AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2022: ಈ ಬಾರಿ ಗೋಲ್ಡ್ ಪಾಸ್ ಇಲ್ಲ- ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ

2022ರ ಮೈಸೂರು ದಸರಾ ಉತ್ಸವಕ್ಕೆ ಗೋಲ್ಡ್ ಪಾಸ್ ಇರುವುದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್  ಹೇಳಿದ್ದಾರೆ.

ಮೈಸೂರು ದಸರಾ 2022: ಈ ಬಾರಿ ಗೋಲ್ಡ್ ಪಾಸ್ ಇಲ್ಲ- ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ
ಸಚಿವ ಎಸ್ ಟಿ ಸೋಮಶೇಖರ್
TV9 Web
| Edited By: |

Updated on:Aug 06, 2022 | 6:17 PM

Share

ಮೈಸೂರು: 2022ರ ಮೈಸೂರು ದಸರಾ (Mysore Dasara) ಉತ್ಸವಕ್ಕೆ ಗೋಲ್ಡ್ ಪಾಸ್ ಇರುವುದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಎಸ್ ಟಿ ಸೋಮಶೇಖರ್ (S T Somashekar) ಹೇಳಿದ್ದಾರೆ. ಗಣ್ಯರು, ವಿದೇಶಿಗರು ಹೆಚ್ಚಾಗಿ ಗೋಲ್ಡ್ ಪಾಸ್ ಅವಲಂಬಿಸಿದ್ದರು. ಒತ್ತಡ ಕಡಿಮೆ ಮಾಡುವ ಸಲುವಾಗಿ ಗೋಲ್ಡ್ ಪಾಸ್​ನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ವಿವಿಐಪಿ ಪಾಸ್ ಹಾಗೂ ಕರ್ತವ್ಯನಿರತ ಪಾಸ್ ಹೊರತುಪಡಿಸಿ ಉಳಿದ ಪಾಸ್‌ಗಳನ್ನು ರದ್ದು ಮಾಡಲು ಚಿಂತನೆ ಮಾಡಲಾಗಿದೆ.

ಪಾಸ್‌ಗಳ ವಿಚಾರವಾಗಿ ಕೆಲವೇ ದಿನಗಳಲ್ಲಿ ಸ್ಪಷ್ಟವಾದ ತೀರ್ಮಾನಕ್ಕೆ ಬರುತ್ತೇವೆ. ಪಾಸ್‌ಗಳಿಂದ ಗೋಲ್‌ಮಾಲ್ ಉಂಟಾಗುವ ಆರೋಪ ಕೇಳಿ ಬಂದಿತ್ತು. ಅಂತಹ ಘಟನೆಗಳಿಗೆ ಈ ಬಾರಿ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಹೇಳಿದರು.

2022ರ ದಸರಾ ಮಹೋತ್ಸವಕ್ಕೆ ನಾಳೆ ಗಜಪಯಣ ಶುರುವಾಗುತ್ತೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಆನೆಗಳನ್ನು ಕರೆತರಲಾಗುವುದು. 2022ರ ದಸರಾ ಮಹೋತ್ಸವಕ್ಕೆ 14 ಆನೆಗಳನ್ನು ಆಯ್ಕೆಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ದಸರಾದಲ್ಲಿ 3 ಆನೆಗಳು ಪಾಲ್ಗೊಳ್ಳಲಿವೆ. ಈ ಬಾರಿ ಚಾಮರಾಜನಗರ ದಸರಾದಲ್ಲೂ ಆನೆಗಳು ಪಾಲ್ಗೊಳ್ಳಲಿವೆ ಎಂದರು.

ದಸರಾ ಉದ್ಘಾಟಕರ ಬಗ್ಗೆ ಸಿಎಂ ಬೊಮ್ಮಾಯಿ ನಿರ್ಧಾರ ಕೈಗೊಳ್ಳುತ್ತಾರೆ. ಐಎಎಸ್​ ಅಧಿಕಾರಿಗಳು ಒಳಗೊಂಡಂತೆ 16 ಕಮಿಟಿ ರಚಿಸಲಾಗಿದೆ. ದಸರಾಗೆ ಜಾಗತಿಕ ಮಟ್ಟದಲ್ಲಿ ಪ್ರಚಾರ ಸಿಗುವಂತೆ ನೋಡಿಕೊಳ್ಳುತ್ತೇವೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಅದ್ಧೂರಿಯಾಗಿ ದಸರಾ ಉತ್ಸವ ಮಾಡುತ್ತೇವೆ.  ಶ್ರೀರಂಗಪಟ್ಟಣ, ಚಾಮರಾಜನಗರ ದಸರಾಗೆ ತಲಾ 1 ಕೋಟಿ  ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಅಭಿಮನ್ಯು ನೇತೃತ್ವದಲ್ಲಿ ಅರಮನೆ ನಗರಿಗೆ ಕಾಲಿಡಲಿದೆ ಗಜಪಡೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಗೆ ಆನೆಗಳ ಪಟ್ಟಿ ಅಂತಿಮಗೊಂಡಿದೆ. ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದ್ದು,  4 ಹೆಣ್ಣಾನೆಗಳು ಸೇರಿದಂತೆ 14 ಅನೆಗಳ ಪಟ್ಟಿ ಅಂತಿಮಗೊಂಡಿದೆ. ಮತ್ತಿಗೋಡು ಆನೆ ಶಿಬಿರದಿಂದ 39 ವರ್ಷದ ಗೋಪಾಲಸ್ವಾಮಿ, 57 ವರ್ಷದ ಅಭಿಮನ್ಯು, 22 ವರ್ಷ ಭೀಮ, 38 ವರ್ಷದ ಮಹೇಂದ್ರ, ಬಳ್ಳೆ ಆನೆ ಶಿಬಿರದಿಂದ 63 ವರ್ಷದ ಅರ್ಜುನ  ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿವೆ.

ದುಬಾರೆ ಆನೆ ಶಿಬಿರದಿಂದ 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ, 40 ವರ್ಷದ ಶ್ರೀರಾಮ, 63 ವರ್ಷದ ವಿಜಯಾ ಆನೆ, ರಾಮಾಪುರ ಆನೆ ಶಿಬಿರದಿಂದ 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮೀ, 18 ವರ್ಷದ ಪಾರ್ಥಸಾರಥಿ ಆನೆ ಆಗಮಿಸಲಿವೆ.

ಆಗಸ್ಟ್ 7 ರಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ದೊಡ್ಡಹೆಜ್ಜೂರು ಗ್ರಾಮದಿಂದ ಗಜಪಯಣ ಆರಂಭವಾಗಲಿದೆ. ಮೊದಲ ತಂಡದಲ್ಲಿ  9 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Sat, 6 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ