AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್

Mysuru Court Notice to Maneka Gandhi | ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್
ಮಾಜಿ ಸಚಿವೆ ಮನೇಕಾ ಗಾಂಧಿ
ಆಯೇಷಾ ಬಾನು
| Edited By: |

Updated on: Feb 09, 2021 | 3:32 PM

Share

ಮೈಸೂರು: ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮನೇಕಾ ಅವರನ್ನು ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಿದೆ. ಕರ್ನಾಟಕ & ಕೇರಳ ರಾಜ್ಯ ಉಸ್ತುವಾರಿ ಆಗಿದ್ದ, ಅನಿಮಲ್ ವೆಲ್​ಫೇರ್​ ಬೋರ್ಡ್ ಆಫ್​ ಇಂಡಿಯಾ ಸದಸ್ಯ ಮೈಸೂರು ನಿವಾಸಿ ಡಾ.ಎಸ್.ಕೆ.ಮಿತ್ತಲ್​ರಿಂದ ಕೇಸ್​ ದಾಖಲಾಗಿತ್ತು. ಈ ಸಂಬಂಧ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಕೋರ್ಟ್ ನೋಟಿಸ್ ನೀಡಿದೆ.

ಪ್ರಕರಣ ಏನು? ಕಸಾಯಿಖಾನೆಗೆ ಭೇಟಿ ಸೇರಿದಂತೆ ಸಾಕಷ್ಟು ಕಾರ್ಯಗಳಲ್ಲಿ ಡಾ.ಎಸ್.ಕೆ.ಮಿತ್ತಲ್ ಸಮರ್ಪಕವಾಗಿ ಕೆಲಸಮಾಡಿಲ್ಲವೆಂದು ಮಿತ್ತಲ್​ ವಿರುದ್ಧ ಮನೇಕಾ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ಅಂದಿನ ಕೇಂದ್ರ ಪರಿಸರ ಸಚಿವರಾಗಿದ್ದ ಡಾ.ಹರ್ಷವರ್ಧನ್​ಗೆ ಮಂಡಳಿ ಸದಸ್ಯರ ವಿರುದ್ಧ ಆರೋಪ ಮಾಡಿ ಪತ್ರ ಬರೆದಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಮನೇಕಾಗೆ ಪತ್ರ ಬರೆದು ಮಿತ್ತಲ್​ ಸ್ಪಷ್ಟನೆ ನೀಡಿದ್ದರು. ಆದ್ರೂ ಮನೇಕಾ, ಮಿತ್ತಲ್ ವಿರುದ್ಧ ಆರೋಪ ಮಾಡುವುದನ್ನು ಮುಂದುವರಿಸಿದ್ದರು.

ಇದರಿಂದ ಬೇಸರಗೊಂಡು ಮಿತ್ತಲ್ ಮೈಸೂರಿನ JMFC ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಡಾ.ಎಸ್.ಕೆ.ಮಿತ್ತಲ್​ರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತು. ನಂತರ ಮಿತ್ತಲ್ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮೊರೆ ಹೋಗಿದ್ದರು. ಮೇಲ್ಮನವಿ ವಿಚಾರಣೆಗೆ ಸ್ವೀಕರಿಸಿ ಮನೇಕಾ ಗಾಂಧಿಗೆ ನೋಟಿಸ್ ಜಾರಿ ಮಾಡಲಾಗಿದೆ. ಟಿವಿ9ಗೆ ಡಾ.ಮಿತ್ತಲ್​ ಪರ ವಕೀಲ ಹೆಚ್.ಬಿ.ಪ್ರಭು ಮಾಹಿತಿ ನೀಡಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವ | ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಸಾಧನೆ ಅಪಾರ: ರಾಮನಾಥ​ ಕೋವಿಂದ್

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್