AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದಕಾಸುರ ಸಂಹಾರ: ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿರುವ ಆರೋಪ

ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಮಂಗಳವಾರ (ಡಿ.26) ಅಂಧಕಾಸುರ ಸಂಹಾರ ದಿನ ಆಚರಣೆ ನಡೆದಿತ್ತು. ಇದಕ್ಕೆ ದಲಿತ ಹೋರಾಟ ಸಮಿತಿ ವಿರೋಧ ವ್ಯಕ್ತಪಡಿಸಿ, ನಂಜುಂಡೇಶ್ವರ ಉತ್ಸವ ಮೂರ್ತಿ ಮೇಲೆ ನೀರು ಎರಿಚಿತ್ತು. ದಲಿತ ಹೋರಾಟ ಸಮಿತಿ ಸದಸ್ಯರು ಎಂಜಲು ನೀರು ಎರಚಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

ಅಂದಕಾಸುರ ಸಂಹಾರ: ನಂಜುಂಡೇಶ್ವರ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿರುವ ಆರೋಪ
ಅಂದಕಾಸುರ ಸಂಹಾರ ಆಚರಣೆ
ರಾಮ್​, ಮೈಸೂರು
| Edited By: |

Updated on:Dec 27, 2023 | 10:28 AM

Share

ಮೈಸೂರು, ಡಿಸೆಂಬರ್​ 27: ಅಂದಕಾಸುರ ಸಂಹಾರಕ್ಕೆ (Andhakasura Samhara) ವಿರೋಧ ವ್ಯಕ್ತಪಡಿಸಿದ ದಲಿತ ಸಂಘರ್ಷ ಸಮಿತಿ ಸದಸ್ಯರು ನಂಜುಂಡೇಶ್ವರ (Nanjundeshwara) ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ಸಹ ಅಂದಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ನಿನ್ನೆ (ಡಿ.26) ರಂದು ನಂಜನಗೂಡಿನ (Nanjangud) ನಂಜುಂಡೇಶ್ವರ ದೇವಸ್ಥಾನದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂದಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಲಾಗಿತ್ತು.

ಬಳಿಕ ನಂಜುಂಡೇಶ್ವರ, ಪಾರ್ವತಿ ದೇವರ ಉತ್ಸವ ಮೂರ್ತಿ ಹೊತ್ತವರು ಆ ಮಂಟಪದ ಬಳಿ ಬಂದು ಅಂದಕಾಸುರನ ರಂಗೋಲಿಯನ್ನು ಕಾಲಿನಿಂದ ಅಳಿಸಿ ಹಾಕುತ್ತಾರೆ. ಈ ಮೂಲಕ ಅಂದಕಾಸುರನ ಸಂಹಾರ ದಿನ ಆಚರಿಸಲಾಗುತ್ತದೆ. ಈ ಆಚರಣೆಯನ್ನು ಮೈಸೂರು ಜಿಲ್ಲೆಯ ವಿವಿಧ ಊರುಗಳಲ್ಲಿ ಆಚರಿಸಲಾಗುತ್ತದೆ. ಮಂಗಳವಾರ ನಡೆಯುತ್ತಿದ್ದ ಈ ಆಚರಣೆಗೆ ದಲಿತ ಹೋರಾಟ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. “ನಾವು ಮಹಿಷಾಸುರನನ್ನು ರಾಜ ಎಂದು ಪೂಜಿಸುತ್ತೇವೆ. ಇದು ನಮ್ಮ ಭಾವನೆಗೆ ದಕ್ಕೆಯಾಗುತ್ತೆ” ಎಂದು ದಲಿತ ಸಮಿತಿ ಮುಖಂಡರು ಪಟ್ಟು ಹಿಡಿದಿದ್ದರು.

ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷಾಸುರ ವಿಚಾರವಾಗಿ ಮತ್ತೆ ಸಂಘರ್ಷ: ದಲಿತ ಸಮಿತಿ, ಭಕ್ತರ ನಡುವೆ ಮಾತಿನ ಚಕಮಕಿ

“ತಲತಲಾಂತರದಿಂದ ಈ ಪದ್ದತಿ ಆಚರಿಸಿಕೊಂಡು ಬರಲಾಗುತ್ತಿದೆ” ಎಂದು ಭಕ್ತರು ಹೇಳಿದ್ದರು. ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಈ ವೇಳೆ ಉತ್ಸವ ಮೂರ್ತಿ ಮೇಲೆ‌ ಕಿಡಿಗೇಡಿಗಳು ನೀರು ಎರಚಿದ್ದರು.

ನೀರು ಎರಚಿದವರ ವಿರುದ್ಧ ದೂರು ದಾಖಲು

ನಮ್ಮ ಧಾರ್ಮಿಕ ಆಚರಣೆಗೆ ಅಡ್ಡಿ ಪಡಿಸಿದ್ದಾರೆ. ಕುಡಿಯುವ ನೀರಿನ ಬಾಟಲಿ ಮೂಲಕ ಉತ್ಸವ ಮೂರ್ತಿಗೆ ನೀರು ಎರಚಿ ಅಪಮಾನ ಮಾಡಿದ್ದಾರೆ. ನಾವು ಯಾವುದೇ ವ್ಯಕ್ತಿಯನ್ನು ಅಪಮಾನ ಮಾಡುವ ಕೆಲಸ ಮಾಡಿಲ್ಲ ಎಂದು ದಲಿತ ಸಮಿತಿ ಸದಸ್ಯರಿಗೆ ತಿಳಿಸಿದೇವು. ಆದರೂ ಕೆಲ ಜನರು ಉತ್ಸವ ಮೂರ್ತಿಯ ಮೇಲೆ ಕುಡಿಯುವ ನೀರಿನ ಬಾಟಲಿನಿಂದ ನೀರು ಎರಚ್ಚಿದ್ದಾರೆ‌. ಇದು ಭಕ್ತಾದಿಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್​​ ಅವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆಗೆ ಸಂಬಂಧ ಬಾಲರಾಜು, ನಾರಾಯಣ, ಅಭಿ ನಾಗಭೂಷಣ, ನಟೇಶ್, ಅಭಿ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:14 am, Wed, 27 December 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್