AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅರಮನೆ ಅಂಗಳದಲ್ಲಿ ಅಂತಿಮ ಹಂತದ ರಿಹರ್ಸಲ್​; ಜಂಬೂಸವಾರಿಯ ತಾಲೀಮಿನ ಸುಂದರ ದೃಶ್ಯಗಳನ್ನು ನೋಡಿ

ಮೈಸೂರಿನಲ್ಲಿ ಜಂಬೂ ಸವಾರಿಗೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಜಪಡೆಗಳು ಸೇರಿದಂತೆ ತಾಲೀಮಿನಲ್ಲಿ ಎಲ್ಲರೂ ಭಾಗಿಯಾಗಿದ್ದು, ಅವುಗಳ ವಿಶೇಷ ವಿಡಿಯೋಗಳು ಇಲ್ಲಿವೆ.

ಮೈಸೂರು: ಅರಮನೆ ಅಂಗಳದಲ್ಲಿ ಅಂತಿಮ ಹಂತದ ರಿಹರ್ಸಲ್​; ಜಂಬೂಸವಾರಿಯ ತಾಲೀಮಿನ ಸುಂದರ ದೃಶ್ಯಗಳನ್ನು ನೋಡಿ
ಮೈಸೂರು ದಸರಾ
TV9 Web
| Updated By: shivaprasad.hs|

Updated on: Oct 13, 2021 | 12:13 PM

Share

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಅರಮನೆಯಲ್ಲಿ ಅಂಗಳದಲ್ಲಿ ಅಂತಿಮ ಜಂಬೂಸವಾರಿ ರಿಹರ್ಸಲ್ ನಡೆಸಲಾಗಿದೆ. ಅ.15ರಂದು ನಡೆಯಲಿರುವ ಜಂಬೂಸವಾರಿ ಮೆರವಣಿಗೆಗೆ ಅಭಿಮನ್ಯುಗೆ ಮರದ ಅಂಬಾರಿ ಹೊರಿಸದೆ ತಾಲೀಮು ನಡೆಸಲಾಗಿದೆ. ಅರಮನೆ ಆವರಣದಲ್ಲಿ ಪುಷ್ಪಾರ್ಚನೆಯನ್ನು ಪೊಲೀಸ್ ಕಮಿಷನರ್ ಚಂದ್ರಗುಪ್ತ ನಡೆಸಿದರು. ಡಿಸಿಪಿ ಗೀತಾ ಪ್ರಸನ್ನ, ಸಿ.ಆರ್.ಡಿಸಿಪಿ ಶಿವರಾಮ್ ಭಾಗಿಯಾಗಿದ್ದರು. ಮೆರವಣಿಗೆಯ ದೂರ ಹಾಗೂ ಸಮಯ ಪಾಲಿಸುವ ಕುರಿತು ರಿಹರ್ಸಲ್‌ ನಡೆಸಲಾಗಿದ್ದು, ಗಜಪಡೆ ಜೊತೆ ಅಶ್ವದಳವೂ ಭಾಗಿಯಾಗಿದೆ. ಅಭಿಮನ್ಯು ಜೊತೆ ಕುಮ್ಕಿ ಆನೆಗಳಾಗಿ ಕಾವೇರಿ, ಚೈತ್ರ ಸಾಥ್ ನೀಡಿದ್ದವು. ಆಕರ್ಷಕ ಪೊಲೀಸ್ ಪಥ ಸಂಚಲನವೂ ಇತ್ತು. ಇದೇ ವೇಳೆ ಕುಶಲತೋಪನ್ನು ಸಿಡಿಸಲಾಯಿತು.

ಅರಮನೆ ಅಂಗಳದಲ್ಲಿ ಅಂತಿಮ ಹಂತದ ದಸರಾ ರಿಹರ್ಸಲ್ ಹೇಗಿದೆ? ಇಲ್ಲಿದೆ ವಿಡಿಯೊ:

‘ದಸರಾ ಮೆರವಣಿಗೆಯಲ್ಲಿ ಗೋಪಾಲಸ್ವಾಮಿ ಆನೆ ಇದ್ದೇ ಇರುತ್ತದೆ’: ಡಿಸಿಎಫ್ ಕರಿಕಾಳನ್: ದಸರಾ ಮೆರವಣಿಗೆಯಲ್ಲಿ ಗೋಪಾಲಸ್ವಾಮಿ ಆನೆ ಇದ್ದೇ ಇರುತ್ತದೆ ಎಂದು ಡಿಸಿಎಫ್ ಕರಿಕಾಳನ್ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ಆನೆ ಬೆದರಿದ ಪ್ರಕರಣದ ಕುರಿತು ಅವರು ಸ್ಪಷ್ಟನೆ ನೀಡಿದ್ದಾರೆ. ಅಲ್ಲಿ ನಡೆದಿರುವ ಘಟನೆ ಪಟಾಕಿ ಮತ್ತು ಕಲರ್ ಪೇಪರ್ ಆನೆಯ ಕಣ್ಣಿಗೆ ಬಿದ್ದುದರಿಂದ ಆಗಿದ್ದು, ಆನೆ ಎರಡು ಹೆಜ್ಜೆ ಹಿಂದೆ ಸರಿದಿದೆ ಅಷ್ಟೆ. ಗೋಪಾಲಸ್ವಾಮಿ ಆನೆಯು ಬಹಳ ಅನುಭವ ಇರುವ ಆನೆಯಾಗಿದ್ದು, 10 ವರ್ಷದಿಂದ ಮೆರವಣಿಗೆಯಲ್ಲಿ ಭಾಗವಹಿಸಿದ್ದಾನೆ. ಒಂದು ಘಟನೆ ಇಟ್ಟುಕೊಂಡು ಆನೆಯನ್ನು ದೂರಲು ಸಾಧ್ಯವಿಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಾರಿಯ ಜಂಬೂ ಸವಾರಿಯಲ್ಲಿ ಆರು ಆನೆಗಳು ಭಾಗವಹಿಸುತ್ತವೆ. ಮೊದಲ ಬಾರಿಗೆ ಅಶ್ವತ್ಥಾಮ ಭಾಗವಹಿಸುತ್ತಾನೆ. ನಗರ ಪ್ರದೇಶದ ವಾತಾವರಣಕ್ಕೆ ಹೊಸ ಆನೆಗಳು ಹೊಂದಿಕೊಂಡಿವೆ. ಗುರುವಾರ ಮಧ್ಯರಾತ್ರಿಯಿಂದಲೆ ಆನೆಗಳಿಗೆ ಅಲಂಕಾರ ಆರಂಭಿಸುತ್ತೇವೆ. ವಿಜಯದಶಮಿದಿನ ಮಧ್ಯಾಹ್ನ2.30 ಕ್ಕೆ ಅಂಬಾರಿ ಕಟ್ಟುವ ಕಾರ್ಯ ಶುರುವಾಗಲಿದೆ ಎಂದು ಕರಿಕಾಳನ್ ತಿಳಿಸಿದ್ದಾರೆ.

ಕರಿಕಾಳನ್ ಮಾತನಾಡಿರುವ ವಿಡಿಯೊ ಇಲ್ಲಿದೆ:

ವಿಜಯದಶಮಿ ದಿನ ಅರಮನೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್: ವಿಜಯದಶಮಿ ದಿನ ಅರಮನೆ ಸುತ್ತಮುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅರಮನೆಯ ಸುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧವಿರುತ್ತದೆ. ಈ ಕುರಿತು ನಾಳೆ(ಗುರುವಾರ) ಪೋಲಿಸ್ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ನಗರ ಪೋಲಿಸ್ ಆಯುಕ್ತ ಡಾ ಚಂದ್ರಗುಪ್ತ ಕೋರಿಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಸಹಕರಿಸುವಂತೆಯೂ ಅವರು ಕೋಡಿಕೊಂಡಿದ್ದಾರೆ.

ಅರಮನೆ ಒಳಗಡೆ ಕೊರೊನಾ ನಿಯಮದ ಅಡಿಯಲ್ಲಿ ಸೂಕ್ತ ಭದ್ರತೆಯೊಂದಿಗೆ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದಿನ ಅಂತಿಮ ಹಂತದ ರಿಹರ್ಸಲ್ ಯಶಸ್ವಿಯಾಗಿ ನಡೆದಿದೆ. ದಸರಾಗೆ ಬೇಕಾದ ಎಲ್ಲಾ ಸಿದ್ದತೆಗಳು ಮುಕ್ತಾಯವಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದ್ಧಾರೆ.

ಅರಮನೆಯಲ್ಲಿ ಪೋಲಿಸ್ ಆಯುಕ್ತ ಡಾ ಚಂದ್ರಗುಪ್ತ ಮಾತನಾಡಿರುವ ವಿಡಿಯೊ ಇಲ್ಲಿದೆ:

ಇದನ್ನೂ ಓದಿ:

ಮೈಸೂರು: ಜಂಬೂಸವಾರಿಯಲ್ಲಿ ಭಾಗವಹಿಸಲು ಕೊವಿಡ್ ವರದಿ ಕಡ್ಡಾಯ; ನೆಗೆಟಿವ್ ಇದ್ದರೆ ಮಾತ್ರ ಅರಮನೆ ಆವರಣಕ್ಕೆ ಎಂಟ್ರಿ

ಕನ್ನಡ ಚಿತ್ರಗಳಿಗೆ ಹೆಚ್ಚಾಯ್ತು ಪೈರಸಿ ಸಮಸ್ಯೆ; ದೂರು ನೀಡಿದ ‘ಶಾರ್ದೂಲ’ ನಿರ್ಮಾಪಕ ರೋಹಿತ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!