿಂದ ಈ ಪದ್ದತಿ ಆಚರಿಸಿಕೊಂಡು ಬರಲಾಗುತ್ತಿದೆ” ಎಂದು ಭಕ್ತರು ಹೇಳಿದ್ದರು. ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಈ ವೇಳೆ ಉತ್ಸವ ಮೂರ್ತಿ ಮೇಲೆ‌ ಕಿಡಿಗೇಡಿಗಳು ನೀರು ಎರಚಿದ್ದರು.

ನೀರು ಎರಚಿದವರ ವಿರುದ್ಧ ದೂರು ದಾಖಲು

ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿ ಪಡಿಸಿದ್ದಾರೆ. ಕುಡಿಯುವ ನೀರಿನ ಬಾಟಲಿ ಮೂಲಕ ಉತ್ಸವ ಮೂರ್ತಿಗೆ ನೀರು ಎರಚಿ ಅಪಮಾನ ಮಾಡಿದ್ದಾರೆ. ನಾವು ಯಾವುದೇ ವ್ಯಕ್ತಿಯನ್ನು ಅಪಮಾನ ಮಾಡುವ ಕೆಲಸ ಮಾಡಿಲ್ಲ ಎಂದು ದಲಿತ ಸಮಿತಿ ಸದಸ್ಯರಿಗೆ ತಿಳಿಸಿದೇವು. ಆದರೂ ಕೆಲ ಜನರು ಉತ್ಸವ ಮೂರ್ತಿಯ ಮೇಲೆ ಕುಡಿಯುವ ನೀರಿನ ಬಾಟಲಿನಿಂದ ನೀರು ಎರಚ್ಚಿದ್ದಾರೆ‌. ಇದು ಭಕ್ತಾದಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್​​ ಅವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆಗೆ ಸಂಬಂಧ ಬಾಲರಾಜು, ನಾರಾಯಣ, ಅಭಿ ನಾಗಭೂಷಣ, ನಟೇಶ್, ಅಭಿ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:14 am, Wed, 27 December 23

ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ