AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2022: ಶುಭ ಮೀನ ಲಗ್ನದಲ್ಲಿ ನಾಳೆ ಜಂಬೂ ಸವಾರಿ

ಎರಡು ವರ್ಷ ಕರೋನಾದಿಂದ ಕಳೆಗುಂದಿದ್ದ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಈ ಭಾರಿ ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ.

ಮೈಸೂರು ದಸರಾ 2022: ಶುಭ ಮೀನ ಲಗ್ನದಲ್ಲಿ ನಾಳೆ ಜಂಬೂ ಸವಾರಿ
ಮೈಸೂರು ಜಂಬು ಸವಾರಿ
TV9 Web
| Edited By: |

Updated on:Oct 04, 2022 | 9:12 PM

Share

ಮೈಸೂರು: ಎರಡು ವರ್ಷ ಕರೋನಾದಿಂದ ಕಳೆಗುಂದಿದ್ದ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವ ಈ ಭಾರಿ ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಭಾರೀ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾಕ್ಕೆ ಚಾಲನೆ ನೀಡಿದರು. ಸಾಂಕೃತಿಕ ನಗರಿ ವಿದ್ಯುತ್​ ದೀಪಗಳಿಂದ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮೈಸೂರುಪಾಕ ನಗರಿಯಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ವಿವಿಧ ಸಾಂಕೃತಿಕ, ಮನರಂಜನೆ ಕಾರ್ಯಕ್ರಮಗಳು ನಡೆದವು. ದಸರಾ ಉತ್ಸವ ನಾಳೆ (ಅ.5) ಜಂಬೂ ಸವಾರಿ ಮೂಲಕ ಕೊನೆಗೊಳ್ಳುತ್ತದೆ.

ಜಂಬೂ ಸವಾರಿ

ಜಿಲ್ಲಾಡಳಿತ ನಾಳೆ ನಡೆಯಲಿರುವ ಜಂಬೂಸವಾರಿಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಚಾಮುಂಡಿಬೆಟ್ಟದಲ್ಲಿರುವ ಮಹಿಷಾಸುರ ಮರ್ಧಿನಿ ವಿಗ್ರಹಕ್ಕೆ 9 ದಿನಗಳಕಾಲ ವಿಶೇಷ ಪೂಜೆ ನೆರವೇರಿದ್ದು, ನಾಳೆ ಅಭಿಮನ್ಯು ಅಂಬಾರಿಯನ್ನು ಹೊರಲಿದ್ದಾನೆ. ನಾಳೆ ಚಾಮುಂಡಿ ಬೆಟ್ಟದಿಂದ ವಿಗ್ರಹ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಹೊರಡಲಿದೆ. ಮತ್ತು ಇದೇ ಮೊದಲ ಬಾರಿಗೆ ತಾವರೆಕಟ್ಟೆಯಿಂದ ಅದ್ದೂರಿ ಮೆರವಣಿಗೆ ಮಾಡಲಾಗುತ್ತಿದ್ದು, ಮರವಣೆಗೆಯಲ್ಲಿ ಆನೆ ಕಲಾತಂಡಗಳು ಭಾಗಿಯಾಗಲಿವೆ.

ಈ ಬಾರಿಯೂ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ. ಅಭಿಮನ್ಯು ಈಗಾಗಲೇ ಎರಡು ಬಾರಿ ಅಂಬಾರಿಯನ್ನು ಹೊತ್ತಿದ್ದು, ಮೂರನೇ ಬಾರಿಗೆ ಹೊರಲಿದ್ದಾನೆ. ಅರ್ಜುನ ನಿಶಾನೆ ಆನೆ , ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಸಾಗಲಿವೆ. ಟೋಟಲಿ 9 ಆನೆಗಳು ರಾಜ ಬೀದಗಳಲ್ಲಿ ಜಂಬೂಸವಾರಿಯೊಟ್ಟಿಗೆ ಸಂಚರಿಸಲಿವೆ.

ಮದ್ಯಾಹ್ನ 2.36 ರಿಂದ 02:50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಅವರು ನಂದಿ ಧ್ವಜ ಕಂಬಕ್ಕೆ ಪುಷ್ಪಾರ್ಚನೆ ಮಾಡುತ್ತಾರೆ. ನಂತರ ಪೂಜೆ ಬಳಿಕ ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ ಪ್ರಾರಂಭವಾಗುತ್ತದೆ. ಅರಮನೆಯಿಂದ ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್, ರಸ್ತೆ, ಆಯುರ್ವೇದಿಕ್ ವೃತ್ತ, ಆರ್.ಎಂ.ಸಿ, ತಿಲಕ್ ನಗರ ರಸ್ತೆ ಮೂಲಕ ಜಂಬೂ ಸವಾರಿ ಬನ್ನಿ ಮಂಟಪ ತಲುಪಲಿದೆ.

ಜಂಬೂಸವಾರಿ ಮೆರವಣಿಗೆ ವೇಳೆ 47 ಸ್ತಬ್ಧಚಿತ್ರ ಪ್ರದರ್ಶನ ವಾಗಲಿವೆ. 31 ಜಿಲ್ಲೆಗಳ ಕಲೆ, ಸಾಹಿತ್ಯ, ಇತಿಹಾಸವನ್ನು ಸ್ತಬ್ಧಚಿತ್ರ ಪ್ರತಿಬಿಂಬಿಸಲಿವೆ. ಈ ಬಾರಿ ನಟ ದಿ. ಪುನೀತ್​ ರಾಜಕುಮಾರ್​ ಭಾವಚಿತ್ರ ಇರುವ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

ಸಿಎಂ ಬೊಮ್ಮಾಯಿ ಈಗಾಗಲೇ ಮೈಸೂರಿಗೆ ಆಗಮಿಸಿದ್ದು, ರಾತ್ರಿ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದರೆ. ಸಿಎಂ ಬೊಮ್ಮಾಯಿ ನಾಳೆ ಬೆಳಗ್ಗೆ 9 ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ಭೋಜನ ಮುಗಿಸಿ ಕೆಲಕಾಲ ವಿಶ್ರಾಂತಿ ಮಾಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಸಿಎಂ ನಂದಿಧ್ವಜ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ರಾತ್ರಿ 7.30 ರಿಂದ 9:30ರ ವರೆಗೆ ಬನ್ನಿಮಂಟಪ ಮೈದಾನದಲ್ಲಿ ನಡೆಯುವ ಪಂಜಿನ ಕವಾಯಿತು ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದರೆ.

ಜಂಬೂ ಸವಾರಿ ವೀಕ್ಷಣೆಗೆ 50 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿಐಪಿ ಹಾಗೂ ವಿವಿಐಪಿಗಳಿಗೆ ಅರಮನೆಯ ಮೊದಲನೇ ಮಹಡಿಯ ಪ್ರಾಂಗಣದಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಯದುವೀರ್​, ನ್ಯಾಯಾಧೀಶರು, ರಾಜ್ಯಪಾಲ ಗೆಹ್ಲೋಟ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Tue, 4 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?